AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತದಲ್ಲಿ ಡೆಪ್ಯೂಟಿ ಸ್ಪೀಕರ್​ ರುದ್ರಪ್ಪ ಲಮಾಣಿಗೆ ಗಾಯ, ಆಸ್ಪತ್ರೆಗೆ ದಾಖಲು

ಚಿತ್ರದುರ್ಗದ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು (ಮಾರ್ಚ್ 14) ಸಂಭವಿಸಿದ ರಸ್ತ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ. ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸದ್ಯ ಅವರನ್ನು ದಾವಣಗೆರೆಯ ಎಸ್‌ಎಸ್‌ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಮೇಶ್ ಬಿ. ಜವಳಗೇರಾ
|

Updated on:Mar 14, 2025 | 9:33 PM

Share
ಚಿತ್ರದುರ್ಗ  ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ.

1 / 9
ರಸ್ತೆ ಅಪಘಾತದಲ್ಲಿ ಡೆಪ್ಯೂಟಿ ಸ್ಪೀಕರ್​ ರುದ್ರಪ್ಪ ಲಮಾಣಿಗೆ ಗಾಯ, ಆಸ್ಪತ್ರೆಗೆ ದಾಖಲು

Vidhana Sabha Deputy Speaker rudrappa Lamani Who Injured In Accident Shifts To Bengaluru From Davanagere News in kannada

2 / 9
 ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಬಿದ್ದ ಪರಿಣಾಮ ರುದ್ರಪ್ಪ ಲಮಾಣಿ ಅವರ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಹಿರಿಯೂರಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಬಿದ್ದ ಪರಿಣಾಮ ರುದ್ರಪ್ಪ ಲಮಾಣಿ ಅವರ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಹಿರಿಯೂರಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

3 / 9
ಎಸ್ ಎಸ್ ಆಸ್ಪತ್ರೆ ಗೆ ಆಗಮಿಸಿದ ರುದ್ರಪ್ಪ ಲಮಾಣಿ. ಚಿಕಿತ್ಸೆ ಆರಂಭವಾಗಿದ್ದು,  ಗದ್ದಕ್ಕೆ ಪೆಟ್ಟಾಗಿ ಸ್ವಲ್ಪ ಪ್ರಮಾಣದಲ್ಲಿ ರಕ್ತಸ್ರಾವಾಗಿದೆ. ಹಾಗೇ ಬಿಪಿ‌ ನಾರ್ಮಲ್ ಇದೆ.

ಎಸ್ ಎಸ್ ಆಸ್ಪತ್ರೆ ಗೆ ಆಗಮಿಸಿದ ರುದ್ರಪ್ಪ ಲಮಾಣಿ. ಚಿಕಿತ್ಸೆ ಆರಂಭವಾಗಿದ್ದು, ಗದ್ದಕ್ಕೆ ಪೆಟ್ಟಾಗಿ ಸ್ವಲ್ಪ ಪ್ರಮಾಣದಲ್ಲಿ ರಕ್ತಸ್ರಾವಾಗಿದೆ. ಹಾಗೇ ಬಿಪಿ‌ ನಾರ್ಮಲ್ ಇದೆ.

4 / 9
ಅಧಿವೇಶನ ಮುಗಿಸಿಕೊಂಡು ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ರುದ್ರಪ್ಪ ಲಮಾಣಿ ಅವರು ಮೂತ್ರ ವಿಸರ್ಜನೆಗೆಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿನಿಂದ ಕೆಳಗಿಳಿದಿದ್ದಾರೆ. ಈ ವೇಳೆ ಬೈಕ್​ ಬಂದು ಡಿಕ್ಕಿ ಹೊಡೆದಿದೆ.

ಅಧಿವೇಶನ ಮುಗಿಸಿಕೊಂಡು ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ರುದ್ರಪ್ಪ ಲಮಾಣಿ ಅವರು ಮೂತ್ರ ವಿಸರ್ಜನೆಗೆಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿನಿಂದ ಕೆಳಗಿಳಿದಿದ್ದಾರೆ. ಈ ವೇಳೆ ಬೈಕ್​ ಬಂದು ಡಿಕ್ಕಿ ಹೊಡೆದಿದೆ.

5 / 9
ಮೂತ್ರ ವಿಸರ್ಜನೆಗೆಂದು ತಮ್ಮ ಕಾರಿನಿಂದ ಇಳಿದಾಗ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸಡನ್‌ ಆಗಿ ಬಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿಯವರ ತಲೆ, ಕೈಕಾಲುಗಳಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೂತ್ರ ವಿಸರ್ಜನೆಗೆಂದು ತಮ್ಮ ಕಾರಿನಿಂದ ಇಳಿದಾಗ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸಡನ್‌ ಆಗಿ ಬಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿಯವರ ತಲೆ, ಕೈಕಾಲುಗಳಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

6 / 9
ಶಿಗ್ಗಾಂವ್ ಶಾಸಕ ಯಾಸೀರ್ ಖಾನ್  ಪಠಾಣ್ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್  ಸೇರಿದಂತೆ ಪ್ರಮುಖರು  ಆಸ್ಪತ್ರೆಯಲ್ಲಿದ್ದಾರೆ. ಇನ್ನು  ಆಸ್ಪತ್ರೆಯ ಎದುರು ಬೆಂಬಲಿಗರು ಸಹ ಜಮಾಯಿಸಿದ್ದಾರೆ.

ಶಿಗ್ಗಾಂವ್ ಶಾಸಕ ಯಾಸೀರ್ ಖಾನ್ ಪಠಾಣ್ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಸೇರಿದಂತೆ ಪ್ರಮುಖರು ಆಸ್ಪತ್ರೆಯಲ್ಲಿದ್ದಾರೆ. ಇನ್ನು ಆಸ್ಪತ್ರೆಯ ಎದುರು ಬೆಂಬಲಿಗರು ಸಹ ಜಮಾಯಿಸಿದ್ದಾರೆ.

7 / 9
ಇನ್ನು ಈ ಬಗ್ಗೆ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪ್ರತಿಕ್ರಿಯಿಸಿದ್ದು,  ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಯಾವುದೇ ಸಮಸ್ಯೆಯಿಲ್ಲ. ತಲೆ, ಗದ್ದಕ್ಕೆ ಪೆಟ್ಟಾಗಿದ್ದು, ವೈದ್ಯರು ಚಿಕಿತ್ಸೆ  ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಈ ಬಗ್ಗೆ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪ್ರತಿಕ್ರಿಯಿಸಿದ್ದು, ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಯಾವುದೇ ಸಮಸ್ಯೆಯಿಲ್ಲ. ತಲೆ, ಗದ್ದಕ್ಕೆ ಪೆಟ್ಟಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

8 / 9
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು  ಶಿಗ್ಗಾಂವ್ ಶಾಸಕ ಯಾಸೀನ್ ಖಾನ್ ಪಠಾಣ ಅವರಿಗೆ ದೂರವಾಣಿ ಕರೆ ಮಾಡಿ ರುದ್ರಪ್ಪ ಲಮಾಣಿ ಆರೋಗ್ಯ ವಿಚಾರಿಸಿದ್ದಾರೆ. ಹಾಗೇ ಖುದ್ದು ರುದ್ರಪ್ಪ ಲಮಾಣಿ ಸಹ ಸಿಎಂ ಜೊತೆ ಮಾತನಾಡಿದ್ದು, ಸದ್ಯ ವೈದ್ಯರು ರುದ್ರಪ್ಪ ಲಮಾಣಿ ಅವರನ್ನು ಸಿಟಿ ಸ್ಕ್ಯಾನ್ ಗೆ ಕರೆದುಕೊಂಡು ಹೋಗಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಗ್ಗಾಂವ್ ಶಾಸಕ ಯಾಸೀನ್ ಖಾನ್ ಪಠಾಣ ಅವರಿಗೆ ದೂರವಾಣಿ ಕರೆ ಮಾಡಿ ರುದ್ರಪ್ಪ ಲಮಾಣಿ ಆರೋಗ್ಯ ವಿಚಾರಿಸಿದ್ದಾರೆ. ಹಾಗೇ ಖುದ್ದು ರುದ್ರಪ್ಪ ಲಮಾಣಿ ಸಹ ಸಿಎಂ ಜೊತೆ ಮಾತನಾಡಿದ್ದು, ಸದ್ಯ ವೈದ್ಯರು ರುದ್ರಪ್ಪ ಲಮಾಣಿ ಅವರನ್ನು ಸಿಟಿ ಸ್ಕ್ಯಾನ್ ಗೆ ಕರೆದುಕೊಂಡು ಹೋಗಿದ್ದಾರೆ.

9 / 9

Published On - 9:16 pm, Fri, 14 March 25

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು