AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 9ರಿಂದ ‘ಕಲರ್ಸ್ ಕನ್ನಡ’ದಲ್ಲಿ ಬರಲಿದೆ ಹೊಸ ಸೀರಿಯಲ್​ ‘ದೃಷ್ಟಿಬೊಟ್ಟು’

‘ದೃಷ್ಟಿಬೊಟ್ಟು’ ಸೀರಿಯಲ್​ನಲ್ಲಿ ವಿಜಯ್ ಸೂರ್ಯ, ಅರ್ಪಿತಾ ಮೋಹಿತೆ, ಅಂಬಿಕಾ ಮುಂತಾದವರು ನಟಿಸುತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಮಾತ್ರವಲ್ಲದೇ ‘ಜಿಯೋ ಸಿನಿಮಾ’ ಆ್ಯಪ್ ಮೂಲಕವೂ ಈ ಧಾರಾವಾಹಿಯನ್ನು ವೀಕ್ಷಿಸಬಹುದು. ಇತ್ತೀಚೆಗೆ ಧಾರಾವಾಹಿ ತಂಡದವರು ಸುದ್ದಿಗೋಷ್ಠಿ ನಡೆಸಿದರು. ಕಥೆ ಮತ್ತು ಪಾತ್ರವರ್ಗದ ಬಗ್ಗೆ ಇಲ್ಲಿದೆ ಮಾಹಿತಿ..

ಮದನ್​ ಕುಮಾರ್​
|

Updated on: Sep 06, 2024 | 7:13 PM

Share
‘ಕಲರ್ಸ್ ಕನ್ನಡ’ ಚಾನೆಲ್​ನಲ್ಲಿ ಹೊಸ ಧಾರಾವಾಹಿಯ ಪ್ರಸಾರಕ್ಕೆ ಸಿದ್ಧತೆ ನಡೆದಿದೆ. ರೂಪವೇ ಶಾಪವಾದ ಹುಡುಗಿಯ ಕಹಾನಿ ಈ ಸೀರಿಯಲ್​ನಲ್ಲಿ ಇರಲಿದೆ. ಈ ಹೊಸ ಸೀರಿಯಲ್​ ಹೆಸರು ‘ದೃಷ್ಟಿಬೊಟ್ಟು’. ಸೆ.9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ 6.30ಕ್ಕೆ ಈ ಧಾರಾವಾಹಿ ಪ್ರಸಾರ ಆಗಲಿದೆ. ವಿಜಯ್ ಸೂರ್ಯ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

‘ಕಲರ್ಸ್ ಕನ್ನಡ’ ಚಾನೆಲ್​ನಲ್ಲಿ ಹೊಸ ಧಾರಾವಾಹಿಯ ಪ್ರಸಾರಕ್ಕೆ ಸಿದ್ಧತೆ ನಡೆದಿದೆ. ರೂಪವೇ ಶಾಪವಾದ ಹುಡುಗಿಯ ಕಹಾನಿ ಈ ಸೀರಿಯಲ್​ನಲ್ಲಿ ಇರಲಿದೆ. ಈ ಹೊಸ ಸೀರಿಯಲ್​ ಹೆಸರು ‘ದೃಷ್ಟಿಬೊಟ್ಟು’. ಸೆ.9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ 6.30ಕ್ಕೆ ಈ ಧಾರಾವಾಹಿ ಪ್ರಸಾರ ಆಗಲಿದೆ. ವಿಜಯ್ ಸೂರ್ಯ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

1 / 5
‘ದೃಷ್ಟಿಬೊಟ್ಟು’ ಸೀರಿಯಲ್​ನ ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಅಭಿನಯಿಸುತ್ತಿದ್ದಾರೆ. ಹಿರಿಯ ನಟಿ ಅಂಬಿಕಾ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಮುಂತಾದವರು ಈ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ. ‘ಈ ಸೀರಿಯಲ್​ನ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನ ಗೆಲ್ಲುತ್ತದೆ’ ಎಂದು ವಾಹಿನಿಯ ಬಿಸ್ನೆಸ್​ ಹೆಡ್ ಪ್ರಶಾಂತ್ ನಾಯಕ್ ಹೇಳಿದ್ದಾರೆ.

‘ದೃಷ್ಟಿಬೊಟ್ಟು’ ಸೀರಿಯಲ್​ನ ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಅಭಿನಯಿಸುತ್ತಿದ್ದಾರೆ. ಹಿರಿಯ ನಟಿ ಅಂಬಿಕಾ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಮುಂತಾದವರು ಈ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ. ‘ಈ ಸೀರಿಯಲ್​ನ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನ ಗೆಲ್ಲುತ್ತದೆ’ ಎಂದು ವಾಹಿನಿಯ ಬಿಸ್ನೆಸ್​ ಹೆಡ್ ಪ್ರಶಾಂತ್ ನಾಯಕ್ ಹೇಳಿದ್ದಾರೆ.

2 / 5
ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಚಿತ್ರೀಕರಣ ಮಾಡಿರುವುದು ಹೆಗ್ಗಳಿಕೆ. ಸ್ಪರ್ಶ್ ಮಸಾಲಾ ಈ ಧಾರಾವಾಹಿಯ ಸ್ಪೆಷಲ್ ಪಾರ್ಟ್ನರ್​ ಆಗಿದ್ದಾರೆ. 2 ವಿಭಿನ್ನ ಕೌಟುಂಬಿಕ ಹಿನ್ನೆಲೆಯಿಂದ ಬಂದ ದೃಷ್ಟಿ ಎಂಬ ಹುಡುಗಿ ಮತ್ತು ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಒಂದೆಡೆ ಸಂಧಿಸಿದಾಗ ನಡೆಯುವ ಕೌತುಕದ ಕಥೆ ಈ ಸೀರಿಯಲ್​ನಲ್ಲಿ ಇದೆ.

ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಚಿತ್ರೀಕರಣ ಮಾಡಿರುವುದು ಹೆಗ್ಗಳಿಕೆ. ಸ್ಪರ್ಶ್ ಮಸಾಲಾ ಈ ಧಾರಾವಾಹಿಯ ಸ್ಪೆಷಲ್ ಪಾರ್ಟ್ನರ್​ ಆಗಿದ್ದಾರೆ. 2 ವಿಭಿನ್ನ ಕೌಟುಂಬಿಕ ಹಿನ್ನೆಲೆಯಿಂದ ಬಂದ ದೃಷ್ಟಿ ಎಂಬ ಹುಡುಗಿ ಮತ್ತು ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಒಂದೆಡೆ ಸಂಧಿಸಿದಾಗ ನಡೆಯುವ ಕೌತುಕದ ಕಥೆ ಈ ಸೀರಿಯಲ್​ನಲ್ಲಿ ಇದೆ.

3 / 5
ದೃಷ್ಟಿಯ ಪಾಲಿಗೆ ರೂಪ ಎನ್ನುವುದೇ ಶಾಪವಾಗಿರುತ್ತದೆ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುವ ಅವಳಿಗೆ ತನ್ನ ಸೋದರಿಯನ್ನು ಮತ್ತೆ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಆಸೆ. ಮೊದಲು ಮೆಕ್ಯಾನಿಕ್ ಆಗಿ ಈಗ ರೌಡಿಯಾಗಿರುವ ಹೀರೋ ದತ್ತನಿಗೆ ಸುಂದರವಾದ ಹೆಣ್ಣುಗಳನ್ನ ಕಂಡರೆ ಕೋಪ. ಇಂಥ ಡಿಫರೆಂಟ್​ ಆದ ಕಥಾಹಂದರದಲ್ಲಿ ಈ ಸೀರಿಯಲ್​ ಮೂಡಿಬರಲಿದೆ.

ದೃಷ್ಟಿಯ ಪಾಲಿಗೆ ರೂಪ ಎನ್ನುವುದೇ ಶಾಪವಾಗಿರುತ್ತದೆ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುವ ಅವಳಿಗೆ ತನ್ನ ಸೋದರಿಯನ್ನು ಮತ್ತೆ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಆಸೆ. ಮೊದಲು ಮೆಕ್ಯಾನಿಕ್ ಆಗಿ ಈಗ ರೌಡಿಯಾಗಿರುವ ಹೀರೋ ದತ್ತನಿಗೆ ಸುಂದರವಾದ ಹೆಣ್ಣುಗಳನ್ನ ಕಂಡರೆ ಕೋಪ. ಇಂಥ ಡಿಫರೆಂಟ್​ ಆದ ಕಥಾಹಂದರದಲ್ಲಿ ಈ ಸೀರಿಯಲ್​ ಮೂಡಿಬರಲಿದೆ.

4 / 5
ಕಥೆಯು ಹಲವು ಊಹಿಸಲಾಗದ ಟ್ವಿಸ್ಟ್​ಗಳನ್ನು ಪಡೆಯುತ್ತಾ ಸಾಗುತ್ತದೆ. ದೃಷ್ಟಿಗೆ ತನ್ನ ಸಹೋದರಿ ಸಿಕ್ಕುತ್ತಾಳಾ? ದತ್ತ ಮತ್ತು ದೃಷ್ಟಿಯನ್ನು ವಿಧಿ ಒಂದಾಗಿಸುತ್ತಾ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಲು ಸಾಧ್ಯವಾಗುತ್ತಾ? ಇಂಥ ಅನೇಕ ಪ್ರಶ್ನೆಗಳಿಗೆ ಉತ್ತರ ಸಿಗಲು ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ವೀಕ್ಷಿಸಬೇಕು.

ಕಥೆಯು ಹಲವು ಊಹಿಸಲಾಗದ ಟ್ವಿಸ್ಟ್​ಗಳನ್ನು ಪಡೆಯುತ್ತಾ ಸಾಗುತ್ತದೆ. ದೃಷ್ಟಿಗೆ ತನ್ನ ಸಹೋದರಿ ಸಿಕ್ಕುತ್ತಾಳಾ? ದತ್ತ ಮತ್ತು ದೃಷ್ಟಿಯನ್ನು ವಿಧಿ ಒಂದಾಗಿಸುತ್ತಾ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಲು ಸಾಧ್ಯವಾಗುತ್ತಾ? ಇಂಥ ಅನೇಕ ಪ್ರಶ್ನೆಗಳಿಗೆ ಉತ್ತರ ಸಿಗಲು ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ವೀಕ್ಷಿಸಬೇಕು.

5 / 5
Follow Us
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ