AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 9ರಿಂದ ‘ಕಲರ್ಸ್ ಕನ್ನಡ’ದಲ್ಲಿ ಬರಲಿದೆ ಹೊಸ ಸೀರಿಯಲ್​ ‘ದೃಷ್ಟಿಬೊಟ್ಟು’

‘ದೃಷ್ಟಿಬೊಟ್ಟು’ ಸೀರಿಯಲ್​ನಲ್ಲಿ ವಿಜಯ್ ಸೂರ್ಯ, ಅರ್ಪಿತಾ ಮೋಹಿತೆ, ಅಂಬಿಕಾ ಮುಂತಾದವರು ನಟಿಸುತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಮಾತ್ರವಲ್ಲದೇ ‘ಜಿಯೋ ಸಿನಿಮಾ’ ಆ್ಯಪ್ ಮೂಲಕವೂ ಈ ಧಾರಾವಾಹಿಯನ್ನು ವೀಕ್ಷಿಸಬಹುದು. ಇತ್ತೀಚೆಗೆ ಧಾರಾವಾಹಿ ತಂಡದವರು ಸುದ್ದಿಗೋಷ್ಠಿ ನಡೆಸಿದರು. ಕಥೆ ಮತ್ತು ಪಾತ್ರವರ್ಗದ ಬಗ್ಗೆ ಇಲ್ಲಿದೆ ಮಾಹಿತಿ..

ಮದನ್​ ಕುಮಾರ್​
|

Updated on: Sep 06, 2024 | 7:13 PM

‘ಕಲರ್ಸ್ ಕನ್ನಡ’ ಚಾನೆಲ್​ನಲ್ಲಿ ಹೊಸ ಧಾರಾವಾಹಿಯ ಪ್ರಸಾರಕ್ಕೆ ಸಿದ್ಧತೆ ನಡೆದಿದೆ. ರೂಪವೇ ಶಾಪವಾದ ಹುಡುಗಿಯ ಕಹಾನಿ ಈ ಸೀರಿಯಲ್​ನಲ್ಲಿ ಇರಲಿದೆ. ಈ ಹೊಸ ಸೀರಿಯಲ್​ ಹೆಸರು ‘ದೃಷ್ಟಿಬೊಟ್ಟು’. ಸೆ.9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ 6.30ಕ್ಕೆ ಈ ಧಾರಾವಾಹಿ ಪ್ರಸಾರ ಆಗಲಿದೆ. ವಿಜಯ್ ಸೂರ್ಯ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

‘ಕಲರ್ಸ್ ಕನ್ನಡ’ ಚಾನೆಲ್​ನಲ್ಲಿ ಹೊಸ ಧಾರಾವಾಹಿಯ ಪ್ರಸಾರಕ್ಕೆ ಸಿದ್ಧತೆ ನಡೆದಿದೆ. ರೂಪವೇ ಶಾಪವಾದ ಹುಡುಗಿಯ ಕಹಾನಿ ಈ ಸೀರಿಯಲ್​ನಲ್ಲಿ ಇರಲಿದೆ. ಈ ಹೊಸ ಸೀರಿಯಲ್​ ಹೆಸರು ‘ದೃಷ್ಟಿಬೊಟ್ಟು’. ಸೆ.9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ 6.30ಕ್ಕೆ ಈ ಧಾರಾವಾಹಿ ಪ್ರಸಾರ ಆಗಲಿದೆ. ವಿಜಯ್ ಸೂರ್ಯ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

1 / 5
‘ದೃಷ್ಟಿಬೊಟ್ಟು’ ಸೀರಿಯಲ್​ನ ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಅಭಿನಯಿಸುತ್ತಿದ್ದಾರೆ. ಹಿರಿಯ ನಟಿ ಅಂಬಿಕಾ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಮುಂತಾದವರು ಈ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ. ‘ಈ ಸೀರಿಯಲ್​ನ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನ ಗೆಲ್ಲುತ್ತದೆ’ ಎಂದು ವಾಹಿನಿಯ ಬಿಸ್ನೆಸ್​ ಹೆಡ್ ಪ್ರಶಾಂತ್ ನಾಯಕ್ ಹೇಳಿದ್ದಾರೆ.

‘ದೃಷ್ಟಿಬೊಟ್ಟು’ ಸೀರಿಯಲ್​ನ ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಅಭಿನಯಿಸುತ್ತಿದ್ದಾರೆ. ಹಿರಿಯ ನಟಿ ಅಂಬಿಕಾ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಮುಂತಾದವರು ಈ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ. ‘ಈ ಸೀರಿಯಲ್​ನ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನ ಗೆಲ್ಲುತ್ತದೆ’ ಎಂದು ವಾಹಿನಿಯ ಬಿಸ್ನೆಸ್​ ಹೆಡ್ ಪ್ರಶಾಂತ್ ನಾಯಕ್ ಹೇಳಿದ್ದಾರೆ.

2 / 5
ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಚಿತ್ರೀಕರಣ ಮಾಡಿರುವುದು ಹೆಗ್ಗಳಿಕೆ. ಸ್ಪರ್ಶ್ ಮಸಾಲಾ ಈ ಧಾರಾವಾಹಿಯ ಸ್ಪೆಷಲ್ ಪಾರ್ಟ್ನರ್​ ಆಗಿದ್ದಾರೆ. 2 ವಿಭಿನ್ನ ಕೌಟುಂಬಿಕ ಹಿನ್ನೆಲೆಯಿಂದ ಬಂದ ದೃಷ್ಟಿ ಎಂಬ ಹುಡುಗಿ ಮತ್ತು ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಒಂದೆಡೆ ಸಂಧಿಸಿದಾಗ ನಡೆಯುವ ಕೌತುಕದ ಕಥೆ ಈ ಸೀರಿಯಲ್​ನಲ್ಲಿ ಇದೆ.

ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಚಿತ್ರೀಕರಣ ಮಾಡಿರುವುದು ಹೆಗ್ಗಳಿಕೆ. ಸ್ಪರ್ಶ್ ಮಸಾಲಾ ಈ ಧಾರಾವಾಹಿಯ ಸ್ಪೆಷಲ್ ಪಾರ್ಟ್ನರ್​ ಆಗಿದ್ದಾರೆ. 2 ವಿಭಿನ್ನ ಕೌಟುಂಬಿಕ ಹಿನ್ನೆಲೆಯಿಂದ ಬಂದ ದೃಷ್ಟಿ ಎಂಬ ಹುಡುಗಿ ಮತ್ತು ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಒಂದೆಡೆ ಸಂಧಿಸಿದಾಗ ನಡೆಯುವ ಕೌತುಕದ ಕಥೆ ಈ ಸೀರಿಯಲ್​ನಲ್ಲಿ ಇದೆ.

3 / 5
ದೃಷ್ಟಿಯ ಪಾಲಿಗೆ ರೂಪ ಎನ್ನುವುದೇ ಶಾಪವಾಗಿರುತ್ತದೆ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುವ ಅವಳಿಗೆ ತನ್ನ ಸೋದರಿಯನ್ನು ಮತ್ತೆ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಆಸೆ. ಮೊದಲು ಮೆಕ್ಯಾನಿಕ್ ಆಗಿ ಈಗ ರೌಡಿಯಾಗಿರುವ ಹೀರೋ ದತ್ತನಿಗೆ ಸುಂದರವಾದ ಹೆಣ್ಣುಗಳನ್ನ ಕಂಡರೆ ಕೋಪ. ಇಂಥ ಡಿಫರೆಂಟ್​ ಆದ ಕಥಾಹಂದರದಲ್ಲಿ ಈ ಸೀರಿಯಲ್​ ಮೂಡಿಬರಲಿದೆ.

ದೃಷ್ಟಿಯ ಪಾಲಿಗೆ ರೂಪ ಎನ್ನುವುದೇ ಶಾಪವಾಗಿರುತ್ತದೆ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುವ ಅವಳಿಗೆ ತನ್ನ ಸೋದರಿಯನ್ನು ಮತ್ತೆ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಆಸೆ. ಮೊದಲು ಮೆಕ್ಯಾನಿಕ್ ಆಗಿ ಈಗ ರೌಡಿಯಾಗಿರುವ ಹೀರೋ ದತ್ತನಿಗೆ ಸುಂದರವಾದ ಹೆಣ್ಣುಗಳನ್ನ ಕಂಡರೆ ಕೋಪ. ಇಂಥ ಡಿಫರೆಂಟ್​ ಆದ ಕಥಾಹಂದರದಲ್ಲಿ ಈ ಸೀರಿಯಲ್​ ಮೂಡಿಬರಲಿದೆ.

4 / 5
ಕಥೆಯು ಹಲವು ಊಹಿಸಲಾಗದ ಟ್ವಿಸ್ಟ್​ಗಳನ್ನು ಪಡೆಯುತ್ತಾ ಸಾಗುತ್ತದೆ. ದೃಷ್ಟಿಗೆ ತನ್ನ ಸಹೋದರಿ ಸಿಕ್ಕುತ್ತಾಳಾ? ದತ್ತ ಮತ್ತು ದೃಷ್ಟಿಯನ್ನು ವಿಧಿ ಒಂದಾಗಿಸುತ್ತಾ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಲು ಸಾಧ್ಯವಾಗುತ್ತಾ? ಇಂಥ ಅನೇಕ ಪ್ರಶ್ನೆಗಳಿಗೆ ಉತ್ತರ ಸಿಗಲು ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ವೀಕ್ಷಿಸಬೇಕು.

ಕಥೆಯು ಹಲವು ಊಹಿಸಲಾಗದ ಟ್ವಿಸ್ಟ್​ಗಳನ್ನು ಪಡೆಯುತ್ತಾ ಸಾಗುತ್ತದೆ. ದೃಷ್ಟಿಗೆ ತನ್ನ ಸಹೋದರಿ ಸಿಕ್ಕುತ್ತಾಳಾ? ದತ್ತ ಮತ್ತು ದೃಷ್ಟಿಯನ್ನು ವಿಧಿ ಒಂದಾಗಿಸುತ್ತಾ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಲು ಸಾಧ್ಯವಾಗುತ್ತಾ? ಇಂಥ ಅನೇಕ ಪ್ರಶ್ನೆಗಳಿಗೆ ಉತ್ತರ ಸಿಗಲು ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ವೀಕ್ಷಿಸಬೇಕು.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ