ಫೆ. 1ರ ಬಳಿಕ ಮಾರುಕಟ್ಟೆ ಕುಸಿಯುತ್ತದಾ? ಬಜೆಟ್​ನಲ್ಲಿ ಸಂಭಾವ್ಯ ಘೋಷಣೆಗಳಿವು…

ನವದೆಹಲಿ, ಜನವರಿ 26: ಈ ಬಾರಿಯ ಬಜೆಟ್​ನಲ್ಲಿ ಇಪಿಎಫ್​ಒ ಪಿಂಚಣಿ ಏರಿಕೆ, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡುವ ಸಾಧ್ಯತೆ ಇದೆ. ಅತಿಶ್ರೀಮಂತರಿಗೆ ಹೆಚ್ಚು ತೆರಿಗೆ ಬೀಳುವ ನಿರೀಕ್ಷೆ ಇದೆ ಎನ್ನುತ್ತಾರೆ ರೈಟ್ ಹೊರೈಜಾನ್​ನ ಫಂಡ್ ಮ್ಯಾನೇಜರ್ ಅನಿಲ್ ರೆಗೋ; ಹಾಗೆಯೇ, ಬಜೆಟ್ ಬಳಿಕ ಮಾರುಕಟ್ಟೆ ಬೀಳುವ ಸಾಧ್ಯತೆಯನ್ನು ಅವರು ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಒಂದು ವರದಿ:

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 26, 2025 | 1:04 PM

ಕಳೆದ ಆರು ತಿಂಗಳಿಂದಲೂ ಸಾಕಷ್ಟು ಅಲುಗಾಟದಲ್ಲಿರುವ ಷೇರು ಮಾರುಕಟ್ಟೆ ಫೆಬ್ರುವರಿ 1ರ ಬಜೆಟ್ ಬಳಿಕ ತೀವ್ರ ರೀತಿಯಲ್ಲಿ ಕುಸಿತ ಕಾಣಬಹುದು ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ವಿಚಾರದ ಬಗ್ಗೆ ಮಾತನಾಡಿರುವ ರೈಟ್ ಹೊರೈಜಾನ್ಸ್​ನ ಸಂಸ್ಥಾಪಕ ಮತ್ತು ಫಂಡ್ ಮ್ಯಾನೇಜರ್ ಆಗಿರುವ ಅನಿಲ್ ರೆಗೋ ಅವರ ಪ್ರಕಾರ, ಬಜೆಟ್ ಬಳಿಕ ಮಾರ್ಕೆಟ್ ಕರೆಕ್ಷನ್ ಸಣ್ಣ ಮಟ್ಟದಲ್ಲಿ ಆಗಬಹುದು. ಆದರೆ, ದೊಡ್ಡ ಮಟ್ಟದಲ್ಲಿ ಮಾರುಕಟ್ಟೆ ಕುಸಿಯುವ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ.

ಕಳೆದ ಆರು ತಿಂಗಳಿಂದಲೂ ಸಾಕಷ್ಟು ಅಲುಗಾಟದಲ್ಲಿರುವ ಷೇರು ಮಾರುಕಟ್ಟೆ ಫೆಬ್ರುವರಿ 1ರ ಬಜೆಟ್ ಬಳಿಕ ತೀವ್ರ ರೀತಿಯಲ್ಲಿ ಕುಸಿತ ಕಾಣಬಹುದು ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ವಿಚಾರದ ಬಗ್ಗೆ ಮಾತನಾಡಿರುವ ರೈಟ್ ಹೊರೈಜಾನ್ಸ್​ನ ಸಂಸ್ಥಾಪಕ ಮತ್ತು ಫಂಡ್ ಮ್ಯಾನೇಜರ್ ಆಗಿರುವ ಅನಿಲ್ ರೆಗೋ ಅವರ ಪ್ರಕಾರ, ಬಜೆಟ್ ಬಳಿಕ ಮಾರ್ಕೆಟ್ ಕರೆಕ್ಷನ್ ಸಣ್ಣ ಮಟ್ಟದಲ್ಲಿ ಆಗಬಹುದು. ಆದರೆ, ದೊಡ್ಡ ಮಟ್ಟದಲ್ಲಿ ಮಾರುಕಟ್ಟೆ ಕುಸಿಯುವ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ.

1 / 5
ಷೇರು ಮಾರುಕಟ್ಟೆ ಈಗಾಗಲೇ ಸಾಕಷ್ಟು ಪ್ರತಿರೋಧ ತೋರಿದೆ. ಹೂಡಿಕೆದಾರರು ಸಕಾರಾತ್ಮಕವಾಗಿ ಭಾಗಿಯಾಗುತ್ತಿದ್ದಾರೆ. ಮೂಲಭೂತ ಅಂಶಗಳು ಉತ್ತಮಗೊಳ್ಳುತ್ತಿವೆ. ಹಲವು ಷೇರುಗಳ ಮೌಲ್ಯ ಅಧಿಕ ಮಟ್ಟದಲ್ಲಿದ್ದರೂ, ಅತಿರೇಕ ಎನಿಸುವ ಮಟ್ಟದಲ್ಲಿಲ್ಲ.

ಷೇರು ಮಾರುಕಟ್ಟೆ ಈಗಾಗಲೇ ಸಾಕಷ್ಟು ಪ್ರತಿರೋಧ ತೋರಿದೆ. ಹೂಡಿಕೆದಾರರು ಸಕಾರಾತ್ಮಕವಾಗಿ ಭಾಗಿಯಾಗುತ್ತಿದ್ದಾರೆ. ಮೂಲಭೂತ ಅಂಶಗಳು ಉತ್ತಮಗೊಳ್ಳುತ್ತಿವೆ. ಹಲವು ಷೇರುಗಳ ಮೌಲ್ಯ ಅಧಿಕ ಮಟ್ಟದಲ್ಲಿದ್ದರೂ, ಅತಿರೇಕ ಎನಿಸುವ ಮಟ್ಟದಲ್ಲಿಲ್ಲ.

2 / 5
ಕಾರ್ಪೊರೇಟ್ ಸಂಸ್ಥೆಗಳ ಆದಾಯ ಉತ್ತಮವಾಗಿಯೇ ಇದೆ. ವಿದೇಶೀ ಸಾಂಸ್ಥಿಕ ಹೂಡಿಕೆದಾರರ ಉಪಸ್ಥಿತಿ ಕಡಿಮೆ. ಇದು ಮಾರುಕಟ್ಟೆಯ ಆರೋಗ್ಯ ಸ್ಥಿತಿಗೆ ದ್ಯೋತಕವಾಗಿದೆ. ಕಿರು ಅವಧಿಯಲ್ಲಿ ಮಾರುಕಟ್ಟೆಯಲ್ಲಿ ವಿಚಲನೆಗಳಾದರೂ, ಬಜೆಟ್​ನಲ್ಲಿ ಹಣಕಾಸು ಶಿಸ್ತು ಕಾಯ್ದುಕೊಂಡರೆ ಮತ್ತು ಇನ್​ಫ್ರಾಸ್ಟ್ರಕ್ಚರ್​​ಗಳಲ್ಲಿ  ಹೂಡಿಕೆಗೆ ಒತ್ತುಕೊಟ್ಟರೆ ದೀರ್ಘಾವಧಿಯಲ್ಲಿ ಮಾರುಕಟ್ಟೆ ಸರಾಗವಾಗಿರುತ್ತದೆ ಎನ್ನುವುದು ಅನಿಲ್ ರೆಗೋ ಅನಿಸಿಕೆ.

ಕಾರ್ಪೊರೇಟ್ ಸಂಸ್ಥೆಗಳ ಆದಾಯ ಉತ್ತಮವಾಗಿಯೇ ಇದೆ. ವಿದೇಶೀ ಸಾಂಸ್ಥಿಕ ಹೂಡಿಕೆದಾರರ ಉಪಸ್ಥಿತಿ ಕಡಿಮೆ. ಇದು ಮಾರುಕಟ್ಟೆಯ ಆರೋಗ್ಯ ಸ್ಥಿತಿಗೆ ದ್ಯೋತಕವಾಗಿದೆ. ಕಿರು ಅವಧಿಯಲ್ಲಿ ಮಾರುಕಟ್ಟೆಯಲ್ಲಿ ವಿಚಲನೆಗಳಾದರೂ, ಬಜೆಟ್​ನಲ್ಲಿ ಹಣಕಾಸು ಶಿಸ್ತು ಕಾಯ್ದುಕೊಂಡರೆ ಮತ್ತು ಇನ್​ಫ್ರಾಸ್ಟ್ರಕ್ಚರ್​​ಗಳಲ್ಲಿ ಹೂಡಿಕೆಗೆ ಒತ್ತುಕೊಟ್ಟರೆ ದೀರ್ಘಾವಧಿಯಲ್ಲಿ ಮಾರುಕಟ್ಟೆ ಸರಾಗವಾಗಿರುತ್ತದೆ ಎನ್ನುವುದು ಅನಿಲ್ ರೆಗೋ ಅನಿಸಿಕೆ.

3 / 5
ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿರುವುದು ಭಾರತದ ಮಾರುಕಟ್ಟೆಯಲ್ಲಿ ಅನಿಶ್ಚಿತ ಪರಿಣಾಮ ತರುವ ಸಾಧ್ಯತೆ ಇದೆ. ಆದರೆ, ಭಾರತದಲ್ಲಿ ದೇಶೀಯವಾಗಿ ಉತ್ತಮವಾಗಿರುವ ಅಂಶಗಳು ಬಾಹ್ಯ ಆಘಾತಗಳನ್ನು ನಿಷ್ಕ್ರಿಯಗೊಳಿಸಬಲ್ಲುವು. ಅಮೆರಿಕದ ನೀತಿಗಳು ದೀರ್ಘಾವಧಿಯಲ್ಲಿ ಭಾರತದ ಮೇಲೆ ಬೀರಬಹುದಾದ ಪರಿಣಾಮ ಕಡಿಮೆಯೇ ಇರುತ್ತದೆ ಎನ್ನಲಾಗಿದೆ.

ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿರುವುದು ಭಾರತದ ಮಾರುಕಟ್ಟೆಯಲ್ಲಿ ಅನಿಶ್ಚಿತ ಪರಿಣಾಮ ತರುವ ಸಾಧ್ಯತೆ ಇದೆ. ಆದರೆ, ಭಾರತದಲ್ಲಿ ದೇಶೀಯವಾಗಿ ಉತ್ತಮವಾಗಿರುವ ಅಂಶಗಳು ಬಾಹ್ಯ ಆಘಾತಗಳನ್ನು ನಿಷ್ಕ್ರಿಯಗೊಳಿಸಬಲ್ಲುವು. ಅಮೆರಿಕದ ನೀತಿಗಳು ದೀರ್ಘಾವಧಿಯಲ್ಲಿ ಭಾರತದ ಮೇಲೆ ಬೀರಬಹುದಾದ ಪರಿಣಾಮ ಕಡಿಮೆಯೇ ಇರುತ್ತದೆ ಎನ್ನಲಾಗಿದೆ.

4 / 5
ಇಪಿಎಫ್​ಒ ಕನಿಷ್ಠ ಪಿಂಚಣಿಯನ್ನು 1,000 ರೂನಿಂದ 5,000 ರೂಗೆ ಏರಿಸಬಹುದು. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 10 ಲಕ್ಷ ರೂಗೆ ಏರಿಸಬಹುದು. ಅತಿ ಶ್ರೀಮಂತರಿಗೆ ಹೆಚ್ಚುವರಿ ಶೇ. 2ರಷ್ಟು ತೆರಿಗೆ ಹಾಕಬಹುದು. ಆ ಹಣವನ್ನು ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಬಳಸಬಹುದು ಎಂದು ರೆಗೋ ಅಭಿಪ್ರಾಯಪಟ್ಟಿದ್ದಾರೆ.

ಇಪಿಎಫ್​ಒ ಕನಿಷ್ಠ ಪಿಂಚಣಿಯನ್ನು 1,000 ರೂನಿಂದ 5,000 ರೂಗೆ ಏರಿಸಬಹುದು. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 10 ಲಕ್ಷ ರೂಗೆ ಏರಿಸಬಹುದು. ಅತಿ ಶ್ರೀಮಂತರಿಗೆ ಹೆಚ್ಚುವರಿ ಶೇ. 2ರಷ್ಟು ತೆರಿಗೆ ಹಾಕಬಹುದು. ಆ ಹಣವನ್ನು ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಬಳಸಬಹುದು ಎಂದು ರೆಗೋ ಅಭಿಪ್ರಾಯಪಟ್ಟಿದ್ದಾರೆ.

5 / 5
Follow us
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಸ್ವಂತ ಖರ್ಚಿನಲ್ಲಿ ದೆಹಲಿ ಬರುತ್ತೇವೆ, ಸುಂಕ ವಸೂಲಿ ಎಲ್ಲಿಂದ ಬಂತು?ಯತ್ನಾಳ್
ಸ್ವಂತ ಖರ್ಚಿನಲ್ಲಿ ದೆಹಲಿ ಬರುತ್ತೇವೆ, ಸುಂಕ ವಸೂಲಿ ಎಲ್ಲಿಂದ ಬಂತು?ಯತ್ನಾಳ್
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಬೆಂಗಳೂರು ಏರ್​ ಶೋ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​
ಬೆಂಗಳೂರು ಏರ್​ ಶೋ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​
ಏರ್ ಶೋಗೆ ವೀಕ್ಷಿಸಲು ತೆರಳಿರುವವರು ಟ್ರಾಫಿಕ್ ನಿರ್ಬಂಧಗಳನ್ನು ಗಮನಿಸಿ
ಏರ್ ಶೋಗೆ ವೀಕ್ಷಿಸಲು ತೆರಳಿರುವವರು ಟ್ರಾಫಿಕ್ ನಿರ್ಬಂಧಗಳನ್ನು ಗಮನಿಸಿ
ಯುವಜನಾಂಗದಲ್ಲಿ ಜಾತ್ರೆ, ಊರಹಬ್ಬಗಳ ಮೇಲಿನ ಆಸಕ್ತಿ ಕಮ್ಮಿಯಾಗುತ್ತಿದೆ
ಯುವಜನಾಂಗದಲ್ಲಿ ಜಾತ್ರೆ, ಊರಹಬ್ಬಗಳ ಮೇಲಿನ ಆಸಕ್ತಿ ಕಮ್ಮಿಯಾಗುತ್ತಿದೆ
Aero India 2025: ಬೆಂಗಳೂರು ಏರ್​ ಶೋ ಲೈವ್​, ಲೋಹದ ಹಕ್ಕಿಗಳ ಚಮತ್ಕಾರ
Aero India 2025: ಬೆಂಗಳೂರು ಏರ್​ ಶೋ ಲೈವ್​, ಲೋಹದ ಹಕ್ಕಿಗಳ ಚಮತ್ಕಾರ
ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ