AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ! ಕೊನೆಗೂ ಮಮತಾರನ್ನು ಸೋಲಿಸಿದ್ಹೇಗೆ ಬಿಜೆಪಿ? ಇಲ್ಲಿವೆ ಕೆಲವು ಇಂಟರೆಸ್ಟಿಂಗ್ ಮಾಹಿತಿ

ಕೋಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಸೃಷ್ಟಿಯಾಗುತ್ತಿದೆ. 34 ವರ್ಷಗಳ ಎಡಪಂಥೀಯ ಆಡಳಿತವನ್ನು ಅಂತ್ಯಗೊಳಿಸಿದ್ದ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಈಗ ಬ್ರೇಕ್ ಬೀಳುತ್ತಿದೆ. ‘ಮಾಂ, ಮಾತೃಭೂಮಿ, ಔರ್ ಲೋಗ್’ ಎನ್ನುತ್ತಾ ಅಧಿಕಾರಕ್ಕೇರಿದ್ದ ತೃಣಮೂಲ ಕಾಂಗ್ರೆಸ್ (TMC) ವಿರುದ್ಧ ಈಗ ‘ಪರಿಬೊರ್ತನ್ (ಪರಿವರ್ತನೆ)’ ಗಾಳಿ ಬೀಸಿದ್ದು, ಬಿಜೆಪಿ ಮೊದಲ ಬಾರಿಗೆ ಬಂಗಾಳದ ಗದ್ದುಗೆ ಏರುವತ್ತ ದಾಪುಗಾಲು ಹಾಕಿದೆ.

ಗಣಪತಿ ಶರ್ಮಾ
|

Updated on: May 04, 2026 | 3:11 PM

Share
ಹಾಗಾದರೆ, ಸುದೀರ್ಘ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಮಮತಾ ಬ್ಯಾನರ್ಜಿ ಕೈಯಿಂದ ಬಂಗಳಾದ ಅಧಿಕಾರ ಜಾರಿದ್ಹೇಗೆ? ಬಿಜೆಪಿಗೆ ವರದಾನವಾದ ಅಂಶಗಳು ಯಾವುವು? ದೀದಿ ಹಿನ್ನಡೆಗೆ ಕಾರಣವಾದ ಪ್ರಮುಖ ಅಂಶಗಳೇನು? ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಸೋಲು-ಗೆಲುವಿಗೆ ಕಾರಣವಾದ ಅಂಶಗಳನ್ನು ಹುಡುಕುವ ಪ್ರಯತ್ನ ಇಲ್ಲಿ ಮಾಡಲಾಗಿದೆ.

ಹಾಗಾದರೆ, ಸುದೀರ್ಘ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಮಮತಾ ಬ್ಯಾನರ್ಜಿ ಕೈಯಿಂದ ಬಂಗಳಾದ ಅಧಿಕಾರ ಜಾರಿದ್ಹೇಗೆ? ಬಿಜೆಪಿಗೆ ವರದಾನವಾದ ಅಂಶಗಳು ಯಾವುವು? ದೀದಿ ಹಿನ್ನಡೆಗೆ ಕಾರಣವಾದ ಪ್ರಮುಖ ಅಂಶಗಳೇನು? ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಸೋಲು-ಗೆಲುವಿಗೆ ಕಾರಣವಾದ ಅಂಶಗಳನ್ನು ಹುಡುಕುವ ಪ್ರಯತ್ನ ಇಲ್ಲಿ ಮಾಡಲಾಗಿದೆ.

1 / 6
ಭ್ರಷ್ಟಾಚಾರ ಮತ್ತು ನಿರುದ್ಯೋಗ: ಮಮತಾ ಸರ್ಕಾರವನ್ನು ಕಾಡಿದ್ದು ಮುಖ್ಯವಾಗಿ ಭ್ರಷ್ಟಾಚಾರದ ಆರೋಪಗಳು. ಶಿಕ್ಷಕರ ನೇಮಕಾತಿ ಹಗರಣ ಮತ್ತು ‘ಆರ್.ಜಿ ಕರ್’ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಪ್ರಕರಣ ರಾಜ್ಯದ ಜನರಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಮೂಡಿಸಿತ್ತು. ಕೈಗಾರಿಕೆಗಳ ಕೊರತೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗ ಯುವಜನತೆಯನ್ನು ಬಿಜೆಪಿಯತ್ತ ಸೆಳೆಯಿತು.

ಭ್ರಷ್ಟಾಚಾರ ಮತ್ತು ನಿರುದ್ಯೋಗ: ಮಮತಾ ಸರ್ಕಾರವನ್ನು ಕಾಡಿದ್ದು ಮುಖ್ಯವಾಗಿ ಭ್ರಷ್ಟಾಚಾರದ ಆರೋಪಗಳು. ಶಿಕ್ಷಕರ ನೇಮಕಾತಿ ಹಗರಣ ಮತ್ತು ‘ಆರ್.ಜಿ ಕರ್’ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಪ್ರಕರಣ ರಾಜ್ಯದ ಜನರಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಮೂಡಿಸಿತ್ತು. ಕೈಗಾರಿಕೆಗಳ ಕೊರತೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗ ಯುವಜನತೆಯನ್ನು ಬಿಜೆಪಿಯತ್ತ ಸೆಳೆಯಿತು.

2 / 6
ಮುಸ್ಲಿಂ ಮತಗಳ ವಿಭಜನೆ: ಮಾಲ್ಡಾ ಮತ್ತು ಮುರ್ಷಿದಾಬಾದ್‌ನಂತಹ ಜಿಲ್ಲೆಗಳಲ್ಲಿ ಬಿಜೆಪಿಯ ಮುನ್ನಡೆ ಮತ್ತು ಹುಮಾಯೂನ್ ಕಬೀರ್ ಅವರ ಗೆಲುವು ಮುಸ್ಲಿಂ ಮತಗಳಲ್ಲಿನ ವಿಭಜನೆಯನ್ನು ಸ್ಪಷ್ಟವಾಗಿ ಕಾಣಿಸುವಂತೆ ಮಾಡಿದೆ. ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಉತ್ತರ 24 ಪರಗಣಗಳು ಮತ್ತು ದಕ್ಷಿಣ 24 ಪರಗಣಗಳಂತಹ ಜಿಲ್ಲೆಗಳಲ್ಲಿ ಸಹ ಬಿಜೆಪಿ ಪರ ಅಲೆ ಕಂಡುಬಂದಿದೆ.

ಮುಸ್ಲಿಂ ಮತಗಳ ವಿಭಜನೆ: ಮಾಲ್ಡಾ ಮತ್ತು ಮುರ್ಷಿದಾಬಾದ್‌ನಂತಹ ಜಿಲ್ಲೆಗಳಲ್ಲಿ ಬಿಜೆಪಿಯ ಮುನ್ನಡೆ ಮತ್ತು ಹುಮಾಯೂನ್ ಕಬೀರ್ ಅವರ ಗೆಲುವು ಮುಸ್ಲಿಂ ಮತಗಳಲ್ಲಿನ ವಿಭಜನೆಯನ್ನು ಸ್ಪಷ್ಟವಾಗಿ ಕಾಣಿಸುವಂತೆ ಮಾಡಿದೆ. ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಉತ್ತರ 24 ಪರಗಣಗಳು ಮತ್ತು ದಕ್ಷಿಣ 24 ಪರಗಣಗಳಂತಹ ಜಿಲ್ಲೆಗಳಲ್ಲಿ ಸಹ ಬಿಜೆಪಿ ಪರ ಅಲೆ ಕಂಡುಬಂದಿದೆ.

3 / 6
ಕೈಬಿಟ್ಟ ಮಹಿಳಾ ಮತದಾರರು: ಮಮತಾ ಬ್ಯಾನರ್ಜಿ ಅವರ ‘ಲಕ್ಷ್ಮಿ ಭಂಡಾರ್’ ಯೋಜನೆಗೆ ಪ್ರತಿಯಾಗಿ ಬಿಜೆಪಿ ಘೋಷಿಸಿದ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಉಚಿತ ಬಸ್ ಪ್ರಯಾಣದ ಭರವಸೆ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ, ದೀದಿಯ ಸಾಂಪ್ರದಾಯಿಕ ಮಹಿಳಾ ಮತಬ್ಯಾಂಕ್ ಈ ಬಾರಿ ಚದುರಿರುವುದು ಸ್ಪಷ್ಟವಾಗಿದೆ.

ಕೈಬಿಟ್ಟ ಮಹಿಳಾ ಮತದಾರರು: ಮಮತಾ ಬ್ಯಾನರ್ಜಿ ಅವರ ‘ಲಕ್ಷ್ಮಿ ಭಂಡಾರ್’ ಯೋಜನೆಗೆ ಪ್ರತಿಯಾಗಿ ಬಿಜೆಪಿ ಘೋಷಿಸಿದ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಉಚಿತ ಬಸ್ ಪ್ರಯಾಣದ ಭರವಸೆ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ, ದೀದಿಯ ಸಾಂಪ್ರದಾಯಿಕ ಮಹಿಳಾ ಮತಬ್ಯಾಂಕ್ ಈ ಬಾರಿ ಚದುರಿರುವುದು ಸ್ಪಷ್ಟವಾಗಿದೆ.

4 / 6
ದಲಿತ ಮತ್ತು ಆದಿವಾಸಿಗಳ ಬೆಂಬಲ: ಉತ್ತರ ಬಂಗಾಳ ಮತ್ತು ಜಂಗಲ್ ಮಹಲ್ ಭಾಗದ ಎಸ್‌ಸಿ/ಎಸ್‌ಟಿ ಹಾಗೂ ಮತುಮಾ ಸಮುದಾಯಗಳು ಬಿಜೆಪಿಗೆ ಬಲವಾಗಿ ಬೆಂಬಲ ನೀಡಿದ್ದು, ಟಿಎಂಸಿಯ ಕೋಟೆಯನ್ನು ಭೇದಿಸಲು ಸಹಕಾರಿಯಾಗಿದೆ.

ದಲಿತ ಮತ್ತು ಆದಿವಾಸಿಗಳ ಬೆಂಬಲ: ಉತ್ತರ ಬಂಗಾಳ ಮತ್ತು ಜಂಗಲ್ ಮಹಲ್ ಭಾಗದ ಎಸ್‌ಸಿ/ಎಸ್‌ಟಿ ಹಾಗೂ ಮತುಮಾ ಸಮುದಾಯಗಳು ಬಿಜೆಪಿಗೆ ಬಲವಾಗಿ ಬೆಂಬಲ ನೀಡಿದ್ದು, ಟಿಎಂಸಿಯ ಕೋಟೆಯನ್ನು ಭೇದಿಸಲು ಸಹಕಾರಿಯಾಗಿದೆ.

5 / 6
ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮ: ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರ ಹೆಸರುಗಳನ್ನು ತೆಗೆದುಹಾಕಿದ್ದು (SIR ಪ್ರಕ್ರಿಯೆ) ಹಾಗೂ ಕೇಂದ್ರ ಭದ್ರತಾ ಪಡೆಗಳ ನಿಯೋಜನೆಯಿಂದಾಗಿ ಮತದಾರರು ಯಾವುದೇ ಭಯವಿಲ್ಲದೆ ಮತ ಚಲಾಯಿಸಲು ಸಾಧ್ಯವಾಯಿತು. ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದೆ.

ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮ: ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರ ಹೆಸರುಗಳನ್ನು ತೆಗೆದುಹಾಕಿದ್ದು (SIR ಪ್ರಕ್ರಿಯೆ) ಹಾಗೂ ಕೇಂದ್ರ ಭದ್ರತಾ ಪಡೆಗಳ ನಿಯೋಜನೆಯಿಂದಾಗಿ ಮತದಾರರು ಯಾವುದೇ ಭಯವಿಲ್ಲದೆ ಮತ ಚಲಾಯಿಸಲು ಸಾಧ್ಯವಾಯಿತು. ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದೆ.

6 / 6
Follow Us
ತಮಿಳುನಾಡು: ಡಿಎಂಕೆ ಕಚೇರಿಗೆ ಭೇಟಿ ನೀಡಿದ ಪನ್ನೀರ್​​ಸೆಲ್ವಂ
ತಮಿಳುನಾಡು: ಡಿಎಂಕೆ ಕಚೇರಿಗೆ ಭೇಟಿ ನೀಡಿದ ಪನ್ನೀರ್​​ಸೆಲ್ವಂ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?