AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮೇಲ ತಾಲೂಕಿನ ನೂರಾರು ಮಕ್ಕಳಲ್ಲಿ ದಡಾರ ದೃಢ: ಸಾಂಕ್ರಾಮಿಕವಾಗಿ ಹರಡುವ ಭೀತಿ, ಅಧಿಕಾರಿಗಳ ತುರ್ತು ಸಭೆ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕ ಕೇಂದ್ರದಲ್ಲಿ ನೂರಾರು ಮಕ್ಕಳಿಗೆ ಏಕಕಾಲಕ್ಕೆ ದಡಾರ ರೋಗ ಸಾಮೂಹಿಕವಾಗಿ ಹರಡಿಕೊಂಡಿದ್ದು, ಸಾಂಕ್ರಾಮಿಕವಾಗಿ ವ್ಯಾಪಿಸತೊಡಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಒಂದೇ ಗ್ರಾಮದಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ದಡಾರ ಪ್ರಕರಣ ಬೆಳಕಿಗೆ ಬಂದಿದೆ.

TV9 Web
| Edited By: Rakesh Nayak Manchi|

Updated on:Jan 26, 2023 | 10:14 PM

Share
Vijayapura Measles confirmed in hundreds of children in Alamela taluk of Vijayapura news in kannada

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕ ಕೇಂದ್ರದಲ್ಲಿ ನೂರಾರು ಮಕ್ಕಳಿಗೆ ಏಕಕಾಲಕ್ಕೆ ದಡಾರ ರೋಗ ಸಾಮೂಹಿಕವಾಗಿ ಹರಡಿಕೊಂಡಿದ್ದು, ಸಾಂಕ್ರಾಮಿಕವಾಗಿ ವ್ಯಾಪಿಸತೊಡಗಿದೆ. ಆಲಮೇಲ ಪಟ್ಟಣದಲ್ಲಿ 200ಕ್ಕೂ ಹೆಚ್ವಿನ ಮಕ್ಕಳಲ್ಲಿ ದಡಾರ ಮತ್ತು ರುಬೇಲ ಸಾಂಕ್ರಾಮಿಕ ಕಾಯಿಲೆ ದೃಡಪಟ್ಟಿರುವ ವರದಿಯಾಗಿದೆ.

1 / 5
Vijayapura Measles confirmed in hundreds of children in Alamela taluk of Vijayapura news in kannada

ರಾಜ್ಯದಲ್ಲೇ ಮೊದಲ ಬಾರಿಗೆ ಒಂದೇ ಗ್ರಾಮದಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ದಡಾರ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು ಇನ್ನೂರಕ್ಕೂ ಹೆಚ್ಚು ಮಕ್ಕಳಲ್ಲಿ ಸಾಂಕ್ರಾಮಿಕ ರೂಪದಲ್ಲಿ ಕಾಣಿಸಿಕೊಂಡಿರುವ ಸಾಂಕ್ರಾಮಿಕ ರೋಗದ ಕುರಿತು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ.

2 / 5
Vijayapura Measles confirmed in hundreds of children in Alamela taluk of Vijayapura news in kannada

ಇಂಡಿ ಕಂದಾಯ ಉಪ ವಿಭಾಗ ಅಧಿಕಾರಿ ನೇತೃತ್ವದಲ್ಲಿ ಗುರುವಾರ ಸಂಜೆ ಆರೋಗ್ಯ ಇಲಾಖೆ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಡಾ .ವಿಜಯಮಹಾಂತೇಶ ದಾನಮ್ಮನವರ ಸೂಚನೆ ಮೇರೆಗೆ ಸಭೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ವೈದ್ಯಾಧಿಕಾರಿ ಮುಕುಂದ ಗಲಗಲಿ ಮಾಹಿತಿ ನೀಡಿದ್ದಾರೆ.

3 / 5
Vijayapura Measles confirmed in hundreds of children in Alamela taluk of Vijayapura news in kannada

ಆಲಮೇಲ ಪಟ್ಟಣದಲ್ಲಿ ಹಬ್ಬಿರುವ ದಡಾರ ರೋಗದ ಕುರಿತು ಸರ್ಕಾರಕ್ಕೂ ಮಾಹಿತಿ ಹೋಗಿದೆ. ರಾಜ್ಯ ಸರ್ಕಾರದ ಆದೇಶದ ಮೇರೆಗೆ ತುರ್ತು ಚಿಕಿತ್ಸಾ ಅಭಿಯಾನ ಹಮ್ಮಿಕೊಂಡಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಲಸಿಕಾ ಅಭಿಯಾನ ಹಮ್ಮಿಕೊಳ್ಳುವುದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

4 / 5
Vijayapura Measles confirmed in hundreds of children in Alamela taluk of Vijayapura news in kannada

ದಡಾರವು ತೀವ್ರವಾದ ವೈರಲ್ ಉಸಿರಾಟದ ಕಾಯಿಲೆಯಾಗಿದೆ. ವೈರಸ್‌ನ ಸಂಪರ್ಕದ ನಂತರ 7 ರಿಂದ 14 ದಿನಗಳ ನಂತರ ದಡಾರ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಮತ್ತು ಸಾಮಾನ್ಯವಾಗಿ ಅಧಿಕ ಜ್ವರ, ಕೆಮ್ಮು, ಸ್ರವಿಸುವ ಮೂಗು ಮತ್ತು ನೀರಿನ ಕಣ್ಣುಗಳನ್ನು ಒಳಗೊಂಡಿರುತ್ತದೆ . ಮೊದಲ ರೋಗಲಕ್ಷಣಗಳ ನಂತರ 3 ರಿಂದ 5 ದಿನಗಳ ನಂತರ ದಡಾರ ದದ್ದು ಕಾಣಿಸಿಕೊಳ್ಳುತ್ತದೆ. (ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ)

5 / 5

Published On - 10:14 pm, Thu, 26 January 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ