
ತೆಲುಗಿನ ವೆಂಕಿ-ಅನಿಲ್ ರವಿಪುಡಿ ಕಾಂಬಿನೇಷನ್ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಚಿತ್ರರಂಗದ ಗಣ್ಯರು ಮತ್ತು ಚಿತ್ರತಂಡದ ಸಮ್ಮುಖದಲ್ಲಿ ಈ ಹೊಸ ಚಿತ್ರಕ್ಕೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಈ ಅದ್ಧೂರಿ ಸಮಾರಂಭದಲ್ಲಿ ಚಿತ್ರದ ಪ್ರಮುಖ ಕಲಾವಿದರು ಭಾಗವಹಿಸಿದ್ದರು.

ಖ್ಯಾತ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರು ಚಿತ್ರದ ಅಧಿಕೃತ ಚಿತ್ರಕಥೆಯನ್ನು ತಂಡಕ್ಕೆ ಹಸ್ತಾಂತರಿಸಿದರು. ಮುಹೂರ್ತದ ಮೊದಲ ದೃಶ್ಯಕ್ಕೆ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಈ ಸಿನಿಮಾದಲ್ಲಿ ಕೃತಿ ಶೆಟ್ಟಿ, ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ.

ಖ್ಯಾತ ನಿರ್ಮಾಪಕ ಸುರೇಶ್ ಬಾಬು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರು ಮುಖ್ಯ ತಾರಾಗಣದ ಮೊದಲ ದೃಶ್ಯಕ್ಕೆ ಆ್ಯಕ್ಷನ್ ಕಟ್ ಹೇಳಿದರು.

ಹಬ್ಬದ ದಿನಗಳಲ್ಲಿ ಬ್ಲಾಕ್ಬಸ್ಟರ್ ಸಿನಿಮಾಗಳನ್ನು ನೀಡುವುದು ಅನಿಲ್ ರವಿಪುಡಿ ಸಂಪ್ರದಾಯ. ಅವರ ಈ ಚಿತ್ರವನ್ನು ಸಂಕ್ರಾಂತಿ ಹಬ್ಬದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಕಲ ಯೋಜನೆಗಳನ್ನು ಈಗಿನಿಂದಲೇ ರೂಪಿಸಿಕೊಳ್ಳುತ್ತಿದೆ.

ಶೈನ್ ಸ್ಕ್ರೀನ್ಸ್ ಬ್ಯಾನರ್ನಡಿ ಸಾಹು ಗಾರಪಾಟಿ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನೀಡುತ್ತಿದ್ದು, ಸಮೀರ್ ರೆಡ್ಡಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.