ಎಷ್ಟೊಂದು ಖುಷಿಯಾಗಿತ್ತು ಸ್ಪಂದನಾ-ವಿಜಯ್​ ರಾಘವೇಂದ್ರ ಕುಟುಂಬ; ಈಗ ಬರೀ ಕಣ್ಣೀರು

Updated on: Aug 11, 2023 | 12:19 PM

Spandana Vijay Raghavendra Photos: ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಖುಷಿಯಿಂದ ಕಾಲ ಕಳೆದ ಒಂದಷ್ಟು ಫೋಟೋಗಳು ಲಭ್ಯವಾಗಿವೆ. ಈಗ ಸ್ಪಂದನಾ ಅವರನ್ನು ಎಲ್ಲರೂ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

1 / 7
ನಟ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಅವರ ಕುಟುಂಬದಲ್ಲಿ ಈಗ ಶೋಕದ ವಾತಾವರಣ ನಿರ್ಮಾಣ ಆಗಿದೆ.

ನಟ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಅವರ ಕುಟುಂಬದಲ್ಲಿ ಈಗ ಶೋಕದ ವಾತಾವರಣ ನಿರ್ಮಾಣ ಆಗಿದೆ.

2 / 7
2007ರಲ್ಲಿ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಬ್ಬರ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು.

2007ರಲ್ಲಿ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಬ್ಬರ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು.

3 / 7
ನಿವೃತ್ತ ಪೊಲೀಸ್​ ಅಧಿಕಾರಿ ಬಿ.ಕೆ. ಶಿವರಾಂ ಅವರ ಮಗಳು ಸ್ಪಂದನಾ. ಅವರನ್ನು ಮೊದಲ ಸಲ ನೋಡಿದಾಗಲೇ ವಿಜಯ್​ ರಾಘವೇಂದ್ರ ಮನ ಸೋತಿದ್ದರು.

ನಿವೃತ್ತ ಪೊಲೀಸ್​ ಅಧಿಕಾರಿ ಬಿ.ಕೆ. ಶಿವರಾಂ ಅವರ ಮಗಳು ಸ್ಪಂದನಾ. ಅವರನ್ನು ಮೊದಲ ಸಲ ನೋಡಿದಾಗಲೇ ವಿಜಯ್​ ರಾಘವೇಂದ್ರ ಮನ ಸೋತಿದ್ದರು.

4 / 7
ಎರಡೂ ಕುಟುಂಬದವರ ಒಪ್ಪಿಗೆ ಸಿಕ್ಕ ಬಳಿಕ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರ ಮದುವೆ ನೆರವೇರಿತ್ತು. ಈ ದಂಪತಿಗೆ ಶೌರ್ಯ ಎಂಬ ಮಗನಿದ್ದಾನೆ.

ಎರಡೂ ಕುಟುಂಬದವರ ಒಪ್ಪಿಗೆ ಸಿಕ್ಕ ಬಳಿಕ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರ ಮದುವೆ ನೆರವೇರಿತ್ತು. ಈ ದಂಪತಿಗೆ ಶೌರ್ಯ ಎಂಬ ಮಗನಿದ್ದಾನೆ.

5 / 7
ಈಗ ಸ್ಪಂದನಾ ಅವರನ್ನು ಕಳೆದುಕೊಂಡು ವಿಜಯ್​ ರಾಘವೇಂದ್ರ ಅವರು ಮರುಗುತ್ತಿದ್ದಾರೆ. ಆಪ್ತರಿಂದ ಮತ್ತು ಸ್ನೇಹಿತರಿಂದ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

ಈಗ ಸ್ಪಂದನಾ ಅವರನ್ನು ಕಳೆದುಕೊಂಡು ವಿಜಯ್​ ರಾಘವೇಂದ್ರ ಅವರು ಮರುಗುತ್ತಿದ್ದಾರೆ. ಆಪ್ತರಿಂದ ಮತ್ತು ಸ್ನೇಹಿತರಿಂದ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

6 / 7
ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಸ್ಪಂದನಾ ಅವರಿಗೆ ಆಸಕ್ತಿ ಇರಲಿಲ್ಲ. ‘ಅಪೂರ್ವ’ ಸಿನಿಮಾದಲ್ಲಿ ಅವರು ವಿಜಯ್​ ರಾಜವೇಂದ್ರ ಜೊತೆ ತೆರೆಹಂಚಿಕೊಂಡಿದ್ದರು.

ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಸ್ಪಂದನಾ ಅವರಿಗೆ ಆಸಕ್ತಿ ಇರಲಿಲ್ಲ. ‘ಅಪೂರ್ವ’ ಸಿನಿಮಾದಲ್ಲಿ ಅವರು ವಿಜಯ್​ ರಾಜವೇಂದ್ರ ಜೊತೆ ತೆರೆಹಂಚಿಕೊಂಡಿದ್ದರು.

7 / 7
ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಅವರಿಗೆ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನ ಆಗಲಿಲ್ಲ.

ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಅವರಿಗೆ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನ ಆಗಲಿಲ್ಲ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us