AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸ್ಮಶಾನದಲ್ಲಿ ದೀಪಾವಳಿ ಹಬ್ಬ ಆಚರಣೆ, ಈ ವಿಚಿತ್ರ ಆಚರಣೆ ಯಾಕೆ ಗೊತ್ತಾ?

ಕರೀಂನಗರದಲ್ಲಿ, ಸ್ಮಶಾನದಲ್ಲಿ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವು ಆರು ದಶಕಗಳಿಂದ ನಡೆದುಕೊಂಡು ಬಂದ ಪದ್ಧತಿ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿಯಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

TV9 Web
| Edited By: |

Updated on:Oct 24, 2022 | 1:14 PM

Share
ದೀಪಾವಳಿ ಹಬ್ಬವು ಎಲ್ಲರ ಜೀವನದಲ್ಲಿ  ಕತ್ತಲೆಯನ್ನು ಹೋಗಲಾಡಿಸಿ ಸಂತೋಷದ ಬೆಳಕನ್ನು ತರಲು ಆಚರಿಸುವ ಹಬ್ಬ.  ಎಲ್ಲರೂ ಮನೆಯ ಬಳಿ ದೀಪ ಹಚ್ಚುವುದು, ಪಟಾಕಿ ಸಿಡಿಸುವುದು ವಾಡಿಕೆಯಾಗುತ್ತಿದೆ. ಆದರೆ ಇಲ್ಲೊಂದು ವಿಚಿತ್ರ ಆಚರಣೆ ಇದೆ.

Diwali festival at the cemetery

1 / 7
ದೀಪಾವಳಿಯಂದು ಮನೆಗಳಲ್ಲಿ ದೀಪವನ್ನು ಬೆಳಗಿಸಿ, ಅದ್ಧೂರಿಯಾಗಿ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ. ಆದರೆ ತೆಲಂಗಾಣದ ಜಿಲ್ಲೆಯಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿದೆ.

Diwali festival at the cemetery

2 / 7
Diwali festival at the cemetery

ತೆಲಂಗಾಣದ ಕರೀಂನಗರದಲ್ಲಿ ಆರು ದಶಕಗಳಿಂದ ಸ್ಮಶಾನದಲ್ಲಿ ದೀಪಾವಳಿ ಆಚರಿಸುವ ಸಂಪ್ರದಾಯ ಇದೆ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿ ಮಾಡಿದ ಸ್ಥಳದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

3 / 7
Diwali festival at the cemetery

ಈ ಆಚರಣೆ ತೆಲಂಗಾಣದ ಕರೀಂನಗರ ಸಂಪ್ರದಾಯವಾಗಿದೆ. ಕರೀಂನಗರದ ಕರ್ಜನ ಗಡ್ಡಾದಲ್ಲಿರುವ ಹಿಂದೂ ಸ್ಮಶಾನದಲ್ಲಿ ಪ್ರತಿ ವರ್ಷ ದಲಿತ ಕುಟುಂಬಗಳು ಸ್ಮಶಾನದಲ್ಲಿರುವ ತಮ್ಮ ಸಂಬಂಧಿಕರ ಸಮಾಧಿಯಲ್ಲಿ ದೀಪಾವಳಿ ಆಚರಿಸುತ್ತಾರೆ.

4 / 7
Diwali festival at the cemetery

ಹಬ್ಬಕ್ಕೆ ಒಂದು ವಾರ ಮೊದಲು ಸ್ಮಶಾನವನ್ನು ಸ್ವಚ್ಛಗೊಳಿಸಿ ಸಮಾಧಿಗಳಿಗೆ ಬಣ್ಣ ಬಳಿಯುತ್ತಾರೆ. ಕುಟುಂಬದ ಸದಸ್ಯರೆಲ್ಲರೂ ಸಮಾಧಿಯ ಬಳಿಗೆ ಹೋಗಿ, ಸಮಾಧಿಗಳನ್ನು ಹೂವಿನಿಂದ ಅಲಂಕರಿಸುತ್ತಾರೆ.

5 / 7
Diwali festival at the cemetery

ಹಬ್ಬದ ದಿನದಂದು, ಕುಟುಂಬದ ಸದಸ್ಯರೆಲ್ಲರೂ ಸಂಜೆ ಅಲ್ಲಿಯೇ ಕಳೆಯುತ್ತಾರೆ. ಅಲ್ಲಿಯೇ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ.

6 / 7
Diwali festival at the cemetery

ತಮ್ಮ ಹಿರಿಯರಿಗೆ ನೈವೇದ್ಯ ಸಲ್ಲಿಸುವ ಮೂಲಕ ಅವರನ್ನು ಸ್ಮರಿಸುತ್ತಾರೆ. ಇದು ಸ್ವಲ್ಪ ವಿಚಿತ್ರ ಎನಿಸಿದರೂ ಸತ್ತವರ ನೆನಪುಗಳನ್ನು ನೆನೆದು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ.

7 / 7

Published On - 1:14 pm, Mon, 24 October 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು