AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Whitefield Metro Station: ನಮ್ಮ ಮೆಟ್ರೋದಲ್ಲಿ ನಮ್ಮ ಮೋದಿ; ವೈಟ್‌ ಫೀಲ್ಡ್‌ ಮೆಟ್ರೋಗೆ ಚಾಲನೆ, ವಿದ್ಯಾರ್ಥಿಗಳೊಂದಿಗೆ ಸಂವಾದ

PM Modi Inaugurates Whitefield Metro Station: ಪ್ರಧಾನಿ ನರೇಂದ್ರ ಮೋದಿಯವರು ವೈಟ್‌ಫೀಲ್ಡ್‌- ಕೆಆರ್‌ ಪುರಂ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಿದ್ದಾರೆ. ಸುಮಾರು 13.71 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ಇದಾಗಿದ್ದು ಇದರಿಂದ ಐಟಿಬಿಟಿ ನೌಕರರಿಗೆ ಹೆಚ್ಚಿನ ಖುಷಿಯಾಗಿದೆ.

ಆಯೇಷಾ ಬಾನು
|

Updated on:Mar 25, 2023 | 2:15 PM

ಬಹು ನಿರೀಕ್ಷಿತ ವೈಟ್‌ ಫೀಲ್ಡ್‌-ಕೆ.ಆರ್‌.ಪುರ ಮೆಟ್ರೋ ಸಂಚಾರಕ್ಕೆ ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸ್ವತಃ ಪ್ರಧಾನಿ ಮೋದಿಯೇ ಬೆಂಗಳೂರಿಗೆ ಆಗಮಿಸಿ ಯೋಜನೆ ಲೋಕಾರ್ಪಣೆ ಗೊಳಿಸಿದ್ದಾರೆ.

ಬಹು ನಿರೀಕ್ಷಿತ ವೈಟ್‌ ಫೀಲ್ಡ್‌-ಕೆ.ಆರ್‌.ಪುರ ಮೆಟ್ರೋ ಸಂಚಾರಕ್ಕೆ ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸ್ವತಃ ಪ್ರಧಾನಿ ಮೋದಿಯೇ ಬೆಂಗಳೂರಿಗೆ ಆಗಮಿಸಿ ಯೋಜನೆ ಲೋಕಾರ್ಪಣೆ ಗೊಳಿಸಿದ್ದಾರೆ.

1 / 6
ಮೆಟ್ರೋ ಉದ್ಘಾಟನೆ ಬಳಿಕ ನರೇಂದ್ರ ಮೋದಿಯವರು ಅದೇ ಮೆಟ್ರೋದಲ್ಲಿ ಪ್ರಯಾಣಿಸಿದರು. ಮೋದಿ ಜೊತೆ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಕೂಡ ಪ್ರಯಾಣಿಸಿದರು. ಈ ವೇಳೆ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು.

ಮೆಟ್ರೋ ಉದ್ಘಾಟನೆ ಬಳಿಕ ನರೇಂದ್ರ ಮೋದಿಯವರು ಅದೇ ಮೆಟ್ರೋದಲ್ಲಿ ಪ್ರಯಾಣಿಸಿದರು. ಮೋದಿ ಜೊತೆ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಕೂಡ ಪ್ರಯಾಣಿಸಿದರು. ಈ ವೇಳೆ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು.

2 / 6
ಮೆಟ್ರೋದಲ್ಲಿ ಸಂಚಾರ ನಡೆಸಿದ ಮೋದಿ ಅವರು ಮೆಟ್ರೋ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.  13.71 ಕಿಲೋ ಮೀಟರ್‌ ಉದ್ದದ ನೇರಳೆ ಬಣ್ಣದ ಈ ಮಾರ್ಗದಲ್ಲಿ ಒಟ್ಟು 12 ಸ್ಟೇಷನ್‌ಗಳು ಬರಲಿವೆ. ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರಿಂದ ಕೆ.ಆರ್‌.ಪುರ, ವೈಟ್‌ ಫೀಲ್ಡ್‌ ಭಾಗದಲ್ಲಿ ಆಗ್ತಿದ್ದ ಸಂಚಾರ ದಟ್ಟಣೆ ಅಲ್ಪಮಟ್ಟಿಗೆ ನಿವಾರಣೆಯಾಗಲಿದೆ.

ಮೆಟ್ರೋದಲ್ಲಿ ಸಂಚಾರ ನಡೆಸಿದ ಮೋದಿ ಅವರು ಮೆಟ್ರೋ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು. 13.71 ಕಿಲೋ ಮೀಟರ್‌ ಉದ್ದದ ನೇರಳೆ ಬಣ್ಣದ ಈ ಮಾರ್ಗದಲ್ಲಿ ಒಟ್ಟು 12 ಸ್ಟೇಷನ್‌ಗಳು ಬರಲಿವೆ. ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರಿಂದ ಕೆ.ಆರ್‌.ಪುರ, ವೈಟ್‌ ಫೀಲ್ಡ್‌ ಭಾಗದಲ್ಲಿ ಆಗ್ತಿದ್ದ ಸಂಚಾರ ದಟ್ಟಣೆ ಅಲ್ಪಮಟ್ಟಿಗೆ ನಿವಾರಣೆಯಾಗಲಿದೆ.

3 / 6
ವೈಟ್​​ಫೀಲ್ಡ್​​ನಲ್ಲಿ ಕಾಮಗಾರಿ ಪೂರ್ಣವಾಗಿದೆ. ಆದ್ರೆ ಕೆ.ಆರ್.ಪುರಂ ನಿಲ್ದಾಣ ಇನ್ನೂ ಅಪೂರ್ಣವಾಗಿದೆ. ಪಿಲ್ಲರ್‌ಗಳು, ಸೀಮೆಂಟ್ ಕಾರ್ಯ, ಸ್ಟೇಷನ್‌ಗೆ ಕಂಬಿಗಳನ್ನು ಅಳವಡಿಸುವುದು ಸೇರಿದಂತೆ ಅನೇಕ ಕಾರ್ಯಗಳು ಬಾಕಿ ಇವೆ.

ವೈಟ್​​ಫೀಲ್ಡ್​​ನಲ್ಲಿ ಕಾಮಗಾರಿ ಪೂರ್ಣವಾಗಿದೆ. ಆದ್ರೆ ಕೆ.ಆರ್.ಪುರಂ ನಿಲ್ದಾಣ ಇನ್ನೂ ಅಪೂರ್ಣವಾಗಿದೆ. ಪಿಲ್ಲರ್‌ಗಳು, ಸೀಮೆಂಟ್ ಕಾರ್ಯ, ಸ್ಟೇಷನ್‌ಗೆ ಕಂಬಿಗಳನ್ನು ಅಳವಡಿಸುವುದು ಸೇರಿದಂತೆ ಅನೇಕ ಕಾರ್ಯಗಳು ಬಾಕಿ ಇವೆ.

4 / 6
ಅಲ್ಲದೆ ಕೆ.ಆರ್.ಪುರದಿಂದ ಬೈಯ್ಯಪ್ಪನಹಳ್ಳಿಗೆ ಇನ್ನೂ ಕನೆಕ್ಟಿವಿಟಿ ಕಲ್ಪಿಸಿಲ್ಲ. ವೈಟ್‌ಫೀಲ್ಡ್‌, ಚನ್ನಸಂದ್ರ, ಕಾಡುಗೋಡಿ ಟ್ರೀಪಾರ್ಕ್‌, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯಾಸಾಯಿ ಆಸ್ಪತ್ರೆ, ನಲ್ಲೂರಹಳ್ಳಿ, ಕುಂದಹಳ್ಳಿ, ಸೀತಾರಾಮನಪಾಳ್ಯ, ಹೂಡಿ, ಗರುಡಾಚಾರ್‌ ಪಾಳ್ಯ, ಸಿಂಗಯ್ಯನಪಾಳ್ಯ, ಕೆಆರ್‌ಪುರದಲ್ಲಿ ಮೆಟ್ರೋ ನಿಲ್ದಾಣಗಳಿವೆ. 

ಅಲ್ಲದೆ ಕೆ.ಆರ್.ಪುರದಿಂದ ಬೈಯ್ಯಪ್ಪನಹಳ್ಳಿಗೆ ಇನ್ನೂ ಕನೆಕ್ಟಿವಿಟಿ ಕಲ್ಪಿಸಿಲ್ಲ. ವೈಟ್‌ಫೀಲ್ಡ್‌, ಚನ್ನಸಂದ್ರ, ಕಾಡುಗೋಡಿ ಟ್ರೀಪಾರ್ಕ್‌, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯಾಸಾಯಿ ಆಸ್ಪತ್ರೆ, ನಲ್ಲೂರಹಳ್ಳಿ, ಕುಂದಹಳ್ಳಿ, ಸೀತಾರಾಮನಪಾಳ್ಯ, ಹೂಡಿ, ಗರುಡಾಚಾರ್‌ ಪಾಳ್ಯ, ಸಿಂಗಯ್ಯನಪಾಳ್ಯ, ಕೆಆರ್‌ಪುರದಲ್ಲಿ ಮೆಟ್ರೋ ನಿಲ್ದಾಣಗಳಿವೆ. 

5 / 6
ಕೆಆರ್‌ಪುರ, ವೈಟ್‌ಫೀಲ್ಡ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣಗಳಿಗೆ ಸಂಪರ್ಕಿಸಲು ಮೇಲ್ಸೇತುವೆ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ ಇದ್ದು ಕೆಆರ್‌ಪುರ ಮತ್ತು ವೈಟ್‌ಫೀಲ್ಡ್‌ ನಿಲ್ದಾಣಗಳಲ್ಲಿ ಕಾರು ಮತ್ತು ಬೈಕ್‌ ಪಾರ್ಕಿಂಗ್‌ಗೆ ಸುಸಜ್ಜಿತ ವ್ಯವಸ್ಥೆ ಮಾಡಲಾಗಿದೆ.

ಕೆಆರ್‌ಪುರ, ವೈಟ್‌ಫೀಲ್ಡ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣಗಳಿಗೆ ಸಂಪರ್ಕಿಸಲು ಮೇಲ್ಸೇತುವೆ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ ಇದ್ದು ಕೆಆರ್‌ಪುರ ಮತ್ತು ವೈಟ್‌ಫೀಲ್ಡ್‌ ನಿಲ್ದಾಣಗಳಲ್ಲಿ ಕಾರು ಮತ್ತು ಬೈಕ್‌ ಪಾರ್ಕಿಂಗ್‌ಗೆ ಸುಸಜ್ಜಿತ ವ್ಯವಸ್ಥೆ ಮಾಡಲಾಗಿದೆ.

6 / 6

Published On - 2:15 pm, Sat, 25 March 23

Follow us
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್