AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲೂರಿನ ಬಾಲೆಗೆ ಮನಸೋತ ಇಂಗ್ಲೆಂಡ್ ಯುವಕ: ಭಾನು ಭೂಮಿ ಮೀರಿದ ಪ್ರೀತಿಗೆ ವೇದಿಕೆಯಾಯ್ತು ಹಾಸನ

ಹಾಸನ, ಡಿಸೆಂಬರ್ 15: ಪ್ರೀತಿ ಪ್ರೇಮಕ್ಕೆ ದೇಶ ಭಾಷೆಗಳ ಗಡಿಯಿಲ್ಲ ಎನ್ನುತ್ತಾರೆ. ಹೃದಯದ ಮಾತಿಗೆ ಜಾತಿ ಧರ್ಮಗಳ ಬೇಲಿಯೂ ಅಡ್ಡ ಬರಲ್ಲ ಎಂಬ ಮಾತಿದೆ. ಹಾಸನದಲ್ಲಿ ನಡೆದ ಇದೊಂದು ವಿಶೇಷ ಪ್ರೇಮ ವಿವಾಹವು ಪ್ರೀತಿಯ ಬೆಸುಗೆ ಇದ್ದರೆ ಎಲ್ಲವೂ ಸಾಧ್ಯ ಎಂಬುದನ್ನು ಸಾರಿ ಹೇಳಿದೆ. ಜಾತಿ ಬೇರೆ, ಧರ್ಮ ಬೇರೆ, ದೇಶ ಬೇರೆ ಭಾಷೆ ಬೇರೆ ಆದರೂ ಹೃದಯದ ಮಿಡಿತಕ್ಕೆ ಮನಸೋತ ಈ ಸುಂದರ ಜೋಡಿ ಹಿರಿಯನ್ನು ಒಪ್ಪಿಸಿ ಸತಿ ಪತಿಗಳಾಗಿದ್ದಾರೆ. ಸಾಗರದಾಚೆಯ ಇಂಗ್ಲೆಂಡ್​​ನ ಪ್ರೇಮಿ, ವಿಶ್ವ ವಿಖ್ಯಾತ ಐತಿಹಾಸಿಕ ನಗರಿ ಬೇಲೂರಿನ ಪ್ರೇಯಸಿಯ ಮದುವೆ ಸರಳ ಸಂಭ್ರಮದಿಂದ ಹಿಂದೂ ಸಂಪ್ರದಾಯದಂತೆ ಭಾನುವಾರ ನೆರವೇರಿದೆ.

ಮಂಜುನಾಥ ಕೆಬಿ
| Edited By: |

Updated on: Dec 15, 2025 | 9:38 AM

Share
ಪರಸ್ಪರ ಇಷ್ಟಪಟ್ಟ ಯುವ ಜೋಡಿಗಳು ಮನೆಯವರನ್ನು ಒಪ್ಪಿಸಿ ಪ್ರೀತಿ ಪ್ರೇಮದ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಮೂರು ಗಂಟಿನ ಮೂಲಕ ಬದುಕಿನ ನಂಟು ಬೆಸೆದಿದ್ದಾರೆ. ಸಾಗರದಾಚೆಯ ಪ್ರೀತಿಗೆ ಭಾರತೀಯ ನೆಲದಲ್ಲಿ ಕಂಕಣ ಭಾಗ್ಯ ಕೂಡಿ ಬಂದಿದೆ. ಪ್ರೀತಿ ಪ್ರೇಮಗಳಿಗೆ ದೇಶ ಭಾಷೆಗಳ ಗಡಿಯಿಲ್ಲ, ಹೃದಯದ ಭಾಷೆಗೆ ಜಾತಿ ಧರ್ಮಗಳ ಗಡಿಯಿಲ್ಲ ಎನ್ನೋದು ಮತ್ತೆ ಸಾಬೀತಾಗಿದೆ.

ಪರಸ್ಪರ ಇಷ್ಟಪಟ್ಟ ಯುವ ಜೋಡಿಗಳು ಮನೆಯವರನ್ನು ಒಪ್ಪಿಸಿ ಪ್ರೀತಿ ಪ್ರೇಮದ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಮೂರು ಗಂಟಿನ ಮೂಲಕ ಬದುಕಿನ ನಂಟು ಬೆಸೆದಿದ್ದಾರೆ. ಸಾಗರದಾಚೆಯ ಪ್ರೀತಿಗೆ ಭಾರತೀಯ ನೆಲದಲ್ಲಿ ಕಂಕಣ ಭಾಗ್ಯ ಕೂಡಿ ಬಂದಿದೆ. ಪ್ರೀತಿ ಪ್ರೇಮಗಳಿಗೆ ದೇಶ ಭಾಷೆಗಳ ಗಡಿಯಿಲ್ಲ, ಹೃದಯದ ಭಾಷೆಗೆ ಜಾತಿ ಧರ್ಮಗಳ ಗಡಿಯಿಲ್ಲ ಎನ್ನೋದು ಮತ್ತೆ ಸಾಬೀತಾಗಿದೆ.

1 / 5
ಇಂಗ್ಲೆಂಡ್ ಮೂಲದ ಜಾನ್ ಹಾಗೂ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಇಬ್ಬೀಡು ಗ್ರಾಮದ ಹೇಮಶ್ರೀ ಪಕ್ಕಾ ಹಿಂದೂ ಸಂಪ್ರದಾಯದಂತೆ ಕೈ ಹಿಡಿದಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಂಗ್ಲೆಂಡ್ ನ ಲಿವರ್ ಪೋಲ್​ನಲ್ಲಿ ನೆಲೆಸಿರುವ ಬೇಲೂರಿನ ಯುವತಿ ಹೇಮಶ್ರೀಗೆ ತನ್ನದೇ ಕಚೇರಿಯಲ್ಲಿ ಕೆಲಸ ಮಾಡುವ ಜಾನ್ ಜೊತೆಗೆ ಗೆಳೆತನವಾಗಿದೆ. ಗೆಳೆತನ ಪ್ರೀತಿಯಾಗಿ ಇಬ್ಬರೂ ಪರಸ್ಪರ ಇಷ್ಟಪಟ್ಟು ಮದುವೆಯಾಗುವ ತೀರ್ಮಾನ ಮಾಡಿದ್ದಾರೆ. ಆದ್ರೆ ಜಾತಿ ಬೇರೆ, ಧರ್ಮ ಬೇರೆ, ದೇಶ ಬೇರೆ ಭಾಷೆ ಬೇರೆ, ಮನೆಯವರು ಒಪ್ತಾರಾ ಇಲ್ಲವೋ ಎನ್ನೋ ಆತಂಕಕ್ಕೆ ತೆರೆ ಎಳೆದ ಹೆತ್ತವರು ಮಕ್ಕಳ ಆಸೆಗೆ ನೀರೆರೆದು ಹಿಂದೂ ಸಂಪ್ರದಾಯದಂತೆ ಕಂಕಣ ಭಾಗ್ಯ ಕರುಣಿಸಿದ್ದಾರೆ.

ಇಂಗ್ಲೆಂಡ್ ಮೂಲದ ಜಾನ್ ಹಾಗೂ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಇಬ್ಬೀಡು ಗ್ರಾಮದ ಹೇಮಶ್ರೀ ಪಕ್ಕಾ ಹಿಂದೂ ಸಂಪ್ರದಾಯದಂತೆ ಕೈ ಹಿಡಿದಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಂಗ್ಲೆಂಡ್ ನ ಲಿವರ್ ಪೋಲ್​ನಲ್ಲಿ ನೆಲೆಸಿರುವ ಬೇಲೂರಿನ ಯುವತಿ ಹೇಮಶ್ರೀಗೆ ತನ್ನದೇ ಕಚೇರಿಯಲ್ಲಿ ಕೆಲಸ ಮಾಡುವ ಜಾನ್ ಜೊತೆಗೆ ಗೆಳೆತನವಾಗಿದೆ. ಗೆಳೆತನ ಪ್ರೀತಿಯಾಗಿ ಇಬ್ಬರೂ ಪರಸ್ಪರ ಇಷ್ಟಪಟ್ಟು ಮದುವೆಯಾಗುವ ತೀರ್ಮಾನ ಮಾಡಿದ್ದಾರೆ. ಆದ್ರೆ ಜಾತಿ ಬೇರೆ, ಧರ್ಮ ಬೇರೆ, ದೇಶ ಬೇರೆ ಭಾಷೆ ಬೇರೆ, ಮನೆಯವರು ಒಪ್ತಾರಾ ಇಲ್ಲವೋ ಎನ್ನೋ ಆತಂಕಕ್ಕೆ ತೆರೆ ಎಳೆದ ಹೆತ್ತವರು ಮಕ್ಕಳ ಆಸೆಗೆ ನೀರೆರೆದು ಹಿಂದೂ ಸಂಪ್ರದಾಯದಂತೆ ಕಂಕಣ ಭಾಗ್ಯ ಕರುಣಿಸಿದ್ದಾರೆ.

2 / 5
ಬೇಲೂರು ತಾಲ್ಲೂಕಿನ ಇಬ್ಬೀಡು ಗ್ರಾಮದ ವಿಜಯೇಂದ್ರ ಹಾಗು ಶಕುಂತಲ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಇಂಜಿನಿಯರಿಂಗ್​​ನಲ್ಲಿ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದ ಹೇಮಶ್ರಿ ಕಳೆದ ಎರಡು ವರ್ಷಗಳಿಂದ ಇಂಗ್ಲೆಂಡ್​ನ ಲಿವರ್ ಪೋಲ್​ನಲ್ಲಿರುವ ಕಂಪನಿಯೊಂದರಲ್ಲಿ ಕೆಲಸಮಾಡಿಕೊಂಡಿದ್ದರು. ಇದೇ ಕಂಪನಿಯಲ್ಲಿ ಲೀಗಲ್ ಅಡ್ವೈಸರ್ ಆಗಿರುವ, ಇಂಗ್ಲೆಂಡ್​ನ ಡೇವಿಡ್ ವಾಟ್ಸನ್ ಹಾಗು ಸೂಜಿ ವಾಟ್ಸನ್  ದಂಪತಿಯ ಪುತ್ರ ಜಾನ್ ಪರಸ್ಪರ ಪರಿಚಯವಾಗಿ ಗೆಳೆತನವಾಗಿದೆ. ಗೆಳೆಯನ ಪ್ರೀತಿಗೆ ತಿರುಗಿತ್ತು.

ಬೇಲೂರು ತಾಲ್ಲೂಕಿನ ಇಬ್ಬೀಡು ಗ್ರಾಮದ ವಿಜಯೇಂದ್ರ ಹಾಗು ಶಕುಂತಲ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಇಂಜಿನಿಯರಿಂಗ್​​ನಲ್ಲಿ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದ ಹೇಮಶ್ರಿ ಕಳೆದ ಎರಡು ವರ್ಷಗಳಿಂದ ಇಂಗ್ಲೆಂಡ್​ನ ಲಿವರ್ ಪೋಲ್​ನಲ್ಲಿರುವ ಕಂಪನಿಯೊಂದರಲ್ಲಿ ಕೆಲಸಮಾಡಿಕೊಂಡಿದ್ದರು. ಇದೇ ಕಂಪನಿಯಲ್ಲಿ ಲೀಗಲ್ ಅಡ್ವೈಸರ್ ಆಗಿರುವ, ಇಂಗ್ಲೆಂಡ್​ನ ಡೇವಿಡ್ ವಾಟ್ಸನ್ ಹಾಗು ಸೂಜಿ ವಾಟ್ಸನ್ ದಂಪತಿಯ ಪುತ್ರ ಜಾನ್ ಪರಸ್ಪರ ಪರಿಚಯವಾಗಿ ಗೆಳೆತನವಾಗಿದೆ. ಗೆಳೆಯನ ಪ್ರೀತಿಗೆ ತಿರುಗಿತ್ತು.

3 / 5
ಜಾನ್ ಕುಟುಂಬದವರು ಪಕ್ಕಾ ಹಿಂದೂ ಸಂಪ್ರದಾಯ ಶೈಲಿನಲ್ಲಿ ವಧು ವರರಿಗೆ ವಿವಾಹ ನೆರವೇರಿಸಿದ್ದಾರೆ. ಭಾರತೀಯ ಉಡುಗೆಯಲ್ಲಿ ಕಂಗೊಳಿಸಿದ್ದಾರೆ, ಮಾಂಗಲ್ಯ ಧಾರಣೆ, ಅಶ್ವಿನಿ ನಕ್ಷತ್ರ ದರ್ಶನ, ಸಪ್ತಪತಿ ಹೀಗೆ ಪಕ್ಕಾ ಭಾರತೀಯ ಶೈಲಿಯ ಹಿಂದೂ ಸಂಪ್ರದಾಯದ ಎಲ್ಲಾ ಆಚರಣೆಗಳ ಮೂಲಕ ಮದುವೆ ನೆರವೇರಿದೆ.

ಜಾನ್ ಕುಟುಂಬದವರು ಪಕ್ಕಾ ಹಿಂದೂ ಸಂಪ್ರದಾಯ ಶೈಲಿನಲ್ಲಿ ವಧು ವರರಿಗೆ ವಿವಾಹ ನೆರವೇರಿಸಿದ್ದಾರೆ. ಭಾರತೀಯ ಉಡುಗೆಯಲ್ಲಿ ಕಂಗೊಳಿಸಿದ್ದಾರೆ, ಮಾಂಗಲ್ಯ ಧಾರಣೆ, ಅಶ್ವಿನಿ ನಕ್ಷತ್ರ ದರ್ಶನ, ಸಪ್ತಪತಿ ಹೀಗೆ ಪಕ್ಕಾ ಭಾರತೀಯ ಶೈಲಿಯ ಹಿಂದೂ ಸಂಪ್ರದಾಯದ ಎಲ್ಲಾ ಆಚರಣೆಗಳ ಮೂಲಕ ಮದುವೆ ನೆರವೇರಿದೆ.

4 / 5
ಒಟ್ಟಿನಲ್ಲಿ, ದೇಶ ಯಾವುದಾದರೇನು? ಹೃದಯದಲ್ಲಿ ಪ್ರೀತಿ ಇದ್ದರೆ; ಭಾಷೆ ಯಾವುದಾದರೇನು, ಪರಸ್ಪರ ಸಹಬಾಳ್ವೆಯ ಹೊಂದಾಣಿಕೆ ಇದ್ದರೆ ಎಂಬಂತೆ ಒಂದಾಗಿರುವ ಸಪ್ತ ಸಾಗರದಾಚೆಯ ಜೋಡಿ ಹಕ್ಕಿಗಳ ಬದುಕು ಬಂಗಾರವಾಗಲಿ ಎಂಬುದೇ ಬಂಧುಬಳಗದವರ, ಎಲ್ಲರ ಹಾರೈಕೆ.

ಒಟ್ಟಿನಲ್ಲಿ, ದೇಶ ಯಾವುದಾದರೇನು? ಹೃದಯದಲ್ಲಿ ಪ್ರೀತಿ ಇದ್ದರೆ; ಭಾಷೆ ಯಾವುದಾದರೇನು, ಪರಸ್ಪರ ಸಹಬಾಳ್ವೆಯ ಹೊಂದಾಣಿಕೆ ಇದ್ದರೆ ಎಂಬಂತೆ ಒಂದಾಗಿರುವ ಸಪ್ತ ಸಾಗರದಾಚೆಯ ಜೋಡಿ ಹಕ್ಕಿಗಳ ಬದುಕು ಬಂಗಾರವಾಗಲಿ ಎಂಬುದೇ ಬಂಧುಬಳಗದವರ, ಎಲ್ಲರ ಹಾರೈಕೆ.

5 / 5
ಮಂಜುನಾಥ ಕೆಬಿ
ಮಂಜುನಾಥ ಕೆಬಿ
Follow Us
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!