Rishika Sharma Nihal Marriage: ‘ವಿಜಯಾನಂದ’ ಚಿತ್ರದ ನಿರ್ದೇಶಕಿ ರಿಷಿಕಾ ಶರ್ಮಾ ಜೊತೆ ಹೀರೋ ನಿಹಾಲ್​ ಮದುವೆ

Updated on: Feb 02, 2023 | 10:27 PM

Rishika Sharma | Nihal: ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಸಿಹಿ ಸುದ್ದಿ ನೀಡಿದ್ದಾರೆ. ಹಸೆಮಣೆ ಏರಲು ಈ ಸೆಲೆಬ್ರಿಟಿ ಜೋಡಿ ಸಜ್ಜಾಗಿದೆ.

1 / 5
ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಿಹಾಲ್​ ​ ಹಾಗೂ ನಿರ್ದೇಶಕಿ ರಿಷಿಕಾ ಶರ್ಮಾ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಈ ಜೋಡಿಯ ಮದುವೆ ನೆರವೇರಲಿದೆ.

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಿಹಾಲ್​ ​ ಹಾಗೂ ನಿರ್ದೇಶಕಿ ರಿಷಿಕಾ ಶರ್ಮಾ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಈ ಜೋಡಿಯ ಮದುವೆ ನೆರವೇರಲಿದೆ.

2 / 5
ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಗುಡ್​ ನ್ಯೂಸ್​ ನೀಡಿದ್ದಾರೆ. ‘ವಿಜಯಾನಂದ’ ಸಿನಿಮಾದಲ್ಲಿ ಇವರಿಬ್ಬರು ಜೊತೆಯಾಗಿ ಕೆಲಸ ಮಾಡಿದ್ದರು. ಈಗ ಪತಿ-ಪತ್ನಿ ಆಗುತ್ತಿದ್ದಾರೆ. ಫೆಬ್ರವರಿ 15ರಂದು ಮದುವೆ ಆಗುತ್ತಿರುವುದಾಗಿ ಈ ಜೋಡಿ ತಿಳಿಸಿದೆ.

ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಗುಡ್​ ನ್ಯೂಸ್​ ನೀಡಿದ್ದಾರೆ. ‘ವಿಜಯಾನಂದ’ ಸಿನಿಮಾದಲ್ಲಿ ಇವರಿಬ್ಬರು ಜೊತೆಯಾಗಿ ಕೆಲಸ ಮಾಡಿದ್ದರು. ಈಗ ಪತಿ-ಪತ್ನಿ ಆಗುತ್ತಿದ್ದಾರೆ. ಫೆಬ್ರವರಿ 15ರಂದು ಮದುವೆ ಆಗುತ್ತಿರುವುದಾಗಿ ಈ ಜೋಡಿ ತಿಳಿಸಿದೆ.

3 / 5
ಕಳೆದ 9 ವರ್ಷಗಳಿಂದಲೂ ನಿಹಾಲ್​ ಮತ್ತು ರಿಷಿಕಾ ಶರ್ಮಾ ಪರಸ್ಪರ ಪ್ರೀತಿಸುತ್ತಿದ್ದರು. ಈಗ ಇಬ್ಬರ ಪ್ರೀತಿಗೆ ಮದುವೆ ಮುದ್ರೆ ಬೀಳುತ್ತಿದೆ. ಇಬ್ಬರಿಗೂ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು, ಆಪ್ತರು ಹಾಗೂ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಕಳೆದ 9 ವರ್ಷಗಳಿಂದಲೂ ನಿಹಾಲ್​ ಮತ್ತು ರಿಷಿಕಾ ಶರ್ಮಾ ಪರಸ್ಪರ ಪ್ರೀತಿಸುತ್ತಿದ್ದರು. ಈಗ ಇಬ್ಬರ ಪ್ರೀತಿಗೆ ಮದುವೆ ಮುದ್ರೆ ಬೀಳುತ್ತಿದೆ. ಇಬ್ಬರಿಗೂ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು, ಆಪ್ತರು ಹಾಗೂ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

4 / 5
ಫೆಬ್ರವರಿ 15ರಂದು ಬೆಂಗಳೂರಿನ ಮಲ್ಲೇಶ್ವರದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಸಪ್ತಪದಿ ತುಳಿಯಲಿದ್ದಾರೆ. ಈ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಹಲವರು ಸಾಕ್ಷಿ ಆಗಲಿದ್ದಾರೆ.

ಫೆಬ್ರವರಿ 15ರಂದು ಬೆಂಗಳೂರಿನ ಮಲ್ಲೇಶ್ವರದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಸಪ್ತಪದಿ ತುಳಿಯಲಿದ್ದಾರೆ. ಈ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಹಲವರು ಸಾಕ್ಷಿ ಆಗಲಿದ್ದಾರೆ.

5 / 5
ಮದುವೆ ಬಳಿಕ, ಅಂದರೆ ಫೆಬ್ರವರಿ 17ರಂದು ಮಧ್ಯಾಹ್ನ 12 ಗಂಟೆ ನಂತರ ಧಾರವಾಡದ ಶ್ರೀ ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ರಿಸೆಪ್ಷನ್ ನಡೆಸಲಾಗುವುದು.​ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಸಿಹಿ ಸುದ್ದಿ ನೀಡಿದ್ದಾರೆ.

ಮದುವೆ ಬಳಿಕ, ಅಂದರೆ ಫೆಬ್ರವರಿ 17ರಂದು ಮಧ್ಯಾಹ್ನ 12 ಗಂಟೆ ನಂತರ ಧಾರವಾಡದ ಶ್ರೀ ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ರಿಸೆಪ್ಷನ್ ನಡೆಸಲಾಗುವುದು.​ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಸಿಹಿ ಸುದ್ದಿ ನೀಡಿದ್ದಾರೆ.

Published On - 10:27 pm, Thu, 2 February 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us