AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್​ನಲ್ಲಿ ಮುಗ್ಗರಿಸಿದ ಕನ್ನಡಿಗ ರೋಹನ್ ಬೋಪಣ್ಣ; ಯುಎಸ್ ಓಪನ್ ಗೆಲ್ಲುವ ಕನಸು ಮತ್ತೊಮ್ಮೆ ಭಗ್ನ..!

US Open 2023: ಬರೋಬ್ಬರಿ 13 ವರ್ಷಗಳ ಬಳಿಕ ಗ್ರ್ಯಾಂಡ್ ಸ್ಲಾಮ್ ಫೈನಲ್ ತಲುಪಿದ್ದ ಕನ್ನಡಿಗ ರೋಹನ್ ಬೋಪಣ್ಣ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಮತೊಮ್ಮೆ ವಿಫಲರಾಗಿದ್ದಾರೆ. ಯುಎಸ್ ಓಪನ್ ಪುರುಷರ ಡಬಲ್ಸ್‌ ವಿಭಾಗದಲ್ಲಿ ಫೈನಲ್ ತಲುಪಿದ್ದ ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಫೈನಲ್​ನಲ್ಲಿ ಮುಗ್ಗರಿಸಿದೆ.

ಪೃಥ್ವಿಶಂಕರ
|

Updated on:Sep 09, 2023 | 9:03 AM

ಬರೋಬ್ಬರಿ 13 ವರ್ಷಗಳ ಬಳಿಕ ಗ್ರ್ಯಾಂಡ್ ಸ್ಲಾಮ್ ಫೈನಲ್ ತಲುಪಿದ್ದ ಕನ್ನಡಿಗ ರೋಹನ್ ಬೋಪಣ್ಣ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಮತೊಮ್ಮೆ ವಿಫಲರಾಗಿದ್ದಾರೆ. ಯುಎಸ್ ಓಪನ್ ಪುರುಷರ ಡಬಲ್ಸ್‌ ವಿಭಾಗದಲ್ಲಿ ಫೈನಲ್ ತಲುಪಿದ್ದ  ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಫೈನಲ್​ನಲ್ಲಿ ಮುಗ್ಗರಿಸಿದೆ.

ಬರೋಬ್ಬರಿ 13 ವರ್ಷಗಳ ಬಳಿಕ ಗ್ರ್ಯಾಂಡ್ ಸ್ಲಾಮ್ ಫೈನಲ್ ತಲುಪಿದ್ದ ಕನ್ನಡಿಗ ರೋಹನ್ ಬೋಪಣ್ಣ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಮತೊಮ್ಮೆ ವಿಫಲರಾಗಿದ್ದಾರೆ. ಯುಎಸ್ ಓಪನ್ ಪುರುಷರ ಡಬಲ್ಸ್‌ ವಿಭಾಗದಲ್ಲಿ ಫೈನಲ್ ತಲುಪಿದ್ದ ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಫೈನಲ್​ನಲ್ಲಿ ಮುಗ್ಗರಿಸಿದೆ.

1 / 7
ಸೆಮಿಫೈನಲ್‌ನಲ್ಲಿ  ಫ್ರೆಂಚ್ ಜೋಡಿಯನ್ನು 7-6, 6-2 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದ್ದ ರೋಹನ್ ಬೋಪಣ್ಣ ಇದರೊಂದಿಗೆ 13 ವರ್ಷಗಳ ನಂತರ ಗ್ರ್ಯಾನ್‌ಸ್ಲಾಮ್‌ನಲ್ಲಿ ಪುರುಷರ ಡಬಲ್ಸ್‌ನಲ್ಲಿ ಫೈನಲ್ ತಲುಪಿದ್ದ ದಾಖಲೆ ಬರೆದಿದ್ದರು. ಇದರೊಂದಿಗೆ ಗ್ರ್ಯಾಂಡ್ ಸ್ಲಾಮ್ ಫೈನಲ್ ತಲುಪಿದ ಅತ್ಯಂತ ಹಿರಿಯ ಪುರುಷ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

ಸೆಮಿಫೈನಲ್‌ನಲ್ಲಿ ಫ್ರೆಂಚ್ ಜೋಡಿಯನ್ನು 7-6, 6-2 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದ್ದ ರೋಹನ್ ಬೋಪಣ್ಣ ಇದರೊಂದಿಗೆ 13 ವರ್ಷಗಳ ನಂತರ ಗ್ರ್ಯಾನ್‌ಸ್ಲಾಮ್‌ನಲ್ಲಿ ಪುರುಷರ ಡಬಲ್ಸ್‌ನಲ್ಲಿ ಫೈನಲ್ ತಲುಪಿದ್ದ ದಾಖಲೆ ಬರೆದಿದ್ದರು. ಇದರೊಂದಿಗೆ ಗ್ರ್ಯಾಂಡ್ ಸ್ಲಾಮ್ ಫೈನಲ್ ತಲುಪಿದ ಅತ್ಯಂತ ಹಿರಿಯ ಪುರುಷ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

2 / 7
ಆದರೆ ಫೈನಲ್ ಪಂದ್ಯದಲ್ಲಿ ಅಮೆರಿಕದ ರಾಜೀವ್ ರಾಮ್ ಮತ್ತು ಯುನೈಟೆಡ್ ಕಿಂಗ್‌ಡಂನ ಜೋ ಸಾಲಿಸ್‌ಬರಿ ಜೋಡಿಯನ್ನು ಎದುರಿಸಿದ ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಫೈನಲ್​ನಲ್ಲಿ 6-2, 3-6, 4-6 ಅಂತರದಿಂದ ಸೋತು ಪ್ರಶಸ್ತಿಯಿಂದ ವಂಚಿತವಾಯಿತು.

ಆದರೆ ಫೈನಲ್ ಪಂದ್ಯದಲ್ಲಿ ಅಮೆರಿಕದ ರಾಜೀವ್ ರಾಮ್ ಮತ್ತು ಯುನೈಟೆಡ್ ಕಿಂಗ್‌ಡಂನ ಜೋ ಸಾಲಿಸ್‌ಬರಿ ಜೋಡಿಯನ್ನು ಎದುರಿಸಿದ ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಫೈನಲ್​ನಲ್ಲಿ 6-2, 3-6, 4-6 ಅಂತರದಿಂದ ಸೋತು ಪ್ರಶಸ್ತಿಯಿಂದ ವಂಚಿತವಾಯಿತು.

3 / 7
ಫೈನಲ್‌ನಲ್ಲಿ ರಾಜೀವ್ ರಾಮ್-ಜೋ ಸಾಲಿಸ್‌ಬರಿ ಜೋಡಿಯ ವಿರುದ್ಧ ಆರಂಭಿಕ ಎಡವಟ್ಟು ಮಾಡಿಕೊಂಡ ಬೋಪಣ್ಣ ಜೋಡಿ ಮೊದಲ ಸೆಟ್‌ನಲ್ಲಿ 2-6 ಅಂತರದ ಸೋಲು ಕಂಡಿತು. ಎರಡನೇ ಸೆಟ್‌ನಲ್ಲಿ ಪ್ರಬಲ ಪುನರಾಗಮನ ಮಾಡಿ 6-3 ರಿಂದ ಗೆಲುವು ಸಾಧಿಸಿತು. ಆದರೆ ಮೂರನೇ ಸೆಟ್‌ನಲ್ಲಿ ಎದುರಾಳಿ ಎದುರು ಮಂಕಾದ  ಕನ್ನಡಿಗ ಬೋಪಣ್ಣ ಜೋಡಿ 4-6 ಅಂತರದಿಂದ ಸೋಲೊಪ್ಪಿಕೊಂಡಿತು.

ಫೈನಲ್‌ನಲ್ಲಿ ರಾಜೀವ್ ರಾಮ್-ಜೋ ಸಾಲಿಸ್‌ಬರಿ ಜೋಡಿಯ ವಿರುದ್ಧ ಆರಂಭಿಕ ಎಡವಟ್ಟು ಮಾಡಿಕೊಂಡ ಬೋಪಣ್ಣ ಜೋಡಿ ಮೊದಲ ಸೆಟ್‌ನಲ್ಲಿ 2-6 ಅಂತರದ ಸೋಲು ಕಂಡಿತು. ಎರಡನೇ ಸೆಟ್‌ನಲ್ಲಿ ಪ್ರಬಲ ಪುನರಾಗಮನ ಮಾಡಿ 6-3 ರಿಂದ ಗೆಲುವು ಸಾಧಿಸಿತು. ಆದರೆ ಮೂರನೇ ಸೆಟ್‌ನಲ್ಲಿ ಎದುರಾಳಿ ಎದುರು ಮಂಕಾದ ಕನ್ನಡಿಗ ಬೋಪಣ್ಣ ಜೋಡಿ 4-6 ಅಂತರದಿಂದ ಸೋಲೊಪ್ಪಿಕೊಂಡಿತು.

4 / 7
ಈ ಮೂಲಕ ವೃತ್ತಿ ಬದುಕಿನ ಮೊದಲನೇ ಗ್ರ್ಯಾಂಡ್ ಸ್ಲಾಮ್ ಗೆಲ್ಲುವ ಬೋಪಣ್ಣ ಕನಸು ನುಚ್ಚು ನೂರಾಗಿದೆ. ವಾಸ್ತವವಾಗಿ 2017 ರಲ್ಲಿ ಫ್ರೆಂಚ್ ಓಪನ್‌ನಲ್ಲಿ ಮಿಶ್ರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದ ಬೋಪಣ್ಣಗೆ ಅಂದಿನಿಂದ ಮತ್ತೊಂದು ಪ್ರಶಸ್ತಿ ಗೆಲ್ಲಲಾಗಿಲ್ಲ.

ಈ ಮೂಲಕ ವೃತ್ತಿ ಬದುಕಿನ ಮೊದಲನೇ ಗ್ರ್ಯಾಂಡ್ ಸ್ಲಾಮ್ ಗೆಲ್ಲುವ ಬೋಪಣ್ಣ ಕನಸು ನುಚ್ಚು ನೂರಾಗಿದೆ. ವಾಸ್ತವವಾಗಿ 2017 ರಲ್ಲಿ ಫ್ರೆಂಚ್ ಓಪನ್‌ನಲ್ಲಿ ಮಿಶ್ರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದ ಬೋಪಣ್ಣಗೆ ಅಂದಿನಿಂದ ಮತ್ತೊಂದು ಪ್ರಶಸ್ತಿ ಗೆಲ್ಲಲಾಗಿಲ್ಲ.

5 / 7
ತಮ್ಮ ಸುದೀರ್ಘ ಟೆನಿಸ್ ವೃತ್ತಿಜೀವನದಲ್ಲಿ ಹಲವಾರು ಬಾರಿ ಪುರುಷರ ಡಬಲ್ಸ್ ಸೆಮಿಫೈನಲ್ ತಲುಪುವಲ್ಲಿ ಬೋಪಣ್ಣ ಯಶಸ್ವಿಯಾಗಿದ್ದಾರೆ. ಆದರೆ ಎರಡು ಬಾರಿ ಮಾತ್ರ ಫೈನಲ್ ತಲುಪಿದ್ದು, ಎರಡೂ ಬಾರಿಯೂ ಪ್ರಶಸ್ತಿಯಿಂದ ಅವಕಾಶ ವಂಚಿತರಾಗಿದ್ದಾರೆ.

ತಮ್ಮ ಸುದೀರ್ಘ ಟೆನಿಸ್ ವೃತ್ತಿಜೀವನದಲ್ಲಿ ಹಲವಾರು ಬಾರಿ ಪುರುಷರ ಡಬಲ್ಸ್ ಸೆಮಿಫೈನಲ್ ತಲುಪುವಲ್ಲಿ ಬೋಪಣ್ಣ ಯಶಸ್ವಿಯಾಗಿದ್ದಾರೆ. ಆದರೆ ಎರಡು ಬಾರಿ ಮಾತ್ರ ಫೈನಲ್ ತಲುಪಿದ್ದು, ಎರಡೂ ಬಾರಿಯೂ ಪ್ರಶಸ್ತಿಯಿಂದ ಅವಕಾಶ ವಂಚಿತರಾಗಿದ್ದಾರೆ.

6 / 7
ಭಾರತದ ಪುರುಷ ಟೆನಿಸ್ ಆಟಗಾರರ ಪೈಕಿ ಲಿಯಾಂಡರ್ ಪೇಜ್ ಮತ್ತು ಮಹೇಶ್ ಭೂಪತಿ ಗ್ರ್ಯಾಂಡ್ ಸ್ಲಾಮ್ ಗೆದ್ದಿದ್ದು, ಈ ಪಟ್ಟಿಯಲ್ಲಿ ರೋಹನ್ ಬೋಪಣ್ಣ ಹೆಸರು ಸೇರುವ ನಿರೀಕ್ಷೆ ಇತ್ತಾದರೂ ಆ ನಿರೀಕ್ಷೆ ಇದೀಗ ಹುಸಿಯಾಗಿದೆ.

ಭಾರತದ ಪುರುಷ ಟೆನಿಸ್ ಆಟಗಾರರ ಪೈಕಿ ಲಿಯಾಂಡರ್ ಪೇಜ್ ಮತ್ತು ಮಹೇಶ್ ಭೂಪತಿ ಗ್ರ್ಯಾಂಡ್ ಸ್ಲಾಮ್ ಗೆದ್ದಿದ್ದು, ಈ ಪಟ್ಟಿಯಲ್ಲಿ ರೋಹನ್ ಬೋಪಣ್ಣ ಹೆಸರು ಸೇರುವ ನಿರೀಕ್ಷೆ ಇತ್ತಾದರೂ ಆ ನಿರೀಕ್ಷೆ ಇದೀಗ ಹುಸಿಯಾಗಿದೆ.

7 / 7

Published On - 9:01 am, Sat, 9 September 23

Follow us
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು