Valmiki Jayanti 2024 : ಮಹರ್ಷಿ ವಾಲ್ಮೀಕಿಯ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ

| Updated By: ಅಕ್ಷಯ್​ ಪಲ್ಲಮಜಲು​​

Updated on: Oct 17, 2024 | 9:16 AM

ಇಂದು ಮಹಾನ್ ಋಷಿ ಕವಿ ಮಹರ್ಷಿ ವಾಲ್ಮೀಕಿಯವರ ಜನ್ಮದಿನವಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ವಾಲ್ಮೀಕಿ ಜಯಂತಿಯನ್ನು ವಾರ್ಷಿಕವಾಗಿ ಹುಣ್ಣಿಮೆಯ ರಾತ್ರಿ ಅಥವಾ ಅಶ್ವಿನ್ ತಿಂಗಳ ಪೂರ್ಣಿಮೆಯಂದು ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ವಾಲ್ಮೀಕಿಯು ಗುರುವಾಗಿ ಹಲವಾರು ಕವಿಗಳು ಹಾಗೂ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಒಂದೊಂದು ನುಡಿಮುತ್ತುಗಳು ಜೀವನ ಸಂದೇಶವನ್ನು ಸಾರುತ್ತದೆ. ಹಾಗಾದ್ರೆ ವಾಲ್ಮೀಕಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ.

1 / 5
ಜೀವನದಲ್ಲಿ ಸುಖ ಮತ್ತು ದುಃಖಗಳು ಪರ್ಯಾಯವಾಗಿರುತ್ತವೆ. ನಿರಂತರವಾಗಿ ಸಂತೋಷದಿಂದಿರಲು ಎಂದಿಗೂ ಸಾಧ್ಯವಿಲ್ಲ.

ಜೀವನದಲ್ಲಿ ಸುಖ ಮತ್ತು ದುಃಖಗಳು ಪರ್ಯಾಯವಾಗಿರುತ್ತವೆ. ನಿರಂತರವಾಗಿ ಸಂತೋಷದಿಂದಿರಲು ಎಂದಿಗೂ ಸಾಧ್ಯವಿಲ್ಲ.

2 / 5
ಬೆನ್ನಿನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನು ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ.

ಬೆನ್ನಿನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನು ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ.

3 / 5
ಉತ್ಸಾಹಕ್ಕಿಂತ ಹೆಚ್ಚಿನ ಶಕ್ತಿ ಬೇರೊಂದಿಲ್ಲ. ಉತ್ಸಾಹಿಗಳಿಗೆ ಈ ಜಗತ್ತಿನಲ್ಲಿ ಸಾಧಿಸಲಾಗದ್ದು ಯಾವುದೂ ಇಲ್ಲ.

ಉತ್ಸಾಹಕ್ಕಿಂತ ಹೆಚ್ಚಿನ ಶಕ್ತಿ ಬೇರೊಂದಿಲ್ಲ. ಉತ್ಸಾಹಿಗಳಿಗೆ ಈ ಜಗತ್ತಿನಲ್ಲಿ ಸಾಧಿಸಲಾಗದ್ದು ಯಾವುದೂ ಇಲ್ಲ.

4 / 5
 ಧರ್ಮದಿಂದ ಸಂಪತ್ತು ಚಿಗುರುತ್ತದೆ, ಧರ್ಮದಿಂದ ಸಂತೋಷ ಉಕ್ಕುತ್ತದೆ ಮತ್ತು ಧರ್ಮದಿಂದ ಎಲ್ಲವನ್ನೂ ಪಡೆಯುತ್ತೇವೆ. ಧರ್ಮವು ಈ ಪ್ರಪಂಚದ ಸಾರವಾಗಿದೆ.

ಧರ್ಮದಿಂದ ಸಂಪತ್ತು ಚಿಗುರುತ್ತದೆ, ಧರ್ಮದಿಂದ ಸಂತೋಷ ಉಕ್ಕುತ್ತದೆ ಮತ್ತು ಧರ್ಮದಿಂದ ಎಲ್ಲವನ್ನೂ ಪಡೆಯುತ್ತೇವೆ. ಧರ್ಮವು ಈ ಪ್ರಪಂಚದ ಸಾರವಾಗಿದೆ.

5 / 5
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು, ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ.

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು, ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ.

Published On - 9:11 am, Thu, 17 October 24