- Kannada News Photo gallery Valmiki Jayanti 2024 : Inspirational and motivational quotes by Maharishi Valmiki Kannada News
Valmiki Jayanti 2024 : ಮಹರ್ಷಿ ವಾಲ್ಮೀಕಿಯ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ
ಇಂದು ಮಹಾನ್ ಋಷಿ ಕವಿ ಮಹರ್ಷಿ ವಾಲ್ಮೀಕಿಯವರ ಜನ್ಮದಿನವಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ವಾಲ್ಮೀಕಿ ಜಯಂತಿಯನ್ನು ವಾರ್ಷಿಕವಾಗಿ ಹುಣ್ಣಿಮೆಯ ರಾತ್ರಿ ಅಥವಾ ಅಶ್ವಿನ್ ತಿಂಗಳ ಪೂರ್ಣಿಮೆಯಂದು ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ವಾಲ್ಮೀಕಿಯು ಗುರುವಾಗಿ ಹಲವಾರು ಕವಿಗಳು ಹಾಗೂ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಒಂದೊಂದು ನುಡಿಮುತ್ತುಗಳು ಜೀವನ ಸಂದೇಶವನ್ನು ಸಾರುತ್ತದೆ. ಹಾಗಾದ್ರೆ ವಾಲ್ಮೀಕಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ.
Updated on:Oct 17, 2024 | 9:16 AM
Share

ಜೀವನದಲ್ಲಿ ಸುಖ ಮತ್ತು ದುಃಖಗಳು ಪರ್ಯಾಯವಾಗಿರುತ್ತವೆ. ನಿರಂತರವಾಗಿ ಸಂತೋಷದಿಂದಿರಲು ಎಂದಿಗೂ ಸಾಧ್ಯವಿಲ್ಲ.

ಬೆನ್ನಿನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನು ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ.

ಉತ್ಸಾಹಕ್ಕಿಂತ ಹೆಚ್ಚಿನ ಶಕ್ತಿ ಬೇರೊಂದಿಲ್ಲ. ಉತ್ಸಾಹಿಗಳಿಗೆ ಈ ಜಗತ್ತಿನಲ್ಲಿ ಸಾಧಿಸಲಾಗದ್ದು ಯಾವುದೂ ಇಲ್ಲ.

ಧರ್ಮದಿಂದ ಸಂಪತ್ತು ಚಿಗುರುತ್ತದೆ, ಧರ್ಮದಿಂದ ಸಂತೋಷ ಉಕ್ಕುತ್ತದೆ ಮತ್ತು ಧರ್ಮದಿಂದ ಎಲ್ಲವನ್ನೂ ಪಡೆಯುತ್ತೇವೆ. ಧರ್ಮವು ಈ ಪ್ರಪಂಚದ ಸಾರವಾಗಿದೆ.

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು, ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ.
Published On - 9:11 am, Thu, 17 October 24
Related Photo Gallery
ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್ಮೆಂಟ್ ಲಿಫ್ಟ್ನೊಳಗೆ ಬಲೂನ್ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!




