AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ನಿಮ್ಮನ್ನು ಶ್ರೇಷ್ಠರಾಗಿಸುತ್ತವೆ ಈ ಕೆಲಸಗಳು; ನಿಮ್ಮ ಕುಟುಂಬಕ್ಕೂ ಇದು ಶ್ರೇಯಸ್ಕರ

Chanakya Niti: ಆಚಾರ್ಯ ಚಾಣಕ್ಯರು ಹೇಳಿರುವ ಜೀವನ ಪಾಠಗಳು ಎಂದಿಗೂ ಜೀವನಕ್ಕೆ ದಿಕ್ಸೂಚಿಯಾಗಬಲ್ಲವು. ಅವರು ಹೇಳಿರುವಂತೆ ಈ ಕೆಲಸಗಳು ನಮ್ಮನ್ನು ಶ್ರೇಷ್ಠರಾಗಿಸುತ್ತವೆ. ಮೊದಲು ಅಗತ್ಯವಿರುವವರಿಗೆ ಆಹಾರ ನೀಡಿ ನಂತರ ನೀವು ತಿನ್ನುವುದು, ಪ್ರೀತಿಯಲ್ಲಿ- ದಾನದಲ್ಲಿ ಏನನ್ನೂ ನಿರೀಕ್ಷಿಸದಿರುವುದು ಹಾಗೂ ನಮ್ಮ ಜ್ಞಾನವನ್ನು ನಿಜ ಜೀವನದಲ್ಲಿ ಅನುಷ್ಠಾನಗೊಳಿಸುವುದರಿಂದ ವ್ಯಕ್ತಿ ಶ್ರೇಷ್ಠನಾಗುತ್ತಾನೆ ಎನ್ನುತ್ತಾರೆ ಚಾಣಕ್ಯರು. ಇದು ಕುಟುಂಬಕ್ಕೂ ಶ್ರೇಯಸ್ಕರ ಎಂದಿದ್ದಾರೆ ಅವರು.

shivaprasad.hs
|

Updated on: Apr 16, 2022 | 7:00 AM

ಆಚಾರ್ಯ ಚಾಣಕ್ಯರು ಜೀವನಕ್ಕೆ ಅಗತ್ಯವಾದ ನೀತಿಪಾಠಗಳನ್ನು ಚಾಣಕ್ಯ ನೀತಿಯಲ್ಲಿ ತಿಳಿಸಿದ್ದಾರೆ. ಅವು ಈ ಕಾಲಕ್ಕೂ ಪ್ರಸ್ತುತವಾದವುಗಳು. ಕಾರಣ, ವ್ಯಕ್ತಿಗಳ ನಡೆನುಡಿಗೆ ಬಂದಾಗ ಮನುಷ್ಯ ಸ್ವಭಾವ ಸಹಜವಾದದ್ದು, ಅದು ಕಾಲದಿಂದ ಕಾಲಕ್ಕೆ ಬದಲಾಗುವದು ಕಡಿಮೆ. ಹೀಗಾಗಿಯೇ ಅಂದಿನ ನೀತಿಪಾಠಗಳು ಇಂದಿಗೂ ಪ್ರಸ್ತುತ. ಚಾಣಕ್ಯ ನೀತಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಮಾಡಬೇಕಾದ ನಾಲ್ಕು ಕಾರ್ಯಗಳನ್ನು ತಿಳಿಸಲಾಗಿದೆ. ಇದನ್ನು ಕಾರ್ಯಗತಗೊಳಿಸಿದವರ ವ್ಯಕ್ತಿತ್ವ ಶ್ರೇಷ್ಠವಾಗುತ್ತದೆ ಎನ್ನುತ್ತಾನೆ ಚಾಣಕ್ಯ. ಅಲ್ಲದೇ ಇದು ಕುಟುಂಬಕ್ಕೂ ಶ್ರೇಯಸ್ಕರವಂತೆ.

1 / 5
ಆಚಾರ್ಯ ಚಾಣಕ್ಯ ಹೇಳುವಂತೆ ಮೊದಲು ಅಗತ್ಯವಿರುವವರಿಗೆ ಆಹಾರವನ್ನು ನೀಡಿ. ನಂತರ ಏನು ಉಳಿಯುತ್ತದೆಯೋ ಅದು ನಿಮ್ಮ ಆಹಾರ. ಅಂತಹ ಆಹಾರವು ಕುಟುಂಬದಲ್ಲಿ ಸಮೃದ್ಧಿಯನ್ನು ತರುತ್ತದೆ ಮತ್ತು ಮನಸ್ಸನ್ನು ಶುದ್ಧ ಮತ್ತು ಧನಾತ್ಮಕವಾಗಿಸುತ್ತದೆ.

2 / 5
ಸಂಬಂಧಕ್ಕೆ ತಕ್ಕಂತೆ ಪ್ರೀತಿಯ ಸ್ವರೂಪ ಬದಲಾಗುತ್ತದೆ. ಪ್ರೀತಿಯಲ್ಲಿ ಯಾರಿಂದಲೂ ಏನನ್ನೂ ನಿರೀಕ್ಷಿಸಬಾರದು. ಪ್ರೀತಿ ಯಾವಾಗಲೂ ನಿಸ್ವಾರ್ಥವಾಗಿರಬೇಕು. ಆಗ ಮಾತ್ರ ಅದು ಶುದ್ಧ ಪ್ರೀತಿ ಎಂದು ಕರೆಯಲ್ಪಡುತ್ತದೆ. ಈ ನಿಸ್ವಾರ್ಥ ಪ್ರೀತಿಯ ವ್ಯಾಖ್ಯಾನವನ್ನು ಶ್ರೀಕೃಷ್ಣನು ಜಗತ್ತಿಗೆ ವಿವರಿಸಿದ್ದಾನೆ. ಅದರಂತೆ ಚಾಣಕ್ಯರೂ ಹೇಳಿದ್ದು, ಪ್ರೀತಿ ನಿಸ್ವಾರ್ಥವಾಗಿರಬೇಕು. ಅದು ಕುಟುಂಬದಲ್ಲಿನ ಸಂಬಂಧವನ್ನು ಚೆನ್ನಾಗಿಡುತ್ತದೆ.

3 / 5
ಕೇವಲ ಕೆಲವು ಗ್ರಂಥಗಳು ಮತ್ತು ಪುರಾಣಗಳನ್ನು ಓದುವುದರಿಂದ ಮತ್ತು ಅವುಗಳನ್ನು ಕಂಠಪಾಠ ಮಾಡುವುದರಿಂದ ನೀವು ಬುದ್ಧಿವಂತರಾಗುವುದಿಲ್ಲ. ಒಬ್ಬ ನಿಜವಾದ ಬುದ್ಧಿವಂತ ವ್ಯಕ್ತಿ ಆ ವಿಷಯಗಳನ್ನು ತನ್ನ ಜೀವನದಲ್ಲಿ ಅನುಷ್ಠಾನಗೊಳಿಸುತ್ತಾನೆ. ಯಾರ ಜ್ಞಾನವು ಪಾಪ ಕರ್ಮಗಳಲ್ಲಿ ಪಾಲ್ಗೊಳ್ಳದಂತೆ ತಡೆಯುತ್ತದೆಯೋ, ಆ ವ್ಯಕ್ತಿ ನಿಜವಾಗಿಯೂ ಬುದ್ಧಿವಂತ ಎನ್ನುತ್ತಾನೆ ಚಾಣಕ್ಯ.

4 / 5
ಆಚಾರ್ಯ ಚಾಣಕ್ಯರು ನಿಸ್ವಾರ್ಥದಿಂದ ನೀಡುವ ಮತ್ತು ರಹಸ್ಯವಾಗಿ ನೀಡುವ ದಾನವೇ ಅತ್ಯುತ್ತಮ ದಾನ ಎಂದು ಹೇಳಿದ್ದಾರೆ. ನೀವು ಕೂಡ ದಾನದ ಮೂಲಕ ಖ್ಯಾತಿಯನ್ನು, ಗೌರವವನ್ನು ನಿರೀಕ್ಷಿಸಿದರೆ ಅದು ವ್ಯರ್ಥವಾಗುತ್ತದೆ. ನಿಸ್ವಾರ್ಥ ಮನಸ್ಸಿನಿಂದ ದಾನ ಮಾಡುವುದನ್ನು ಚಾಣಕ್ಯರು ಹೇಳುತ್ತಾರೆ.

5 / 5
Follow us
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ