AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ. 1ರ ಬಳಿಕ ಮಾರುಕಟ್ಟೆ ಕುಸಿಯುತ್ತದಾ? ಬಜೆಟ್​ನಲ್ಲಿ ಸಂಭಾವ್ಯ ಘೋಷಣೆಗಳಿವು…

ನವದೆಹಲಿ, ಜನವರಿ 26: ಈ ಬಾರಿಯ ಬಜೆಟ್​ನಲ್ಲಿ ಇಪಿಎಫ್​ಒ ಪಿಂಚಣಿ ಏರಿಕೆ, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡುವ ಸಾಧ್ಯತೆ ಇದೆ. ಅತಿಶ್ರೀಮಂತರಿಗೆ ಹೆಚ್ಚು ತೆರಿಗೆ ಬೀಳುವ ನಿರೀಕ್ಷೆ ಇದೆ ಎನ್ನುತ್ತಾರೆ ರೈಟ್ ಹೊರೈಜಾನ್​ನ ಫಂಡ್ ಮ್ಯಾನೇಜರ್ ಅನಿಲ್ ರೆಗೋ; ಹಾಗೆಯೇ, ಬಜೆಟ್ ಬಳಿಕ ಮಾರುಕಟ್ಟೆ ಬೀಳುವ ಸಾಧ್ಯತೆಯನ್ನು ಅವರು ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಒಂದು ವರದಿ:

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 26, 2025 | 1:04 PM

Share
ಕಳೆದ ಆರು ತಿಂಗಳಿಂದಲೂ ಸಾಕಷ್ಟು ಅಲುಗಾಟದಲ್ಲಿರುವ ಷೇರು ಮಾರುಕಟ್ಟೆ ಫೆಬ್ರುವರಿ 1ರ ಬಜೆಟ್ ಬಳಿಕ ತೀವ್ರ ರೀತಿಯಲ್ಲಿ ಕುಸಿತ ಕಾಣಬಹುದು ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ವಿಚಾರದ ಬಗ್ಗೆ ಮಾತನಾಡಿರುವ ರೈಟ್ ಹೊರೈಜಾನ್ಸ್​ನ ಸಂಸ್ಥಾಪಕ ಮತ್ತು ಫಂಡ್ ಮ್ಯಾನೇಜರ್ ಆಗಿರುವ ಅನಿಲ್ ರೆಗೋ ಅವರ ಪ್ರಕಾರ, ಬಜೆಟ್ ಬಳಿಕ ಮಾರ್ಕೆಟ್ ಕರೆಕ್ಷನ್ ಸಣ್ಣ ಮಟ್ಟದಲ್ಲಿ ಆಗಬಹುದು. ಆದರೆ, ದೊಡ್ಡ ಮಟ್ಟದಲ್ಲಿ ಮಾರುಕಟ್ಟೆ ಕುಸಿಯುವ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ.

ಕಳೆದ ಆರು ತಿಂಗಳಿಂದಲೂ ಸಾಕಷ್ಟು ಅಲುಗಾಟದಲ್ಲಿರುವ ಷೇರು ಮಾರುಕಟ್ಟೆ ಫೆಬ್ರುವರಿ 1ರ ಬಜೆಟ್ ಬಳಿಕ ತೀವ್ರ ರೀತಿಯಲ್ಲಿ ಕುಸಿತ ಕಾಣಬಹುದು ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ವಿಚಾರದ ಬಗ್ಗೆ ಮಾತನಾಡಿರುವ ರೈಟ್ ಹೊರೈಜಾನ್ಸ್​ನ ಸಂಸ್ಥಾಪಕ ಮತ್ತು ಫಂಡ್ ಮ್ಯಾನೇಜರ್ ಆಗಿರುವ ಅನಿಲ್ ರೆಗೋ ಅವರ ಪ್ರಕಾರ, ಬಜೆಟ್ ಬಳಿಕ ಮಾರ್ಕೆಟ್ ಕರೆಕ್ಷನ್ ಸಣ್ಣ ಮಟ್ಟದಲ್ಲಿ ಆಗಬಹುದು. ಆದರೆ, ದೊಡ್ಡ ಮಟ್ಟದಲ್ಲಿ ಮಾರುಕಟ್ಟೆ ಕುಸಿಯುವ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ.

1 / 5
ಷೇರು ಮಾರುಕಟ್ಟೆ ಈಗಾಗಲೇ ಸಾಕಷ್ಟು ಪ್ರತಿರೋಧ ತೋರಿದೆ. ಹೂಡಿಕೆದಾರರು ಸಕಾರಾತ್ಮಕವಾಗಿ ಭಾಗಿಯಾಗುತ್ತಿದ್ದಾರೆ. ಮೂಲಭೂತ ಅಂಶಗಳು ಉತ್ತಮಗೊಳ್ಳುತ್ತಿವೆ. ಹಲವು ಷೇರುಗಳ ಮೌಲ್ಯ ಅಧಿಕ ಮಟ್ಟದಲ್ಲಿದ್ದರೂ, ಅತಿರೇಕ ಎನಿಸುವ ಮಟ್ಟದಲ್ಲಿಲ್ಲ.

ಷೇರು ಮಾರುಕಟ್ಟೆ ಈಗಾಗಲೇ ಸಾಕಷ್ಟು ಪ್ರತಿರೋಧ ತೋರಿದೆ. ಹೂಡಿಕೆದಾರರು ಸಕಾರಾತ್ಮಕವಾಗಿ ಭಾಗಿಯಾಗುತ್ತಿದ್ದಾರೆ. ಮೂಲಭೂತ ಅಂಶಗಳು ಉತ್ತಮಗೊಳ್ಳುತ್ತಿವೆ. ಹಲವು ಷೇರುಗಳ ಮೌಲ್ಯ ಅಧಿಕ ಮಟ್ಟದಲ್ಲಿದ್ದರೂ, ಅತಿರೇಕ ಎನಿಸುವ ಮಟ್ಟದಲ್ಲಿಲ್ಲ.

2 / 5
ಕಾರ್ಪೊರೇಟ್ ಸಂಸ್ಥೆಗಳ ಆದಾಯ ಉತ್ತಮವಾಗಿಯೇ ಇದೆ. ವಿದೇಶೀ ಸಾಂಸ್ಥಿಕ ಹೂಡಿಕೆದಾರರ ಉಪಸ್ಥಿತಿ ಕಡಿಮೆ. ಇದು ಮಾರುಕಟ್ಟೆಯ ಆರೋಗ್ಯ ಸ್ಥಿತಿಗೆ ದ್ಯೋತಕವಾಗಿದೆ. ಕಿರು ಅವಧಿಯಲ್ಲಿ ಮಾರುಕಟ್ಟೆಯಲ್ಲಿ ವಿಚಲನೆಗಳಾದರೂ, ಬಜೆಟ್​ನಲ್ಲಿ ಹಣಕಾಸು ಶಿಸ್ತು ಕಾಯ್ದುಕೊಂಡರೆ ಮತ್ತು ಇನ್​ಫ್ರಾಸ್ಟ್ರಕ್ಚರ್​​ಗಳಲ್ಲಿ  ಹೂಡಿಕೆಗೆ ಒತ್ತುಕೊಟ್ಟರೆ ದೀರ್ಘಾವಧಿಯಲ್ಲಿ ಮಾರುಕಟ್ಟೆ ಸರಾಗವಾಗಿರುತ್ತದೆ ಎನ್ನುವುದು ಅನಿಲ್ ರೆಗೋ ಅನಿಸಿಕೆ.

ಕಾರ್ಪೊರೇಟ್ ಸಂಸ್ಥೆಗಳ ಆದಾಯ ಉತ್ತಮವಾಗಿಯೇ ಇದೆ. ವಿದೇಶೀ ಸಾಂಸ್ಥಿಕ ಹೂಡಿಕೆದಾರರ ಉಪಸ್ಥಿತಿ ಕಡಿಮೆ. ಇದು ಮಾರುಕಟ್ಟೆಯ ಆರೋಗ್ಯ ಸ್ಥಿತಿಗೆ ದ್ಯೋತಕವಾಗಿದೆ. ಕಿರು ಅವಧಿಯಲ್ಲಿ ಮಾರುಕಟ್ಟೆಯಲ್ಲಿ ವಿಚಲನೆಗಳಾದರೂ, ಬಜೆಟ್​ನಲ್ಲಿ ಹಣಕಾಸು ಶಿಸ್ತು ಕಾಯ್ದುಕೊಂಡರೆ ಮತ್ತು ಇನ್​ಫ್ರಾಸ್ಟ್ರಕ್ಚರ್​​ಗಳಲ್ಲಿ ಹೂಡಿಕೆಗೆ ಒತ್ತುಕೊಟ್ಟರೆ ದೀರ್ಘಾವಧಿಯಲ್ಲಿ ಮಾರುಕಟ್ಟೆ ಸರಾಗವಾಗಿರುತ್ತದೆ ಎನ್ನುವುದು ಅನಿಲ್ ರೆಗೋ ಅನಿಸಿಕೆ.

3 / 5
ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿರುವುದು ಭಾರತದ ಮಾರುಕಟ್ಟೆಯಲ್ಲಿ ಅನಿಶ್ಚಿತ ಪರಿಣಾಮ ತರುವ ಸಾಧ್ಯತೆ ಇದೆ. ಆದರೆ, ಭಾರತದಲ್ಲಿ ದೇಶೀಯವಾಗಿ ಉತ್ತಮವಾಗಿರುವ ಅಂಶಗಳು ಬಾಹ್ಯ ಆಘಾತಗಳನ್ನು ನಿಷ್ಕ್ರಿಯಗೊಳಿಸಬಲ್ಲುವು. ಅಮೆರಿಕದ ನೀತಿಗಳು ದೀರ್ಘಾವಧಿಯಲ್ಲಿ ಭಾರತದ ಮೇಲೆ ಬೀರಬಹುದಾದ ಪರಿಣಾಮ ಕಡಿಮೆಯೇ ಇರುತ್ತದೆ ಎನ್ನಲಾಗಿದೆ.

ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿರುವುದು ಭಾರತದ ಮಾರುಕಟ್ಟೆಯಲ್ಲಿ ಅನಿಶ್ಚಿತ ಪರಿಣಾಮ ತರುವ ಸಾಧ್ಯತೆ ಇದೆ. ಆದರೆ, ಭಾರತದಲ್ಲಿ ದೇಶೀಯವಾಗಿ ಉತ್ತಮವಾಗಿರುವ ಅಂಶಗಳು ಬಾಹ್ಯ ಆಘಾತಗಳನ್ನು ನಿಷ್ಕ್ರಿಯಗೊಳಿಸಬಲ್ಲುವು. ಅಮೆರಿಕದ ನೀತಿಗಳು ದೀರ್ಘಾವಧಿಯಲ್ಲಿ ಭಾರತದ ಮೇಲೆ ಬೀರಬಹುದಾದ ಪರಿಣಾಮ ಕಡಿಮೆಯೇ ಇರುತ್ತದೆ ಎನ್ನಲಾಗಿದೆ.

4 / 5
ಇಪಿಎಫ್​ಒ ಕನಿಷ್ಠ ಪಿಂಚಣಿಯನ್ನು 1,000 ರೂನಿಂದ 5,000 ರೂಗೆ ಏರಿಸಬಹುದು. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 10 ಲಕ್ಷ ರೂಗೆ ಏರಿಸಬಹುದು. ಅತಿ ಶ್ರೀಮಂತರಿಗೆ ಹೆಚ್ಚುವರಿ ಶೇ. 2ರಷ್ಟು ತೆರಿಗೆ ಹಾಕಬಹುದು. ಆ ಹಣವನ್ನು ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಬಳಸಬಹುದು ಎಂದು ರೆಗೋ ಅಭಿಪ್ರಾಯಪಟ್ಟಿದ್ದಾರೆ.

ಇಪಿಎಫ್​ಒ ಕನಿಷ್ಠ ಪಿಂಚಣಿಯನ್ನು 1,000 ರೂನಿಂದ 5,000 ರೂಗೆ ಏರಿಸಬಹುದು. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 10 ಲಕ್ಷ ರೂಗೆ ಏರಿಸಬಹುದು. ಅತಿ ಶ್ರೀಮಂತರಿಗೆ ಹೆಚ್ಚುವರಿ ಶೇ. 2ರಷ್ಟು ತೆರಿಗೆ ಹಾಕಬಹುದು. ಆ ಹಣವನ್ನು ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಬಳಸಬಹುದು ಎಂದು ರೆಗೋ ಅಭಿಪ್ರಾಯಪಟ್ಟಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್