
ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.

ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.

ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.

ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ