AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್ ಬಂಡೆ-ಕಲ್ಲುಗಳನ್ನು ಸೀಳಿ ಸಾತ್ವಿಕ್​ನನ್ನು ಜೀವಂತವಾಗಿ ತಂದ ರಿಯಲ್ ಹೀರೋಗಳು ಇವರೇ

ಕೊಳೆವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದ ಪುಟಾಣಿ ಕಂದ ಸಾತ್ವಿಕ್ ಸಾವು ಗೆದ್ದಿದ್ದಾನೆ. ಮೃತ್ಯುಂಜಯನಾಗಿ ಬಂದಿದ್ದಾನೆ. ನಿರಂತರ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಗೆ ಯಶಸ್ಸು ಸಿಕ್ಕಿದೆ. ಕಂದ ಇಲ್ದೆ ಕಂಗಾಲಾಗಿದ್ದ ಹೆತ್ತವರು ನಿಟ್ಟುಸಿರು ಬಿಟ್ಟಿದ್ದಾರೆ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 05, 2024 | 3:36 PM

Share
ಕಳೆದ ಏಪ್ರಿಲ್​ 3 ರ ಸಾಯಂಕಾಲ 6 ಗಂಟೆ ಸುಮಾರಿಗೆ ತೆರೆದ ಕೊಳವೆ ಬಾವಿಯಲ್ಲಿ ತಲೆ ಕೆಳಗಾಗಿ ಬಿದಿದ್ದು, ಜೀವನ್ಮರಣದ ನಡುವೆ ಹೋರಾಡಿ, 20 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆ ಬಳಿಕ 2 ವರ್ಷದ ಮಗು ಸಾತ್ವಿಕ್​ ಬದುಕಿ ಬಂದಿದ್ದ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

ಕಳೆದ ಏಪ್ರಿಲ್​ 3 ರ ಸಾಯಂಕಾಲ 6 ಗಂಟೆ ಸುಮಾರಿಗೆ ತೆರೆದ ಕೊಳವೆ ಬಾವಿಯಲ್ಲಿ ತಲೆ ಕೆಳಗಾಗಿ ಬಿದಿದ್ದು, ಜೀವನ್ಮರಣದ ನಡುವೆ ಹೋರಾಡಿ, 20 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆ ಬಳಿಕ 2 ವರ್ಷದ ಮಗು ಸಾತ್ವಿಕ್​ ಬದುಕಿ ಬಂದಿದ್ದ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

1 / 5
ಲಚ್ಯಾಣ ಕೊಳವೆ ಬಾವಿ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ವಿಜಯಪುರ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಗಿದೆ.

ಲಚ್ಯಾಣ ಕೊಳವೆ ಬಾವಿ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ವಿಜಯಪುರ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಗಿದೆ.

2 / 5
ಅಗ್ನಿಶಾಮಕ ದಳ, NDRF, SDRF ತಂಡಗಳಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರಿಂದ ಅಭಿನಂದನೆ ಸಲ್ಲಿಸಲಾಗಿದೆ.

ಅಗ್ನಿಶಾಮಕ ದಳ, NDRF, SDRF ತಂಡಗಳಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರಿಂದ ಅಭಿನಂದನೆ ಸಲ್ಲಿಸಲಾಗಿದೆ.

3 / 5
ಬೋರ್‌ವೆಲ್‌ಗೆ ಪರ್ಯಾಯವಾಗಿ 20 ಅಡಿ ಗುಂಡಿ ತೆಗೆಯೋ ಕೆಲಸ ನಡೆದಿತ್ತು. 5 ರಿಂದ 6 ಅಡಿ ತೆರೆಯುವಾಗ ಯಾವುದೇ ಸಮಸ್ಯೆ ಬಂದಿಲ್ಲ. ಆ ಬಳಿಕ ಬಂಡೆಕಲ್ಲು ಸಿಕ್ಕಿತ್ತು. ಕೈಯಿಂದಲೇ ಕಲ್ಲನ್ನ ಒಡೆದು ಮಗುವನ್ನ ತಲುಪಲು ಯತ್ನಿಸಿದರು. ಹೀಗೆ ನಾಜೂಕಾಗಿ ಆಪರೇಷನ್‌ ನಡೆದಿತ್ತು. ಮಧ್ಯಾಹ್ನ 11 ಗಂಟೆ ಹೊತ್ತಲ್ಲಿ ಮಗುವಿನ ಅಳುವಿನ ಶಬ್ದ ಕೇಳಿತ್ತು.

ಬೋರ್‌ವೆಲ್‌ಗೆ ಪರ್ಯಾಯವಾಗಿ 20 ಅಡಿ ಗುಂಡಿ ತೆಗೆಯೋ ಕೆಲಸ ನಡೆದಿತ್ತು. 5 ರಿಂದ 6 ಅಡಿ ತೆರೆಯುವಾಗ ಯಾವುದೇ ಸಮಸ್ಯೆ ಬಂದಿಲ್ಲ. ಆ ಬಳಿಕ ಬಂಡೆಕಲ್ಲು ಸಿಕ್ಕಿತ್ತು. ಕೈಯಿಂದಲೇ ಕಲ್ಲನ್ನ ಒಡೆದು ಮಗುವನ್ನ ತಲುಪಲು ಯತ್ನಿಸಿದರು. ಹೀಗೆ ನಾಜೂಕಾಗಿ ಆಪರೇಷನ್‌ ನಡೆದಿತ್ತು. ಮಧ್ಯಾಹ್ನ 11 ಗಂಟೆ ಹೊತ್ತಲ್ಲಿ ಮಗುವಿನ ಅಳುವಿನ ಶಬ್ದ ಕೇಳಿತ್ತು.

4 / 5
ಒಳಗಡೆ ಸಿಲುಕಿದ್ದ ಮಗು ಅಳುವುದನ್ನ ಕೇಳಿಸಿಕೊಂಡ ರಕ್ಷಣಾ ಸಿಬ್ಬಂದಿಯ ತೋಳಗಳಲ್ಲಿ ಮತ್ತಷ್ಟು ಶಕ್ತಿ ಬಂದಿತ್ತು. 20 ಅಡಿ ಗುಂಡಿ ತೋಡಿದ ಬಳಿಕ ಅಡ್ಡಲಾಗಿ 6 ಅಡಿ ಸುರಂಗ ಕೊರೆಯಲಾಗಿತ್ತು. ಹೀಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸಾತ್ವಿಕ್‌ ಜೀವಂತವಾಗಿ ಹೊರಗೆ ಬಂದಿದ್ದ.

ಒಳಗಡೆ ಸಿಲುಕಿದ್ದ ಮಗು ಅಳುವುದನ್ನ ಕೇಳಿಸಿಕೊಂಡ ರಕ್ಷಣಾ ಸಿಬ್ಬಂದಿಯ ತೋಳಗಳಲ್ಲಿ ಮತ್ತಷ್ಟು ಶಕ್ತಿ ಬಂದಿತ್ತು. 20 ಅಡಿ ಗುಂಡಿ ತೋಡಿದ ಬಳಿಕ ಅಡ್ಡಲಾಗಿ 6 ಅಡಿ ಸುರಂಗ ಕೊರೆಯಲಾಗಿತ್ತು. ಹೀಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸಾತ್ವಿಕ್‌ ಜೀವಂತವಾಗಿ ಹೊರಗೆ ಬಂದಿದ್ದ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?