Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಗೆ ಕೃಷಿ ಖಾತೆ ಮಿಸ್​: ಜೋಶಿ, ಶೋಭಾ, ಸೋಮಣ್ಣಗೆ ಯಾವ ಖಾತೆ? ಇಲ್ಲಿದೆ ವಿವರ

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ನಿನ್ನೆ(ಜೂನ್ 09) ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್​ ಸೇರಿದಂತೆ ಐವರು ಮೋದಿ ಸಂಪುಟದಲ್ಲಿದ್ದಾರೆ. ಇದೀಗ ಅವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಎಚ್​ಡಿ ಕುಮಾರಸ್ವಾಮಿಗೆ ಬಯಸಿದ್ದ ಖಾತೆ ಮಿಸ್ ಆಗಿದೆ. ಇದರಿಂದ ಎಚ್​​ಡಿಕೆಗೆ ನಿರಾಸೆಯಾಗಿದೆ. ಇನ್ನು ಕರ್ನಾಟಕದಿಂದ ಕ್ಯಾಬಿನೆಟ್ ಸಚಿವರಾಗಿರುವ ಪ್ರಹ್ಲಾದ್ ಜೋಶಿ, ನಿರ್ಮಾಲಾ ಸೀತಾರಾಮನ್, ರಾಜ್ಯ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಅವರಿಗೆ ಯಾವ-ಯಾವ ಖಾತೆ ನೀಡಲಾಗಿದೆ ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on:Jun 10, 2024 | 8:12 PM

ನರೇಂದ್ರ ಮೋದಿ ಸಂಪುಟದಲ್ಲಿ ಈ ಬಾರಿ ಕರ್ನಾಟಕದಿಂದ ಆಯ್ಕೆಯಾದ ಐವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ. ಮೂವರಿಗೆ ಕ್ಯಾಬಿನೆಟ್​ ದರ್ಜೆ ಸಚಿವ ಸ್ಥಾನ ಸಿಕ್ಕರೆ, ಇನ್ನುಳಿದ ಇಬ್ಬರಿಗೆ ರಾಜ್ಯ ಖಾತೆ ಸಿಕ್ಕಿದೆ.

ನರೇಂದ್ರ ಮೋದಿ ಸಂಪುಟದಲ್ಲಿ ಈ ಬಾರಿ ಕರ್ನಾಟಕದಿಂದ ಆಯ್ಕೆಯಾದ ಐವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ. ಮೂವರಿಗೆ ಕ್ಯಾಬಿನೆಟ್​ ದರ್ಜೆ ಸಚಿವ ಸ್ಥಾನ ಸಿಕ್ಕರೆ, ಇನ್ನುಳಿದ ಇಬ್ಬರಿಗೆ ರಾಜ್ಯ ಖಾತೆ ಸಿಕ್ಕಿದೆ.

1 / 7
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್, ಧಾರವಾಡದ ಪ್ರಲ್ಹಾದ್ ಜೋಶಿ, ಮಂಡ್ಯದ ಎಚ್​ಡಿ ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್​ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ಬೆಂಗಳೂರು ಉತ್ತರ ಕ್ಷೇತ್ರದ ಶೋಭಾ ಕರಂದ್ಲಾಜೆ ಹಾಗೂ ತುಮಕೂರು ಕ್ಷೇತ್ರದ ವಿ ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಚಿವ ಸ್ಥಾನ ದೊರೆತಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್, ಧಾರವಾಡದ ಪ್ರಲ್ಹಾದ್ ಜೋಶಿ, ಮಂಡ್ಯದ ಎಚ್​ಡಿ ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್​ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ಬೆಂಗಳೂರು ಉತ್ತರ ಕ್ಷೇತ್ರದ ಶೋಭಾ ಕರಂದ್ಲಾಜೆ ಹಾಗೂ ತುಮಕೂರು ಕ್ಷೇತ್ರದ ವಿ ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಚಿವ ಸ್ಥಾನ ದೊರೆತಿದೆ.

2 / 7
ಮಂಡ್ಯದಿಂದ ಗೆದ್ದು ಸಂಸತ್ ಪ್ರವೇಶ ಮಾಡಿರುವ ಜೆಡಿಎಸ್​-ಬಿಜೆಪಿ ಮೈತ್ರಿ ಸಂಸದ ಎಚ್​ಡಿ ಕುಮಾರಸ್ವಾಮಿ ಅವರು ಮೋದಿ ಸರ್ಕಾರದಲ್ಲಿ ಕ್ಯಾಬಿನೆಟ್​ ದರ್ಜೆ ಸಚಿವರಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಬಯಸಿದ್ದ ಖಾತೆ ಮಿಸ್ ಆಗಿದೆ. ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದ ಕುಮಾರಸ್ವಾಮಿ ಅವರಿಗೆ  ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ. ಇನ್ನು ಕೃಷಿ ಖಾತೆ ಶಿವರಾಜ್ ಸಿಂಗ್ ಚೌಹಾಣ್ ಪಾಲಾಗಿದೆ.

ಮಂಡ್ಯದಿಂದ ಗೆದ್ದು ಸಂಸತ್ ಪ್ರವೇಶ ಮಾಡಿರುವ ಜೆಡಿಎಸ್​-ಬಿಜೆಪಿ ಮೈತ್ರಿ ಸಂಸದ ಎಚ್​ಡಿ ಕುಮಾರಸ್ವಾಮಿ ಅವರು ಮೋದಿ ಸರ್ಕಾರದಲ್ಲಿ ಕ್ಯಾಬಿನೆಟ್​ ದರ್ಜೆ ಸಚಿವರಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಬಯಸಿದ್ದ ಖಾತೆ ಮಿಸ್ ಆಗಿದೆ. ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ. ಇನ್ನು ಕೃಷಿ ಖಾತೆ ಶಿವರಾಜ್ ಸಿಂಗ್ ಚೌಹಾಣ್ ಪಾಲಾಗಿದೆ.

3 / 7
ಕರ್ನಾಟಕ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರೂ ಸಹ ಎರಡನೇ ಬಾರಿಗೆ ಮೋದಿ ಸಂಪುಟದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದು, ಈ ಬಾರಿಯೂ ಸಹ ಅವರಿಗೆ ಹಣಕಾಸು ಇಲಾಖೆ ನೀಡಲಾಗಿದೆ. ಕಳೆದ ಬಾರಿ ಸರ್ಕಾರದಲ್ಲೂ ನಿರ್ಮಲಾ ಸೀತಾರಾಮಾನ್ ಅವರು ಹಣಕಾಸು ಇಲಾಖೆ ಖಾತೆ ಸಚಿವೆಯಾಗಿದ್ದರು.

ಕರ್ನಾಟಕ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರೂ ಸಹ ಎರಡನೇ ಬಾರಿಗೆ ಮೋದಿ ಸಂಪುಟದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದು, ಈ ಬಾರಿಯೂ ಸಹ ಅವರಿಗೆ ಹಣಕಾಸು ಇಲಾಖೆ ನೀಡಲಾಗಿದೆ. ಕಳೆದ ಬಾರಿ ಸರ್ಕಾರದಲ್ಲೂ ನಿರ್ಮಲಾ ಸೀತಾರಾಮಾನ್ ಅವರು ಹಣಕಾಸು ಇಲಾಖೆ ಖಾತೆ ಸಚಿವೆಯಾಗಿದ್ದರು.

4 / 7
ಕಳೆದ ಬಾರಿ ಸಂಸದೀಯ ವ್ಯವಹಾರ ಖಾತೆ ಸಚಿವರಾಗಿದ್ದ ಪ್ರಹ್ಲಾದ್ ಜೋಶಿ ಅವರಿಗೆ ಈ ಬಾರಿ ಬದಲಾವಣೆ ಮಾಡಲಾಗಿದ್ದು, ಇದೀಗ ಅವರಿಗೆ  ಮಹತ್ವದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಲಾಗಿದೆ. ಇದರ ಜೊತೆಗೆ ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿ ಸಹ ನೀಡಲಾಗಿದೆ.

ಕಳೆದ ಬಾರಿ ಸಂಸದೀಯ ವ್ಯವಹಾರ ಖಾತೆ ಸಚಿವರಾಗಿದ್ದ ಪ್ರಹ್ಲಾದ್ ಜೋಶಿ ಅವರಿಗೆ ಈ ಬಾರಿ ಬದಲಾವಣೆ ಮಾಡಲಾಗಿದ್ದು, ಇದೀಗ ಅವರಿಗೆ ಮಹತ್ವದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಲಾಗಿದೆ. ಇದರ ಜೊತೆಗೆ ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿ ಸಹ ನೀಡಲಾಗಿದೆ.

5 / 7
ಬೆಂಗಳೂರು ಉತ್ತರದಿಂದ ಗೆದ್ದು ಮೋದಿ ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸೂಕ್ಷ್ಮ, ಸಣ್ಣ ,ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ನೀಡಲಾಗಿದೆ. ಕಳೆದ ಬಾರಿ ಸರ್ಕಾರದಲ್ಲಿ ರಾಜ್ಯ ಕೃಷಿ ಖಾತೆ ನೀಡಲಾಗಿತ್ತು.

ಬೆಂಗಳೂರು ಉತ್ತರದಿಂದ ಗೆದ್ದು ಮೋದಿ ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸೂಕ್ಷ್ಮ, ಸಣ್ಣ ,ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ನೀಡಲಾಗಿದೆ. ಕಳೆದ ಬಾರಿ ಸರ್ಕಾರದಲ್ಲಿ ರಾಜ್ಯ ಕೃಷಿ ಖಾತೆ ನೀಡಲಾಗಿತ್ತು.

6 / 7
ಜಲ ಶಕ್ತಿ ರಾಜ್ಯ ಖಾತೆ ಮತ್ತು ರೈಲ್ವೆ ಸಚಿವಾಲಯದ ರಾಜ್ಯ ಖಾತೆ ನೀಡಲಾಗಿದೆ. ಸೋಮಣ್ಣ ಅವರಗೆ ಎರೆಡೆರಡು ರಾಜ್ಯ ಖಾತೆ ನೀಡುವುದು ವಿಶೇಷವಾಗಿದೆ.

ಜಲ ಶಕ್ತಿ ರಾಜ್ಯ ಖಾತೆ ಮತ್ತು ರೈಲ್ವೆ ಸಚಿವಾಲಯದ ರಾಜ್ಯ ಖಾತೆ ನೀಡಲಾಗಿದೆ. ಸೋಮಣ್ಣ ಅವರಗೆ ಎರೆಡೆರಡು ರಾಜ್ಯ ಖಾತೆ ನೀಡುವುದು ವಿಶೇಷವಾಗಿದೆ.

7 / 7

Published On - 7:56 pm, Mon, 10 June 24

Follow us
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್