AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ಮಠದಲ್ಲಿಂದು ರಾಯರ ಉತ್ತರಾಧನೆ ಸಡಗರ! ಸಂಸದ ಯಧುವೀರ್​ಗೆ ರಾಯರ ಅನುಗ್ರಹ ಪ್ರಶಸ್ತಿ ಪ್ರಧಾನ!

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವದ ನಿಮಿತ್ತ ಇಂದು ಉತ್ತರಾಧನೆ ನಡೀತು. ಶ್ರೀಗಳು, ಅರ್ಚಕರು ಬಣ್ಣದೋಕುಳಿಯಲ್ಲಿ ಮಿಂದೆದ್ದು ವಸಂತೋತ್ಸವ ಆಚರಿಸಿದರು. ಅಷ್ಟೇ ಅಲ್ಲ, ಮಹಾರಥೋತ್ಸವಕ್ಕೆ ಶ್ರೀಗಳು ಚಾಲನೆ ನೀಡಿ ಭಕ್ತರಿಗೆ ಆಶೀರ್ವಚನ ನೀಡಿದರು.

ಭೀಮೇಶ್​​ ಪೂಜಾರ್
| Edited By: |

Updated on: Aug 22, 2024 | 4:00 PM

Share
ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸಾರ್ವಭೌಮರು ವೃಂದಾವನಸ್ಥರಾದ ಮರುದಿನವನ್ನ ಮಂತ್ರಾಲಯದಲ್ಲಿ ಉತ್ತರರಾಧನೆಯಾಗಿ ಆಚರಿಸಲಾಗುತ್ತದೆ. ಅದೇ ರೀತಿ ಇಂದು ರಾಯರ ಸನ್ನಿಧಿಯಲ್ಲಿ ಸಂಭ್ರಮದಿಂದ ಉತ್ತರಾಧನೆ ಆಚರಿಸಲಾಯ್ತು.

ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸಾರ್ವಭೌಮರು ವೃಂದಾವನಸ್ಥರಾದ ಮರುದಿನವನ್ನ ಮಂತ್ರಾಲಯದಲ್ಲಿ ಉತ್ತರರಾಧನೆಯಾಗಿ ಆಚರಿಸಲಾಗುತ್ತದೆ. ಅದೇ ರೀತಿ ಇಂದು ರಾಯರ ಸನ್ನಿಧಿಯಲ್ಲಿ ಸಂಭ್ರಮದಿಂದ ಉತ್ತರಾಧನೆ ಆಚರಿಸಲಾಯ್ತು.

1 / 7
 ಇಂದು ಉತ್ತರಾಧನೆ ಹಿನ್ನೆಲೆ ರಾಯರು ಪ್ರಹ್ಲಾದ್ ರಾಜರ ಉತ್ಸವ ಮೂರ್ತಿ ರೂಪದಿಂದ ಹೊರ ಪ್ರಕಾರದಲ್ಲಿ ಬಂದು ಭಕ್ತರಿಗೆ ರಾಜ ಬೀದಿಯಲ್ಲಿ ದರ್ಶನ ಕೊಡುತ್ತಾರೆ ಎನ್ನುವ ಪ್ರತೀತಿಯಿದೆ. ಹೀಗಾಗಿ ಇದರ ಭಾಗವಾಗಿ ಗುರುರಾಯರನ್ನ ಪ್ರಹ್ಲಾದ್ ರಾಜರ ರೂಪದಲ್ಲಿ ಸಂಸ್ಕೃತ ಪಾಠಶಾಲೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.

ಇಂದು ಉತ್ತರಾಧನೆ ಹಿನ್ನೆಲೆ ರಾಯರು ಪ್ರಹ್ಲಾದ್ ರಾಜರ ಉತ್ಸವ ಮೂರ್ತಿ ರೂಪದಿಂದ ಹೊರ ಪ್ರಕಾರದಲ್ಲಿ ಬಂದು ಭಕ್ತರಿಗೆ ರಾಜ ಬೀದಿಯಲ್ಲಿ ದರ್ಶನ ಕೊಡುತ್ತಾರೆ ಎನ್ನುವ ಪ್ರತೀತಿಯಿದೆ. ಹೀಗಾಗಿ ಇದರ ಭಾಗವಾಗಿ ಗುರುರಾಯರನ್ನ ಪ್ರಹ್ಲಾದ್ ರಾಜರ ರೂಪದಲ್ಲಿ ಸಂಸ್ಕೃತ ಪಾಠಶಾಲೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.

2 / 7
ನಂತರ ಮಠದ ಮದ್ವದ್ವಾರ ಮೂಲಕ ರಾಜಬೀದಿಯಲ್ಲಿ ಮಹಾರಥೋತ್ಸದತ್ತ ಶ್ರೀಗಳು ಆಗಮಿಸಿ ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ಶ್ರೀಗಳು ಭಕ್ತರಿಗೆ ಆಶಿರ್ವಚನ ಮಾಡಿ, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರೊ ದೌರ್ಜನ್ಯವನ್ನ ಶ್ರೀಗಳು ಖಂಡಿಸಿ, ವಿಶ್ವದಲ್ಲಿ ಶಾಂತಿ ನೆಲೆಸಲಿ. ಭಾರತ ವಿಶ್ವ ಗುರುವಾಗಲಿ ಅಂತ ಹಾರೈಸಿದರು.

ನಂತರ ಮಠದ ಮದ್ವದ್ವಾರ ಮೂಲಕ ರಾಜಬೀದಿಯಲ್ಲಿ ಮಹಾರಥೋತ್ಸದತ್ತ ಶ್ರೀಗಳು ಆಗಮಿಸಿ ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ಶ್ರೀಗಳು ಭಕ್ತರಿಗೆ ಆಶಿರ್ವಚನ ಮಾಡಿ, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರೊ ದೌರ್ಜನ್ಯವನ್ನ ಶ್ರೀಗಳು ಖಂಡಿಸಿ, ವಿಶ್ವದಲ್ಲಿ ಶಾಂತಿ ನೆಲೆಸಲಿ. ಭಾರತ ವಿಶ್ವ ಗುರುವಾಗಲಿ ಅಂತ ಹಾರೈಸಿದರು.

3 / 7
ಕಾಪ್ಟರ್ ಮೂಲಕ ಪ್ರತಿ ವರ್ಷ ಶ್ರೀಗಳು ಮಹಾ ರಥೋತ್ಸವಕ್ಕೆ ಪುಷ್ಪಾರ್ಚನೆ ಮಾಡುತ್ತಿದ್ದರು. ಆದ್ರೆ, ಈ ಬಾರಿ ಹೆಲಿಕಾಪ್ಟರ್ ಬಂದಿತ್ತಾದರೂ ಕಾರಣಾಂತರಗಳಿಂದ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಿಲ್ಲ. ಆಗ ರಥೋತ್ಸವದ ವೇಳೆ ರಥದ ಮೇಲ್ಬಾಗದ ಕಳಸ, ಕೇಬಲ್​ವೊಂದಕ್ಕೆ ಸಿಲುಕಿದ ಘಟನೆಯೂ ನಡೀತು. ಕೆಲಹೊತ್ತಿನ ಬಳಿಕ ಕೇಬಲ್ ಸರಿಪಡಿಸಿ ರಥೋತ್ಸವಕ್ಕೆ ಅನುವು ಮಾಡಿಕೊಡಲಾಯ್ತು.

ಕಾಪ್ಟರ್ ಮೂಲಕ ಪ್ರತಿ ವರ್ಷ ಶ್ರೀಗಳು ಮಹಾ ರಥೋತ್ಸವಕ್ಕೆ ಪುಷ್ಪಾರ್ಚನೆ ಮಾಡುತ್ತಿದ್ದರು. ಆದ್ರೆ, ಈ ಬಾರಿ ಹೆಲಿಕಾಪ್ಟರ್ ಬಂದಿತ್ತಾದರೂ ಕಾರಣಾಂತರಗಳಿಂದ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಿಲ್ಲ. ಆಗ ರಥೋತ್ಸವದ ವೇಳೆ ರಥದ ಮೇಲ್ಬಾಗದ ಕಳಸ, ಕೇಬಲ್​ವೊಂದಕ್ಕೆ ಸಿಲುಕಿದ ಘಟನೆಯೂ ನಡೀತು. ಕೆಲಹೊತ್ತಿನ ಬಳಿಕ ಕೇಬಲ್ ಸರಿಪಡಿಸಿ ರಥೋತ್ಸವಕ್ಕೆ ಅನುವು ಮಾಡಿಕೊಡಲಾಯ್ತು.

4 / 7
ಇದಕ್ಕೂ ಮುನ್ನ ಇಂದು ಉತ್ತರಾಧನೆ ಹಿನ್ನೆಲೆ ಶ್ರೀ ಮಠದಲ್ಲಿ ಪಾರಾಯಣ, ನೈರ್ಮಲ್ಯ ವಿಸರ್ಜನೆ, ಮೂಲರಾಮದೇವರ ಪೂಜೆಗಳನ್ನ ನೆರವೇರಿಸಲಾಯ್ತು. ಉತ್ತರಾಧನೆ ವೇಳೆ ಆಚರಿಸಲಾಗುವ ವಸಂತೋತ್ಸವದ ಅಂಗವಾಗಿ ಶ್ರೀಗಳು ರಾಯರಿಗೆ ಬಣ್ಣವನ್ನ ಅರ್ಪಿಸಿದ್ರು. ನಂತರ ಶ್ರೀಗಳು ಭಕ್ತರಿಗೆ, ಅರ್ಚಕರಿಗೆ ಬಣ್ಣವನ್ನ ಎರಸಿ ಬಣ್ಣದೋಕುಳಿ ಆಡೋ ಮೂಲಕ ವಸಂತೋತ್ಸವ ಆಚರಣೆ ಮಾಡಿದರು.

ಇದಕ್ಕೂ ಮುನ್ನ ಇಂದು ಉತ್ತರಾಧನೆ ಹಿನ್ನೆಲೆ ಶ್ರೀ ಮಠದಲ್ಲಿ ಪಾರಾಯಣ, ನೈರ್ಮಲ್ಯ ವಿಸರ್ಜನೆ, ಮೂಲರಾಮದೇವರ ಪೂಜೆಗಳನ್ನ ನೆರವೇರಿಸಲಾಯ್ತು. ಉತ್ತರಾಧನೆ ವೇಳೆ ಆಚರಿಸಲಾಗುವ ವಸಂತೋತ್ಸವದ ಅಂಗವಾಗಿ ಶ್ರೀಗಳು ರಾಯರಿಗೆ ಬಣ್ಣವನ್ನ ಅರ್ಪಿಸಿದ್ರು. ನಂತರ ಶ್ರೀಗಳು ಭಕ್ತರಿಗೆ, ಅರ್ಚಕರಿಗೆ ಬಣ್ಣವನ್ನ ಎರಸಿ ಬಣ್ಣದೋಕುಳಿ ಆಡೋ ಮೂಲಕ ವಸಂತೋತ್ಸವ ಆಚರಣೆ ಮಾಡಿದರು.

5 / 7
ಸಂಸದ ಹಾಗೂ ಮೈಸೂರು ರಾಜ ಮನೆತನದ ಯಧುವೀರ್ ಅವರು ಇಂದು ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗಿಯಾದರು. ಇದೇ ವೇಳೆ ಶ್ರೀ ಮಠದ ಅತ್ಯುನ್ನತ ಪ್ರಶಸ್ತಿಯಾದ ರಾಘವೇಂದ್ರ ಅನುಗ್ರಹ ಪ್ರಶಸ್ತಿಯನ್ನ ಸುಬುಧೇಂದ್ರ ತೀರ್ಥರು ಯಧುವೀರ್ ಅವರಿಗೆ ನೀಡಿ ಗೌರವಿಸಿದರು.

ಸಂಸದ ಹಾಗೂ ಮೈಸೂರು ರಾಜ ಮನೆತನದ ಯಧುವೀರ್ ಅವರು ಇಂದು ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗಿಯಾದರು. ಇದೇ ವೇಳೆ ಶ್ರೀ ಮಠದ ಅತ್ಯುನ್ನತ ಪ್ರಶಸ್ತಿಯಾದ ರಾಘವೇಂದ್ರ ಅನುಗ್ರಹ ಪ್ರಶಸ್ತಿಯನ್ನ ಸುಬುಧೇಂದ್ರ ತೀರ್ಥರು ಯಧುವೀರ್ ಅವರಿಗೆ ನೀಡಿ ಗೌರವಿಸಿದರು.

6 / 7
ಒಟ್ಟಿನಲ್ಲಿ ಮಹಾರಥೋತ್ಸವ ವೇಳೆ ವಿವಿಧೆಡೆಯಿಂದ ಆಗಮಿಸಿದ್ದ ಭಜನಾ ಮಂಡಳಿಗಳು, ಕಲಾತಂಡಗಳು ರಾಜಬೀದಿಯಲ್ಲಿ ರಥೋತ್ಸವಕ್ಕೆ ಮೆರಗು ನೀಡಿದವು. ಉತ್ತರಾಧನೆ ಸಂಭ್ರಮಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು ಸಂತಸ ಇಮ್ಮಡಿಗೊಂಡಿದ್ದಂತು ಸುಳ್ಳಳ್ಳ.

ಒಟ್ಟಿನಲ್ಲಿ ಮಹಾರಥೋತ್ಸವ ವೇಳೆ ವಿವಿಧೆಡೆಯಿಂದ ಆಗಮಿಸಿದ್ದ ಭಜನಾ ಮಂಡಳಿಗಳು, ಕಲಾತಂಡಗಳು ರಾಜಬೀದಿಯಲ್ಲಿ ರಥೋತ್ಸವಕ್ಕೆ ಮೆರಗು ನೀಡಿದವು. ಉತ್ತರಾಧನೆ ಸಂಭ್ರಮಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು ಸಂತಸ ಇಮ್ಮಡಿಗೊಂಡಿದ್ದಂತು ಸುಳ್ಳಳ್ಳ.

7 / 7
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ
ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ
ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್