2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ, ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಎಂದರೇ ಸಹಜವಾಗಿ ಅಭಿವೃದ್ಧಿಯನ್ನು ಕಂಡಿರುತ್ತದೆ ಎಂಬ ಮಾತಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿನ ಒಂದು ಗ್ರಾಮದಲ್ಲಿ ಇದು ತದ್ವಿರುದ್ಧವಾಗಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಗರ್ಲೆ ಗ್ರಾಮದ ಜನರು ಕಾಂಗ್ರೆಸ್ ಮುಖಂಡಿರಿಗೆ ಭಹಿಷ್ಕಾರ ಹಾಕಿದ್ದಾರೆ. ಗ್ರಾಮದ ನಾಲ್ಕು ಕಡೆ ಬ್ಯಾನರ್ ಹಾಕಲಾಗಿದೆ. ಬ್ಯಾನರ್ನಲ್ಲಿ ಕಾಂಗ್ರೆಸ್ ಮುಖಂಡರನ್ನು ಗ್ರಾಮದ ಒಳಗೆ ನಿಷೇಧಿಸಲಾಗಿದೆ ಎಂದು ಬರೆಸಲಾಗಿದೆ.
ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಿದ್ದಾರೆ.
ಗ್ರಾಮಕ್ಕೆ ನೀಡುವ ಅನುದಾನ ವಿಚಾರವಾಗಿ ಬೇಸರಪಟ್ಟುಕೊಂಡು ಗ್ರಾಮದ ಯುವಕರು ಈ ರೀತಿ ಫ್ಲೆಕ್ಸ್ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಫ್ಲೆಕ್ಸ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫ್ಲೆಕ್ಸ್ ಫೋಟೋಗಳು ಭಾರಿ ವೈರಲ್ ಆಗುತ್ತಿದ್ದಂತೆ ಗ್ರಾಮಸ್ಥರು ತೆರವುಗೊಳಿಸಿದರು.
Published On - 8:26 am, Tue, 21 January 25