ಇಂದು ಮಹಾನ್ ಋಷಿ ಕವಿ ಮಹರ್ಷಿ ವಾಲ್ಮೀಕಿಯವರ ಜನ್ಮದಿನವಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ವಾಲ್ಮೀಕಿ ಜಯಂತಿಯನ್ನು ವಾರ್ಷಿಕವಾಗಿ ಹುಣ್ಣಿಮೆಯ ರಾತ್ರಿ ಅಥವಾ ಅಶ್ವಿನ್ ತಿಂಗಳ ಪೂರ್ಣಿಮೆಯಂದು ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ವಾಲ್ಮೀಕಿಯು ಗುರುವಾಗಿ ಹಲವಾರು ಕವಿಗಳು ಹಾಗೂ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಒಂದೊಂದು ನುಡಿಮುತ್ತುಗಳು ಜೀವನ ಸಂದೇಶವನ್ನು ಸಾರುತ್ತದೆ. ಹಾಗಾದ್ರೆ ವಾಲ್ಮೀಕಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ.
1 / 5
ಜೀವನದಲ್ಲಿ ಸುಖ ಮತ್ತು ದುಃಖಗಳು ಪರ್ಯಾಯವಾಗಿರುತ್ತವೆ. ನಿರಂತರವಾಗಿ ಸಂತೋಷದಿಂದಿರಲು ಎಂದಿಗೂ ಸಾಧ್ಯವಿಲ್ಲ.
2 / 5
ಬೆನ್ನಿನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನು ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ.
3 / 5
ಉತ್ಸಾಹಕ್ಕಿಂತ ಹೆಚ್ಚಿನ ಶಕ್ತಿ ಬೇರೊಂದಿಲ್ಲ. ಉತ್ಸಾಹಿಗಳಿಗೆ ಈ ಜಗತ್ತಿನಲ್ಲಿ ಸಾಧಿಸಲಾಗದ್ದು ಯಾವುದೂ ಇಲ್ಲ.
4 / 5
ಧರ್ಮದಿಂದ ಸಂಪತ್ತು ಚಿಗುರುತ್ತದೆ, ಧರ್ಮದಿಂದ ಸಂತೋಷ ಉಕ್ಕುತ್ತದೆ ಮತ್ತು ಧರ್ಮದಿಂದ ಎಲ್ಲವನ್ನೂ ಪಡೆಯುತ್ತೇವೆ. ಧರ್ಮವು ಈ ಪ್ರಪಂಚದ ಸಾರವಾಗಿದೆ.
5 / 5
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು, ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ.