AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಮಣದಂದು ವಿಜಯಪುರ ಸಿದ್ದೇಶ್ವರ ಜಾತ್ರಾ ಸೊಬಗು: 8 ದಿನ ನಡೆಯುವ ಜಾತ್ರೆಯ ವಿಶೇಷತೆ ತಿಳಿಯಿರಿ

ವಿಜಯಪುರದ ಶ್ರೀ ಸಿದ್ದೇಶ್ವರ ದೇವಸ್ಥಾನದ 115ನೇ ಜಾತ್ರಾ ಮಹೋತ್ಸವವು ಮಕರ ಸಂಕ್ರಮಣದ ವೇಳೆ ಸಂಭ್ರಮದಿಂದ ನಡೆಯುತ್ತದೆ. 8 ದಿನಗಳ ಈ ಜಾತ್ರೆಯಲ್ಲಿ ನಂದಿಕೋಲು ಮೆರವಣಿಗೆ, ಹೋಮ-ಹವನ, ಸಿದ್ದರಾಮ ಮಂತ್ರದಂಡ ವಿವಾಹದಂತಹ ಧಾರ್ಮಿಕ ಆಚರಣೆಗಳು ನಡೆಯುತ್ತಿವೆ. ಸದ್ಯ ಜಾತ್ರೆಗೆ ಭಕ್ತರ ಸಾಗರ ಹರಿದು ಬರುತ್ತಿದೆ. ಇಲ್ಲಿವೆ ಫೋಟೋಸ್​.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jan 15, 2026 | 7:57 PM

Share
ವಿಜಯಪುರದಲ್ಲಿ ಸದ್ಯ ಶ್ರೀ ಸಿದ್ದೇರಶ್ವರ ದೇವಸ್ಥಾನದ ಜಾತ್ರಾ ಸಂಭ್ರಮ ಮನೆ ಮಾಡಿದೆ. 8 ದಿನಗಳ ಕಾಲ ನಡೆಯುವ ಜಾತ್ರೆಗೆ ಶತಮಾನದ ಐತಿಹ್ಯವಿದೆ. ನಂದಿಕೋಲು ಮೆರವಣಿಗೆ, ಭೋಗಿ, ಸಿದ್ದರಾಮ ಮಂತ್ರದಂಡ ವಿವಾಹ ಕಾರ್ಯಕ್ರಮ ಹೀಗೆ ಸಾಲು ಸಾಲು ಧಾರ್ಮಿಕ ಕಾರ್ಯಗಳಿಗೆ ಹಾಗೂ ಮನರಂಜನೆಗೆ ಜಾತ್ರೆ ಸಾಕ್ಷಿಯಾಗಿದೆ.  

ವಿಜಯಪುರದಲ್ಲಿ ಸದ್ಯ ಶ್ರೀ ಸಿದ್ದೇರಶ್ವರ ದೇವಸ್ಥಾನದ ಜಾತ್ರಾ ಸಂಭ್ರಮ ಮನೆ ಮಾಡಿದೆ. 8 ದಿನಗಳ ಕಾಲ ನಡೆಯುವ ಜಾತ್ರೆಗೆ ಶತಮಾನದ ಐತಿಹ್ಯವಿದೆ. ನಂದಿಕೋಲು ಮೆರವಣಿಗೆ, ಭೋಗಿ, ಸಿದ್ದರಾಮ ಮಂತ್ರದಂಡ ವಿವಾಹ ಕಾರ್ಯಕ್ರಮ ಹೀಗೆ ಸಾಲು ಸಾಲು ಧಾರ್ಮಿಕ ಕಾರ್ಯಗಳಿಗೆ ಹಾಗೂ ಮನರಂಜನೆಗೆ ಜಾತ್ರೆ ಸಾಕ್ಷಿಯಾಗಿದೆ.  

1 / 6
ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ 115ನೇ ಜಾತ್ರಾ ಮಹೋತ್ಸವದ ಸಂಭ್ರಮ ಜೋರಾಗಿದೆ. ಪ್ರತಿ ವರ್ಷ ಮಕರ ಸಂಕ್ರಮಣದ ವೇಳೆ ಸಿದ್ದೇಶ್ವರ ಜಾತ್ರೆ ನಡೆಯುತ್ತದೆ. ಇಂದು ಬೆಳಿಗ್ಗೆಯಿಂದಲೇ ನಂದಿಕೋಲು ಮೆರವಣಿಗೆ ಸೇರಿದಂತೆ ಹೋಮ ಹವನ, ವಿಶೇಷ ಪೂಜಾ ಕಾರ್ಯಗಳು ನಡೆದವು.

ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ 115ನೇ ಜಾತ್ರಾ ಮಹೋತ್ಸವದ ಸಂಭ್ರಮ ಜೋರಾಗಿದೆ. ಪ್ರತಿ ವರ್ಷ ಮಕರ ಸಂಕ್ರಮಣದ ವೇಳೆ ಸಿದ್ದೇಶ್ವರ ಜಾತ್ರೆ ನಡೆಯುತ್ತದೆ. ಇಂದು ಬೆಳಿಗ್ಗೆಯಿಂದಲೇ ನಂದಿಕೋಲು ಮೆರವಣಿಗೆ ಸೇರಿದಂತೆ ಹೋಮ ಹವನ, ವಿಶೇಷ ಪೂಜಾ ಕಾರ್ಯಗಳು ನಡೆದವು.

2 / 6
ಶಾಸಕ ಹಾಗೂ ಸಿದ್ದೇಶ್ವರ ಸಂಸ್ಥೆಯ ಆಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬೆಳಿಗ್ಗೆಯಿಂದಲೇ ಭಕ್ತಸಾಗರ ದೇವಸ್ಥಾನಕ್ಕೆ ಹರಿದು ಬಂದಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಶಾಸಕ ಹಾಗೂ ಸಿದ್ದೇಶ್ವರ ಸಂಸ್ಥೆಯ ಆಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬೆಳಿಗ್ಗೆಯಿಂದಲೇ ಭಕ್ತಸಾಗರ ದೇವಸ್ಥಾನಕ್ಕೆ ಹರಿದು ಬಂದಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

3 / 6
ಜಾತ್ರೆಯ ನಿಮಿತ್ಯ 8 ದಿನಗಳ ಕಾಲ ನಿರಂತರ ಧಾರ್ಮಿಕ ಕಾರ್ಯಕ್ರಮಗಳು ಮಾತ್ರವಲ್ಲದೇ ಮನರಂಜನಾ ಕಾರ್ಯಕ್ರಮಗಳನ್ನು ಸಹ ಆಯೋಜನೆ ಮಾಡಲಾಗಿದೆ. ನಿತ್ಯ ಹಲವಾರು ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ರಾತ್ರಿ ವೇಳೆ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿವೆ.

ಜಾತ್ರೆಯ ನಿಮಿತ್ಯ 8 ದಿನಗಳ ಕಾಲ ನಿರಂತರ ಧಾರ್ಮಿಕ ಕಾರ್ಯಕ್ರಮಗಳು ಮಾತ್ರವಲ್ಲದೇ ಮನರಂಜನಾ ಕಾರ್ಯಕ್ರಮಗಳನ್ನು ಸಹ ಆಯೋಜನೆ ಮಾಡಲಾಗಿದೆ. ನಿತ್ಯ ಹಲವಾರು ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ರಾತ್ರಿ ವೇಳೆ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿವೆ.

4 / 6
ಜಾತ್ರೆಯ ಅಂಗವಾಗಿ ಭಾರ ಎತ್ತುವ ಸ್ಪರ್ಧೆಗಳು ಹಾಗೂ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯ ಆಯೋಜನೆ ಮಾಡುವ ಮೂಲಕ ದೇಶಿ ಕಲೆಗಳು, ಕ್ರೀಡೆ ಉಳಿಸಿ, ಬೆಳೆಸುವಲ್ಲಿ ಜಾತ್ರೆ ಪ್ರಮುಖ ವೇದಿಕೆಯಾಗಿದೆ. ಇನ್ನು ಜಾತ್ರೆಗೆ ಸುತ್ತಮುತ್ತ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯದಿಂದ ಭಕ್ತರ ದಂಡೇ ಹರಿದುಬರುತ್ತಿದೆ. 

ಜಾತ್ರೆಯ ಅಂಗವಾಗಿ ಭಾರ ಎತ್ತುವ ಸ್ಪರ್ಧೆಗಳು ಹಾಗೂ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯ ಆಯೋಜನೆ ಮಾಡುವ ಮೂಲಕ ದೇಶಿ ಕಲೆಗಳು, ಕ್ರೀಡೆ ಉಳಿಸಿ, ಬೆಳೆಸುವಲ್ಲಿ ಜಾತ್ರೆ ಪ್ರಮುಖ ವೇದಿಕೆಯಾಗಿದೆ. ಇನ್ನು ಜಾತ್ರೆಗೆ ಸುತ್ತಮುತ್ತ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯದಿಂದ ಭಕ್ತರ ದಂಡೇ ಹರಿದುಬರುತ್ತಿದೆ. 

5 / 6
ಇನ್ನು ಜಾತ್ರೆಯ ಅಂಗವಾಗಿ ಪ್ರತಿವರ್ಷ ಜಾನುವಾರು ಜಾತ್ರೆಯೂ ನಡೆಯುತ್ತದೆ. ಹೊರ ರಾಜ್ಯ ಸೇರಿ ಬೇರೆ ಬೇರೆ ಜಿಲ್ಲೆಗಳಿಂದ ಬಂದ ಜಾನುವಾರುಳಿಗೆ ಬಹುಮಾನ ನೀಡಲಾಗುತ್ತದೆ. ಉತ್ತಮ ರಾಸುಗಳಿಗೆ 10 ಗ್ರಾಂ ಚಿನ್ನ ನೀಡಲಾಗುತ್ತದೆ. ಒಟ್ಟಾರೆ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯ ಸೊಬಗು ಜೋರಾಗಿದೆ. 

ಇನ್ನು ಜಾತ್ರೆಯ ಅಂಗವಾಗಿ ಪ್ರತಿವರ್ಷ ಜಾನುವಾರು ಜಾತ್ರೆಯೂ ನಡೆಯುತ್ತದೆ. ಹೊರ ರಾಜ್ಯ ಸೇರಿ ಬೇರೆ ಬೇರೆ ಜಿಲ್ಲೆಗಳಿಂದ ಬಂದ ಜಾನುವಾರುಳಿಗೆ ಬಹುಮಾನ ನೀಡಲಾಗುತ್ತದೆ. ಉತ್ತಮ ರಾಸುಗಳಿಗೆ 10 ಗ್ರಾಂ ಚಿನ್ನ ನೀಡಲಾಗುತ್ತದೆ. ಒಟ್ಟಾರೆ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯ ಸೊಬಗು ಜೋರಾಗಿದೆ. 

6 / 6
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?