ಕಳೆಗಟ್ಟಿದ ನಾಡಹಬ್ಬ ದಸರಾ ಸಿದ್ಧತೆ; ಕಾಡಿನಿಂದ ನಾಡಿಗೆ ಬಂದಿರೋ ಗಜಪಡೆಗೆ ರಾಜಾತಿಥ್ಯ

ಕಿರಣ್ ಹನುಮಂತ್​ ಮಾದಾರ್

Updated on: Aug 30, 2024 | 6:36 PM

ಮೈಸೂರು ಅಂದ್ರೆ ಅತಿಥಿ ದೇವೋಭವ. ಅತಿಥಿಗಳನ್ನು ಸತ್ಕರಿಸುವುದು ನಮ್ಮ ಸಂಸ್ಕೃತಿ, ಸಂಪ್ರದಾಯ. ಇದು ರಾಜ ಮಹಾರಾಜರ ಕಾಲದಿಂದಲೂ ನಡೆದುಕೊಂಡು ಬಂದಿದೆ. ಇದು ಕೇವಲ ಮನುಷ್ಯರಿಗಷ್ಟೇ ಅಲ್ಲ, ಪ್ರಾಣಿಗಳಿಗೂ ಅನ್ವಯಿಸುತ್ತದೆ. ಇದಕ್ಕೆ ಸಾಕ್ಷಿ ದಸರಾ ಗಜಪಡೆಗಳು.

1 / 6
ನಾಡಹಬ್ಬ ದಸರಾ ಸಿದ್ಧತೆ ಕಳೆಗಟ್ಟಿದ್ದು, ಇಷ್ಟು ದಿನ ಕಾಡಿನಲ್ಲಿದ್ದ ದಸರಾ ಆನೆಗಳಿಗೆ ನಾಡಿನ ಜೊತೆ ಹೊಂದಾಣಿಕೆ ಮಾಡಿಸುವುದರಲ್ಲಿ ಮಾವುತರು ತೊಡಗಿದ್ದಾರೆ. ಜೊತೆಗೆ ಈ ಆನೆಗಳಿಗೆ ವಿಶೇಷ ಆಹಾರ ನೀಡಲಾಗುತ್ತಿದೆ.

ನಾಡಹಬ್ಬ ದಸರಾ ಸಿದ್ಧತೆ ಕಳೆಗಟ್ಟಿದ್ದು, ಇಷ್ಟು ದಿನ ಕಾಡಿನಲ್ಲಿದ್ದ ದಸರಾ ಆನೆಗಳಿಗೆ ನಾಡಿನ ಜೊತೆ ಹೊಂದಾಣಿಕೆ ಮಾಡಿಸುವುದರಲ್ಲಿ ಮಾವುತರು ತೊಡಗಿದ್ದಾರೆ. ಜೊತೆಗೆ ಈ ಆನೆಗಳಿಗೆ ವಿಶೇಷ ಆಹಾರ ನೀಡಲಾಗುತ್ತಿದೆ.

2 / 6

ಕಾಡಿನಲ್ಲಿ ಬಿದಿರು, ಸೊಪ್ಪು ಹಾಗೂ ಆನೆ ಶಿಬಿರಗಳಲ್ಲಿ ರಾಗಿ, ಹುರುಳಿ, ಭತ್ತ, ಭತ್ತದ ಹುಲ್ಲನ್ನು ಕೊಡಲಾಗುತಿತ್ತು. ಇದೀಗ ನಾಡಹಬ್ಬ ದಸರಾಗೆ ಬಂದಿರುವ ಈ ಆನೆಗಳಿಗೆ ವಿಶೇಷ ಆಹಾರ ನೀಡಲಾಗುತ್ತಿದೆ.

3 / 6

ಇದು ದಸರಾ ಗಜಪಡೆಗೆ ನೀಡುತ್ತಿರುವ ಅದ್ಧೂರಿ ಭೋಜನ. ಹಲವು ಬಗೆ ಕಾಳುಗಳನ್ನು ಬೇಯಿಸಿ ಬೆಣ್ಣೆ, ತರಕಾರಿ ಜೊತೆ ಮುದ್ದೆ ಮಾಡಿ ಆನೆಗಳಿಗೆ ಕೊಡಲಾಗುತ್ತಿದೆ. ಇದರ ರುಚಿಗೆ ಈ ಆನೆಗಳು ಸಖತ್ ಖುಷಿಯಾಗಿವೆ.

4 / 6

ಉದ್ದಿನ ಕಾಳು, ಹೆಸರು ಕಾಳು, ಗೋದಿ, ಕುಸುಬಲಕ್ಕಿಯನ್ನು ಸುಮಾರು ಮೂರ್ನಾಲ್ಕು ತಾಸು ಚೆನ್ನಾಗಿ ಬೇಯಿಸಲಾಗುತ್ತದೆ. ಇದನ್ನು ಉಂಡೆ ಮಾಡಿ ಪ್ರತಿದಿನ‌‌ ಬೆಳಿಗ್ಗೆ, ಸಂಜೆ ನೀಡಲಾಗುತ್ತಿದೆ.

5 / 6

ಇದರ ಜೊತೆ ಸೌತೆಕಾಯಿ, ಬೀಟ್ರೋಟ್, ಕ್ಯಾರೇಟ್, ಕೋಸು, ಮೂಲಂಗಿ ಮೊದಲಾದ ತರಕಾರಿಗಳನ್ನು ಕೊಡಲಾಗುತ್ತದೆ. ಇದೆಲ್ಲವನ್ನೂ ಭತ್ತದ ಹುಲ್ಲಿನಲ್ಲಿ ಕಟ್ಟಿ ಆನೆಗಳ ತೂಕಕ್ಕೆ ತಕ್ಕಂತೆ ನೀಡಬೇಕಾಗಿದ್ದಕ್ಕಿಂತ ಕೊಂಚ ಹೆಚ್ಚೇ ತಿನ್ನಿಸಲಾಗುತ್ತಿದೆ. ಇದು ಆನೆಗಳ ಆರೋಗ್ಯ ಹಾಗೂ ತೂಕ ಹೆಚ್ಚಿಸಲು ಸಹಕಾರಿಯಾಗಲಿದೆ.

6 / 6

ಈ ಮೂಲಕ ದಸರಾ ಗಜಪಡೆಗಳನ್ನು ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಸಿದ್ದಪಡಿಸಲಾಗುತ್ತಿದೆ. ನಾಡಿನ ರಾಜಾತಿಥ್ಯ ಪಡೆದು ಜಂಬೂಸವಾರಿ ಗಜಪಡೆ ಪುಲ್ ಖುಷಿಯಾಗಿವೆ.

Published On - 5:35 pm, Fri, 30 August 24

Loading...
Unable to load recommendations.
Follow Us