AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ನಿಮ್ಮನ್ನು ಶ್ರೇಷ್ಠರಾಗಿಸುತ್ತವೆ ಈ ಕೆಲಸಗಳು; ನಿಮ್ಮ ಕುಟುಂಬಕ್ಕೂ ಇದು ಶ್ರೇಯಸ್ಕರ

Chanakya Niti: ಆಚಾರ್ಯ ಚಾಣಕ್ಯರು ಹೇಳಿರುವ ಜೀವನ ಪಾಠಗಳು ಎಂದಿಗೂ ಜೀವನಕ್ಕೆ ದಿಕ್ಸೂಚಿಯಾಗಬಲ್ಲವು. ಅವರು ಹೇಳಿರುವಂತೆ ಈ ಕೆಲಸಗಳು ನಮ್ಮನ್ನು ಶ್ರೇಷ್ಠರಾಗಿಸುತ್ತವೆ. ಮೊದಲು ಅಗತ್ಯವಿರುವವರಿಗೆ ಆಹಾರ ನೀಡಿ ನಂತರ ನೀವು ತಿನ್ನುವುದು, ಪ್ರೀತಿಯಲ್ಲಿ- ದಾನದಲ್ಲಿ ಏನನ್ನೂ ನಿರೀಕ್ಷಿಸದಿರುವುದು ಹಾಗೂ ನಮ್ಮ ಜ್ಞಾನವನ್ನು ನಿಜ ಜೀವನದಲ್ಲಿ ಅನುಷ್ಠಾನಗೊಳಿಸುವುದರಿಂದ ವ್ಯಕ್ತಿ ಶ್ರೇಷ್ಠನಾಗುತ್ತಾನೆ ಎನ್ನುತ್ತಾರೆ ಚಾಣಕ್ಯರು. ಇದು ಕುಟುಂಬಕ್ಕೂ ಶ್ರೇಯಸ್ಕರ ಎಂದಿದ್ದಾರೆ ಅವರು.

shivaprasad.hs
|

Updated on: Apr 16, 2022 | 7:00 AM

Share
ಆಚಾರ್ಯ ಚಾಣಕ್ಯರು ಜೀವನಕ್ಕೆ ಅಗತ್ಯವಾದ ನೀತಿಪಾಠಗಳನ್ನು ಚಾಣಕ್ಯ ನೀತಿಯಲ್ಲಿ ತಿಳಿಸಿದ್ದಾರೆ. ಅವು ಈ ಕಾಲಕ್ಕೂ ಪ್ರಸ್ತುತವಾದವುಗಳು. ಕಾರಣ, ವ್ಯಕ್ತಿಗಳ ನಡೆನುಡಿಗೆ ಬಂದಾಗ ಮನುಷ್ಯ ಸ್ವಭಾವ ಸಹಜವಾದದ್ದು, ಅದು ಕಾಲದಿಂದ ಕಾಲಕ್ಕೆ ಬದಲಾಗುವದು ಕಡಿಮೆ. ಹೀಗಾಗಿಯೇ ಅಂದಿನ ನೀತಿಪಾಠಗಳು ಇಂದಿಗೂ ಪ್ರಸ್ತುತ. ಚಾಣಕ್ಯ ನೀತಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಮಾಡಬೇಕಾದ ನಾಲ್ಕು ಕಾರ್ಯಗಳನ್ನು ತಿಳಿಸಲಾಗಿದೆ. ಇದನ್ನು ಕಾರ್ಯಗತಗೊಳಿಸಿದವರ ವ್ಯಕ್ತಿತ್ವ ಶ್ರೇಷ್ಠವಾಗುತ್ತದೆ ಎನ್ನುತ್ತಾನೆ ಚಾಣಕ್ಯ. ಅಲ್ಲದೇ ಇದು ಕುಟುಂಬಕ್ಕೂ ಶ್ರೇಯಸ್ಕರವಂತೆ.

1 / 5
ಆಚಾರ್ಯ ಚಾಣಕ್ಯ ಹೇಳುವಂತೆ ಮೊದಲು ಅಗತ್ಯವಿರುವವರಿಗೆ ಆಹಾರವನ್ನು ನೀಡಿ. ನಂತರ ಏನು ಉಳಿಯುತ್ತದೆಯೋ ಅದು ನಿಮ್ಮ ಆಹಾರ. ಅಂತಹ ಆಹಾರವು ಕುಟುಂಬದಲ್ಲಿ ಸಮೃದ್ಧಿಯನ್ನು ತರುತ್ತದೆ ಮತ್ತು ಮನಸ್ಸನ್ನು ಶುದ್ಧ ಮತ್ತು ಧನಾತ್ಮಕವಾಗಿಸುತ್ತದೆ.

2 / 5
ಸಂಬಂಧಕ್ಕೆ ತಕ್ಕಂತೆ ಪ್ರೀತಿಯ ಸ್ವರೂಪ ಬದಲಾಗುತ್ತದೆ. ಪ್ರೀತಿಯಲ್ಲಿ ಯಾರಿಂದಲೂ ಏನನ್ನೂ ನಿರೀಕ್ಷಿಸಬಾರದು. ಪ್ರೀತಿ ಯಾವಾಗಲೂ ನಿಸ್ವಾರ್ಥವಾಗಿರಬೇಕು. ಆಗ ಮಾತ್ರ ಅದು ಶುದ್ಧ ಪ್ರೀತಿ ಎಂದು ಕರೆಯಲ್ಪಡುತ್ತದೆ. ಈ ನಿಸ್ವಾರ್ಥ ಪ್ರೀತಿಯ ವ್ಯಾಖ್ಯಾನವನ್ನು ಶ್ರೀಕೃಷ್ಣನು ಜಗತ್ತಿಗೆ ವಿವರಿಸಿದ್ದಾನೆ. ಅದರಂತೆ ಚಾಣಕ್ಯರೂ ಹೇಳಿದ್ದು, ಪ್ರೀತಿ ನಿಸ್ವಾರ್ಥವಾಗಿರಬೇಕು. ಅದು ಕುಟುಂಬದಲ್ಲಿನ ಸಂಬಂಧವನ್ನು ಚೆನ್ನಾಗಿಡುತ್ತದೆ.

3 / 5
ಕೇವಲ ಕೆಲವು ಗ್ರಂಥಗಳು ಮತ್ತು ಪುರಾಣಗಳನ್ನು ಓದುವುದರಿಂದ ಮತ್ತು ಅವುಗಳನ್ನು ಕಂಠಪಾಠ ಮಾಡುವುದರಿಂದ ನೀವು ಬುದ್ಧಿವಂತರಾಗುವುದಿಲ್ಲ. ಒಬ್ಬ ನಿಜವಾದ ಬುದ್ಧಿವಂತ ವ್ಯಕ್ತಿ ಆ ವಿಷಯಗಳನ್ನು ತನ್ನ ಜೀವನದಲ್ಲಿ ಅನುಷ್ಠಾನಗೊಳಿಸುತ್ತಾನೆ. ಯಾರ ಜ್ಞಾನವು ಪಾಪ ಕರ್ಮಗಳಲ್ಲಿ ಪಾಲ್ಗೊಳ್ಳದಂತೆ ತಡೆಯುತ್ತದೆಯೋ, ಆ ವ್ಯಕ್ತಿ ನಿಜವಾಗಿಯೂ ಬುದ್ಧಿವಂತ ಎನ್ನುತ್ತಾನೆ ಚಾಣಕ್ಯ.

4 / 5
ಆಚಾರ್ಯ ಚಾಣಕ್ಯರು ನಿಸ್ವಾರ್ಥದಿಂದ ನೀಡುವ ಮತ್ತು ರಹಸ್ಯವಾಗಿ ನೀಡುವ ದಾನವೇ ಅತ್ಯುತ್ತಮ ದಾನ ಎಂದು ಹೇಳಿದ್ದಾರೆ. ನೀವು ಕೂಡ ದಾನದ ಮೂಲಕ ಖ್ಯಾತಿಯನ್ನು, ಗೌರವವನ್ನು ನಿರೀಕ್ಷಿಸಿದರೆ ಅದು ವ್ಯರ್ಥವಾಗುತ್ತದೆ. ನಿಸ್ವಾರ್ಥ ಮನಸ್ಸಿನಿಂದ ದಾನ ಮಾಡುವುದನ್ನು ಚಾಣಕ್ಯರು ಹೇಳುತ್ತಾರೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ