AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಕುಂಠ ಏಕಾದಶಿ: ನಾಡಿನ ತಿಮ್ಮಪ್ಪನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಫೋಟೋಸ್​​ ನೋಡಿ

ವೈಕುಂಠ ಏಕಾದಶಿ, ಹಿಂದೂ ಧರ್ಮದ ಪವಿತ್ರ ದಿನ, ಮಾರ್ಗಶಿರ ಮಾಸದ ಶುಕ್ಲ ಪಕ್ಷದಲ್ಲಿ ಆಚರಿಸಲಾಗುತ್ತದೆ. ಈ ದಿನ ಶ್ರೀ ವಿಷ್ಣುವಿಗೆ ಸಮರ್ಪಿತವಾಗಿದೆ. ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು, ಹವನಗಳು ನಡೆಯುತ್ತವೆ. ಲಕ್ಷಾಂತರ ಭಕ್ತರು ದೇವರ ದರ್ಶನ ಪಡೆಯಲು ಸಾಲುಗಟ್ಟಿ ನಿಂತಿದ್ದಾರೆ. ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆಯುವುದು ವಿಶೇಷವಾಗಿದೆ.

ವಿವೇಕ ಬಿರಾದಾರ
| Edited By: |

Updated on:Jan 10, 2025 | 9:39 AM

Share
ವೈಕುಂಠ ಏಕಾದಶಿ, ಹಿಂದೂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದು. ಏಕಾದಶಿಯು ತಿಂಗಳಿನಲ್ಲಿ ಎರಡು ಬಾರಿ ಬರುತ್ತದೆ. ಆದರೆ ಮಾರ್ಗಶಿರ ಮಾಸದಲ್ಲಿ (ಡಿಸೆಂಬರ್-ಜನವರಿ), ಶುಕ್ಲ ಪಕ್ಷದಲ್ಲಿ ಬರುವ ಏಕಾದಶಿಯು ವಿಶೇಷವಾಗಿದ್ದು ಅದನ್ನು ವೈಕುಂಠ ಏಕಾದಶಿ ಎನ್ನುತ್ತಾರೆ.ಈ ದಿನ ಶ್ರೀವಿಷ್ಣುವಿಗೆ ಸಮರ್ಪಿತವಾಗಿದೆ.

ವೈಕುಂಠ ಏಕಾದಶಿ, ಹಿಂದೂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದು. ಏಕಾದಶಿಯು ತಿಂಗಳಿನಲ್ಲಿ ಎರಡು ಬಾರಿ ಬರುತ್ತದೆ. ಆದರೆ ಮಾರ್ಗಶಿರ ಮಾಸದಲ್ಲಿ (ಡಿಸೆಂಬರ್-ಜನವರಿ), ಶುಕ್ಲ ಪಕ್ಷದಲ್ಲಿ ಬರುವ ಏಕಾದಶಿಯು ವಿಶೇಷವಾಗಿದ್ದು ಅದನ್ನು ವೈಕುಂಠ ಏಕಾದಶಿ ಎನ್ನುತ್ತಾರೆ.ಈ ದಿನ ಶ್ರೀವಿಷ್ಣುವಿಗೆ ಸಮರ್ಪಿತವಾಗಿದೆ.

1 / 5
ವೈಕುಂಠ ಏಕಾದಶಿ ನಿಮಿತ್ತ ವಿಷ್ಣುವಿನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹವನ, ಯಜ್ಞ ಮತ್ತು ಭಜನೆಗಳು ನಡೆಯುತ್ತಿವೆ. ನಸುಕಿನ ಜಾವದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನ ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತೆರಳುತ್ತಿದ್ದು, ಭಗವಂತನ ದರ್ಶನ ಪಡೆಯುತ್ತಿದ್ದಾರೆ.

ವೈಕುಂಠ ಏಕಾದಶಿ ನಿಮಿತ್ತ ವಿಷ್ಣುವಿನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹವನ, ಯಜ್ಞ ಮತ್ತು ಭಜನೆಗಳು ನಡೆಯುತ್ತಿವೆ. ನಸುಕಿನ ಜಾವದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನ ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತೆರಳುತ್ತಿದ್ದು, ಭಗವಂತನ ದರ್ಶನ ಪಡೆಯುತ್ತಿದ್ದಾರೆ.

2 / 5
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕತಿರುಪತಿ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಕೋಲಾರ, ಬೆಂಗಳೂರು, ಆಂದ್ರ, ತಮಿಳುನಾಡು ಸೇರಿದಂತೆ ಹಲವೆಡೆಯಿಂದ ಭಕ್ತರು ಬರುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ವೈಕುಂಠ ದ್ವಾರ ಪ್ರವೇಶ ಮಾಡಿ ದೇವರ ದರ್ಶನ ಪಡೆದರು. ಎಲ್ಲೆಲ್ಲೂ ಗೋವಿಂದಾ ಗೋವಿಂದಾ ಅನ್ನೋ ನಾಮ ಸ್ಮರಣೆ ಕೇಳುತ್ತಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕತಿರುಪತಿ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಕೋಲಾರ, ಬೆಂಗಳೂರು, ಆಂದ್ರ, ತಮಿಳುನಾಡು ಸೇರಿದಂತೆ ಹಲವೆಡೆಯಿಂದ ಭಕ್ತರು ಬರುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ವೈಕುಂಠ ದ್ವಾರ ಪ್ರವೇಶ ಮಾಡಿ ದೇವರ ದರ್ಶನ ಪಡೆದರು. ಎಲ್ಲೆಲ್ಲೂ ಗೋವಿಂದಾ ಗೋವಿಂದಾ ಅನ್ನೋ ನಾಮ ಸ್ಮರಣೆ ಕೇಳುತ್ತಿದೆ.

3 / 5
ಮೈಸೂರಿನ ಗಣಪತಿ ಆಶ್ರಮದಲ್ಲಿ ದತ್ತ ವೆಂಕಟೇಶ್ವರ ಉತ್ಸವಮೂರ್ತಿಗೆ ಆಶ್ರಮದ ಕಿರಿಯ ಸ್ವಾಮೀಜಿ ವಿಜಯಾನಂದ ತೀರ್ಥರು ಪೂಜೆ ಸಲ್ಲಿಸಿದರು. ವೈಕುಂಠ ದ್ವಾರದ ಮೂಲಕ ದತ್ತ ಶ್ರೀನಿವಾಸನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮೈಸೂರಿನ ಒಂಟಿಕೊಪ್ಪಲು ಬಡಾವಣೆಯಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆಗಳು ನಡೆಯುತ್ತಿವೆ.

ಮೈಸೂರಿನ ಗಣಪತಿ ಆಶ್ರಮದಲ್ಲಿ ದತ್ತ ವೆಂಕಟೇಶ್ವರ ಉತ್ಸವಮೂರ್ತಿಗೆ ಆಶ್ರಮದ ಕಿರಿಯ ಸ್ವಾಮೀಜಿ ವಿಜಯಾನಂದ ತೀರ್ಥರು ಪೂಜೆ ಸಲ್ಲಿಸಿದರು. ವೈಕುಂಠ ದ್ವಾರದ ಮೂಲಕ ದತ್ತ ಶ್ರೀನಿವಾಸನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮೈಸೂರಿನ ಒಂಟಿಕೊಪ್ಪಲು ಬಡಾವಣೆಯಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆಗಳು ನಡೆಯುತ್ತಿವೆ.

4 / 5
ಚಾಮರಾಜಪೇಟೆಯ ಕೋಟೆ ವೆಂಕಟರಮಣ ದೇವಾಲಯಕ್ಕೆ ನಸುಕಿನ ಜಾವ 4 ಗಂಟೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ಭಗವಂತನ ದರ್ಶನ ಪಡೆಯುತ್ತಿದ್ದಾರೆ.

ಚಾಮರಾಜಪೇಟೆಯ ಕೋಟೆ ವೆಂಕಟರಮಣ ದೇವಾಲಯಕ್ಕೆ ನಸುಕಿನ ಜಾವ 4 ಗಂಟೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ಭಗವಂತನ ದರ್ಶನ ಪಡೆಯುತ್ತಿದ್ದಾರೆ.

5 / 5

Published On - 9:26 am, Fri, 10 January 25

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ