AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಬಳಕೆದಾರರಿಗೆ ಉಪಯುಕ್ತವಾದ ಅದ್ಭುತ ವೈಶಿಷ್ಟ್ಯ

ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ. ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature).

Vinay Bhat
|

Updated on:Feb 22, 2022 | 8:35 AM

Share
ಒಂದರ ಹಿಂದೆ ಒಂದರಂತೆ ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡಲು ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್​ ತುದಿಗಾಲಿನಲ್ಲಿ ನಿಂತಿದೆ. ಈಗಾಗಲೇ ಅನೇಕ ಅಪ್ಡೇಟ್​ಗಳು ಪರೀಕ್ಷಾ ಹಂತದಲ್ಲಿದ್ದು ವಾಟ್ಸ್​ಆ್ಯಪ್ (WhatsApp)​ ಬೇಟಾ ಇನ್​ಫೋ ಒಂದೊಂದೆ ವರದಿ ಮಾಡುತ್ತಿದೆ. ಇದೀಗ ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ.

1 / 6
ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature). ಆಂಡ್ರಾಯ್ಡ್ ಬೇಟಾ ಬಳಕೆದಾರರಿಗಾಗಿ ಈ ಫೀಚರ್ ಪರೀಕ್ಷಾ ಹಂತದಲ್ಲಿದೆ. 2.25.5.11 ಬೇಟಾ ವರ್ಷನ್​​ನಲ್ಲಿ ಈ ಆಯ್ಕೆ ಸಿಗಲಿದೆಯಂತೆ.

2 / 6
ವಾಟ್ಸ್​ಆ್ಯಪ್ ಬೇಟಾ ಇನ್​ಫೋ ಫೋಟೋ ಒಂದನ್ನು ಹಂಚಿಕೊಂಡಿದ್ದು ಇದರ ಪ್ರಕಾರ, ಪೋಟೋ ಅಥವಾ ವಿಡಿಯೋ ಡಾಕ್ಯುಮೆಂಟ್​​ ಮೂಲಕ ಸೆಂಡ್ ಮಾಡಿದರೆ ರಿಸಿವರ್​ಗೆ ಪ್ರೀವ್ಯೂನಲ್ಲಿ ಕಾಣಿಸುತ್ತದೆ. ಈಗಾಗಲೇ ಈ ಆಯ್ಕೆ ಫೋಟೋ ಮತ್ತು ವಿಡಿಯೋಕ್ಕೆ ಇದೆ. ಸದ್ಯದಲ್ಲೇ ಇದು ಡಾಕ್ಯುಮೆಂಟ್​​​​ಗೂ ಬರಲಿದೆಯಂತೆ.

3 / 6
ಇನ್ನು ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಫೀಚರ್ ಒಂದು ಸೇರ್ಪಡೆಯಾಗಲಿದೆಯಂತೆ. ಅಂದರೆ ಗ್ರೂಪ್ ಕಾಲ್​ನಲ್ಲಿ ಮಾತನಾಡುತ್ತಿರುವಾಗ ಕರೆಯಲ್ಲಿರುವ ಸದಸ್ಯರು ಯಾರು ಯಾರು ಎಂಬುದು ಚೌಕಾಕಾರದ ಬಾಕ್ಸ್​​ನಲ್ಲಿ ಕಾಣಿಸಲಿದೆ.

4 / 6
ಇದರ ಜೊತೆಗೆ ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ಹೌದು, ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ.

5 / 6
ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್​ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್​ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ.

WhatsApp new feature will allow users to see document preview WhatsApp Latest Updates

6 / 6

Published On - 8:24 am, Tue, 22 February 22

Follow Us
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?