Kannada News Photo gallery Uttarakhand Joshimath Sinking why this tragedy happening Experts opinion in Kannada
Joshimath Sinking: ಉತ್ತರಾಖಂಡದ ಜೋಶಿಮಠ ಭೂಕುಸಿತಕ್ಕೆ ಕಾರಣವೇನು? ಇಲ್ಲಿದೆ ವಿವರ
ಉತ್ತರಾಖಂಡದ (Uttarakhand) ಜೋಶಿಮಠದಲ್ಲಿ (Joshimath) ಭೂಕುಸಿತದ ಆತಂಕ ಹೆಚ್ಚಾಗಿದ್ದು, ಕುಟುಂಬಗಳ ಸ್ಥಳಾಂತರ ಕಾರ್ಯ ನಡೆಯುತ್ತಿದೆ. ನಾಮಾವಶೇಷ ಭೀತಿ ಎದುರಿಸುತ್ತಿರುವ ಬದರಿನಾಥದ ಹೆಬ್ಬಾಗಿಲಿನ ವಿವಿಧ ಕಡೆಗಳ ಚಿತ್ರಗಳ ಜತೆಗೆ ಈ ದುರಂತಕ್ಕೆ ಕಾರಣವೇನು ಎಂಬುದಕ್ಕೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.
ಉತ್ತರಾಖಂಡದ ಜೋಶಿಮಠದಲ್ಲಿ ಸುಮಾರು 500ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿವೆ. ಪರಿಣಾಮವಾಗಿ 600 ಕುಟುಂಬಗಳ ತಕ್ಷಣದ ಸ್ಥಳಾಂತರಕ್ಕೆ ಸರ್ಕಾರ ಮುಂದಾಗಿದೆ.
1 / 9
ಸುಮಾರು 1890 ಮೀಟರ್ ಎತ್ತರದಲ್ಲಿರುವ ಜೋಶಿಮಠವು ಹಿಮಾಲಯದ ಘರ್ವಾಲ್ನ ಒಂದು ಪಟ್ಟಣವಾಗಿದೆ.
2 / 9
ಜೋಶಿಮಠವು ಪಶ್ಚಿಮ ಮತ್ತು ಪೂರ್ವದಲ್ಲಿ ಕರ್ಮನಾಸ ಮತ್ತು ಧಕನಾಳ ಹೊಳೆಗಳು ಮತ್ತು ದಕ್ಷಿಣ ಮತ್ತು ಉತ್ತರದಲ್ಲಿ ಧೌಲಿಗಂಗಾ ಮತ್ತು ಅಲಕನಂದಾ ನದಿಗಳಿಂದ ಸುತ್ತುವರಿದ ಬೆಟ್ಟದ ಮಧ್ಯದ ಇಳಿಜಾರುಗಳಲ್ಲಿ ನೆಲೆಗೊಂಡಿದೆ.
3 / 9
2021ರ ಫೆಬ್ರವರಿಯಲ್ಲಿ ಜೋಶಿಮಠ ಸಮೀಪದ ತಪೋವನ ವಿಷ್ಣುಗಡದಲ್ಲಿನ ಅಣೆಕಟ್ಟೆಯ ಸಮೀಪ ಸಂಭವಿಸಿದ್ದ ಮೇಘಸ್ಫೋಟದಲ್ಲಿ ನೂರಾರು ಮಂದಿ ಮೃತಪಟ್ಟಿದ್ದರು. ಹತ್ತಾರು ಮಂದಿ ಕಣ್ಮರೆಯಾಗಿದ್ದರು. ಮೇಘಸ್ಫೋಟ, ಭೂಕುಸಿತ, ಭೂಕಂಪದಂಥ ಅವಘಡಗಳು ಹಿಮಾಲಯದ ತಪ್ಪಲಿನ ಈ ರಾಜ್ಯದಲ್ಲಿ ಆಗಾಗ ವರದಿಯಾಗುತ್ತಿರುತ್ತವೆ.
4 / 9
ಹಿಮಾಲಯದ ನೀರ್ಗಲ್ಲುಗಳು ಕರಗುತ್ತಿರುವುದು ಕೂಡ ಜೋಶಿಮಠ ಹಾಗೂ ಉತ್ತರಾಖಂಡದ ಇತರ ಪ್ರದೇಶಗಳ ಮೇಲೆ ಪರಿಣಾಮ ಬೀರುತ್ತಿದೆ. ಹಿಮಕರಗಿ ಬರುವ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲಾಗದೆ ಮಣ್ಣು ಬಿರುಕುಬಿಡುತ್ತದೆ. ಪರಿಣಾಮವಾಗಿ ಭೂಕುಸಿತದಂಥ ಘಟನೆಗಳು ಸಂಭವಿಸುತ್ತಿವೆ ಎನ್ನಲಾಗಿದೆ.
5 / 9
ಪ್ರಸ್ತುತ ಜೋಶಿಮಠದ ಭೂಕುಸಿತ, ಮುಳುಗಡೆ ಬಗ್ಗೆ ತುರ್ತಾಗಿ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತಜ್ಞರ ತಂಡವೊನ್ನು ರಚಿಸಿದ್ದು, ಅದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ತಂಡ ನೀಡುವ ವರದಿಯ ಆಧಾರದಲ್ಲಿ ಮುಂದಿನ ಕ್ರಮಗಳ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.
6 / 9
ಶತಮಾನಗಳ ಹಿಂದೆ ಸಂಭವಿಸಿದ್ದ ಭೂಕುಸಿತದ ಅವಶೇಷಗಳ ಮೇಲೆಯೇ ಊರು ನಿರ್ಮಾಣಗೊಂಡಿದೆ ಎನ್ನಲಾಗಿದ್ದು, ಇದು ಹೆಚ್ಚು ಪ್ರಾಕೃತಿಕ ವಿಕೋಪಗಳಿಗೆ ತೆರೆದುಕೊಳ್ಳುವಂಥ ಪ್ರದೇಶವಾಗಿದೆ ಎಂದು ತಜ್ಞರು ಹೇಳಿದ್ದಾರೆ.
7 / 9
ಭೂಕುಸಿತದಿಂದಾಗಿ ಜೋಶಿಮಠದ ಅನೇಕ ಕಡೆಗಳಲ್ಲಿ ರಸ್ತೆಗಳಲ್ಲಿ ಬಿರುಕುಗಳು ಉಂಟಾಗಿವೆ. ಪರಿಣಾಮವಾಗಿ ಸಂಚಾರ ಕಷ್ಟಸಾಧ್ಯವಾಗಿದೆ.
8 / 9
ಮನೆಗಳು ಬಿರುಕುಬಿಟ್ಟಿರುವ ಕಾರಣ ಸ್ಥಳಾಂತರ ಮಾಡಲಾಗಿರುವ ನಿವಾಸಿಗಳು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವುದು