AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಕನಸಿನ ಯೋಜನೆಗೆ ವಿರೋಧ ಏಕೆ? ಏನಿದು ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್?

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ತುಮಕೂರಿನ ಗುಬ್ಬಿಯ ಸಂಕಾಪುರದ ಕಾಮಗಾರಿ ಸ್ಥಳಕ್ಕೆ ತೆರಳಲು ಪ್ರತಿಭಟನಾಕಾರರ ದಂಡು ರೆಡಿಯಾಗಿತ್ತು. ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿದ್ದರಿಂದ ಕಾಮಗಾರಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನಾವಾ ನೀವಾ ನೋಡಿಯೇ ಬಿಡೋಣ ಎಂದು ಸರ್ಕಾರಕ್ಕೆ ಸೆಡ್ಡು ಹೊಡೆದ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾದ್ರೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕನಸಿ ಈ ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆಗೆ ವಿರೋಧ ಏಕೆ? ಏನಿದು ಯೋಜನೆ? ಯಾವಾಗ, ಯಾರು ಕಾಲದಲ್ಲಿ ಆದೇಶವಾಗಿದ್ದು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

Jagadisha B
| Edited By: |

Updated on:May 31, 2025 | 5:52 PM

Share
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ತುಮಕೂರಲ್ಲಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿಟ್ಟೂರಿನಿಂದ ಪಾದಯಾತ್ರೆ ಮೂಲಕ ಕಾಮಗಾರಿ ನಡೆಯುತ್ತಿರುವ ಸುಂಕಾಪುರದತ್ತ ಸಾವಿರಾರು ರೈತರು, ಹೋರಾಟಗಾರರು ಲಗ್ಗೆಯಿಟ್ಟಿದ್ದಾರೆ. ಗುಬ್ಬಿಯ ಸುಂಕಾಪುರದಲ್ಲಿ ಹೇಮಾವತಿ ನೀರಿಗಾಗಿ ಹೋರಾಟ ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ.

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ತುಮಕೂರಲ್ಲಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿಟ್ಟೂರಿನಿಂದ ಪಾದಯಾತ್ರೆ ಮೂಲಕ ಕಾಮಗಾರಿ ನಡೆಯುತ್ತಿರುವ ಸುಂಕಾಪುರದತ್ತ ಸಾವಿರಾರು ರೈತರು, ಹೋರಾಟಗಾರರು ಲಗ್ಗೆಯಿಟ್ಟಿದ್ದಾರೆ. ಗುಬ್ಬಿಯ ಸುಂಕಾಪುರದಲ್ಲಿ ಹೇಮಾವತಿ ನೀರಿಗಾಗಿ ಹೋರಾಟ ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ.

1 / 12
ಉಗ್ರ ಹೋರಾಟ ನಡೆಸುತ್ತಿರುವ ರೈತ ಪರ ಸಂಘಟನೆ ಹಾಗೂ ಬಿಜೆಪಿ ನಾಯಕರು ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ಮುತ್ತಿಗೆ ಹಾಕಲು ಮುಂದಾದರು. ಕಾಮಗಾರಿ ಸಲಕರಣೆಗಳನ್ನ ಕೆನಾಲ್ ಒಳಗೆ ಎಸೆದು ಆಕ್ರೋಶ‌ ವ್ಯಕ್ತಪಡಿಸಿದ್ದು, ಕೆನಾಲ್ ಕಾಮಗಾರಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ರೈತರು ನೆರೆದಿರುವುದರಿಂದ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಉಗ್ರ ಹೋರಾಟ ನಡೆಸುತ್ತಿರುವ ರೈತ ಪರ ಸಂಘಟನೆ ಹಾಗೂ ಬಿಜೆಪಿ ನಾಯಕರು ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ಮುತ್ತಿಗೆ ಹಾಕಲು ಮುಂದಾದರು. ಕಾಮಗಾರಿ ಸಲಕರಣೆಗಳನ್ನ ಕೆನಾಲ್ ಒಳಗೆ ಎಸೆದು ಆಕ್ರೋಶ‌ ವ್ಯಕ್ತಪಡಿಸಿದ್ದು, ಕೆನಾಲ್ ಕಾಮಗಾರಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ರೈತರು ನೆರೆದಿರುವುದರಿಂದ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

2 / 12
ಹಾಸನ ಜಿಲ್ಲೆಯಲ್ಲಿರುವ ಹೇಮಾವತಿ ನದಿ, ಗೊರೂರು ಜಲಾಶಯದಿಂದ ತುಮಕೂರು ಜಿಲ್ಲೆಗೆ ವರ್ಷಕ್ಕೆ 24 ಟಿಎಂಸಿ ನೀರು ಹಂಚಿಕೆ ಆಗಬೇಕು. ಆದರೆ ಯಾವುದೇ ವರ್ಷವೂ 24 ಟಿಎಂಸಿ ನೀರು ಹಾಸನದಿಂದ ತುಮಕೂರಿಗೆ ಹರಿದಿಲ್ಲ.  ಈ ಯೋಜನೆಯಡಿ ಗುಬ್ಬಿ ತಾಲ್ಲೂಕಿನ ಸಂಕಾಪುರದಿಂದ ಪೈಪ್ ಲೇನ್‌ನಲ್ಲಿ ಕುಣಿಗಲ್ ಮಾರ್ಗವಾಗಿ ಮಾಗಡಿಗೆ ನೀರು ಹರಿಸಲಾಗುತ್ತಿದೆ. ಇದಕ್ಕೆ ತುಮಕೂರು ಜಿಲ್ಲೆಯ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಹಾಸನ ಜಿಲ್ಲೆಯಲ್ಲಿರುವ ಹೇಮಾವತಿ ನದಿ, ಗೊರೂರು ಜಲಾಶಯದಿಂದ ತುಮಕೂರು ಜಿಲ್ಲೆಗೆ ವರ್ಷಕ್ಕೆ 24 ಟಿಎಂಸಿ ನೀರು ಹಂಚಿಕೆ ಆಗಬೇಕು. ಆದರೆ ಯಾವುದೇ ವರ್ಷವೂ 24 ಟಿಎಂಸಿ ನೀರು ಹಾಸನದಿಂದ ತುಮಕೂರಿಗೆ ಹರಿದಿಲ್ಲ. ಈ ಯೋಜನೆಯಡಿ ಗುಬ್ಬಿ ತಾಲ್ಲೂಕಿನ ಸಂಕಾಪುರದಿಂದ ಪೈಪ್ ಲೇನ್‌ನಲ್ಲಿ ಕುಣಿಗಲ್ ಮಾರ್ಗವಾಗಿ ಮಾಗಡಿಗೆ ನೀರು ಹರಿಸಲಾಗುತ್ತಿದೆ. ಇದಕ್ಕೆ ತುಮಕೂರು ಜಿಲ್ಲೆಯ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

3 / 12
ಗುಬ್ಬಿ, ಕುಣಿಗಲ್ ತಾಲ್ಲೂಕಿನಿಂದ ನೈಸರ್ಗಿಕವಾಗಿ ನಾಲೆಗಳ ಮೂಲಕವೇ ಮಾಗಡಿಗೆ ನೀರು ಹರಿಸಿ. ಅದನ್ನ ಬಿಟ್ಟು ದೊಡ್ಡ ಸ್ಟೀಲ್ ಪೈಪ್ ಬಳಸಿ ಕುಣಿಗಲ್ ಮೂಲಕ ಮಾಗಡಿಗೆ ನೀರು ಹರಿಸುವುದು ಬೇಡ. ಇದರಿಂದ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್‌ನಿಂದ ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಸಿಗದಂತೆ ಆಗುತ್ತೆ ಎಂಬುದು ತುಮಕೂರು ರೈತರ ಆತಂಕ .

ಗುಬ್ಬಿ, ಕುಣಿಗಲ್ ತಾಲ್ಲೂಕಿನಿಂದ ನೈಸರ್ಗಿಕವಾಗಿ ನಾಲೆಗಳ ಮೂಲಕವೇ ಮಾಗಡಿಗೆ ನೀರು ಹರಿಸಿ. ಅದನ್ನ ಬಿಟ್ಟು ದೊಡ್ಡ ಸ್ಟೀಲ್ ಪೈಪ್ ಬಳಸಿ ಕುಣಿಗಲ್ ಮೂಲಕ ಮಾಗಡಿಗೆ ನೀರು ಹರಿಸುವುದು ಬೇಡ. ಇದರಿಂದ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್‌ನಿಂದ ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಸಿಗದಂತೆ ಆಗುತ್ತೆ ಎಂಬುದು ತುಮಕೂರು ರೈತರ ಆತಂಕ .

4 / 12
 ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಯೋಜನೆ ಹೇಮಾವತಿ ಲಿಂಕಿಂಗ್ ಕೆನಾಲ್ ಗೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ  ಎಚ್​ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದೇಶ ಮಾಡಲಾಗಿತ್ತು. 2019ರಲ್ಲಿ ಆದೇಶಗೊಂಡ ಯೋಜನೆ‌. ಈ ಸಂಬಂಧ 600 ಕೋಟಿ ರೂ. ಅನುದಾನ ಸಹ ಬಿಡುಗಡೆ ಮಾಡಲಾಗಿತ್ತು.

ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಯೋಜನೆ ಹೇಮಾವತಿ ಲಿಂಕಿಂಗ್ ಕೆನಾಲ್ ಗೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎಚ್​ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದೇಶ ಮಾಡಲಾಗಿತ್ತು. 2019ರಲ್ಲಿ ಆದೇಶಗೊಂಡ ಯೋಜನೆ‌. ಈ ಸಂಬಂಧ 600 ಕೋಟಿ ರೂ. ಅನುದಾನ ಸಹ ಬಿಡುಗಡೆ ಮಾಡಲಾಗಿತ್ತು.

5 / 12
2023ರ ವಿಧಾನಸಭಾ ಚುನಾವನೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್, ನೆನೆಗುದಿಗೆ ಬಿದ್ದಿದ್ದ ಎಕ್ಸ್​ ಪ್ರೆಸ್​ ಲಿಂಕ್​ ಕೆನಾಲ್ ಕಾಮಗಾರಿಗೆ ಮರು ಜೀವ ಕೊಟ್ಟರು. ಇದರೊಂದಿಗೆ 450 ಕೋಟಿ ಇದ್ದ ಕಾಮಗಾರಿ ವೆಚ್ಚವು 900 ಕೋಟಿಗೆ ಏರಿಕೆಯಾಯಿತು

2023ರ ವಿಧಾನಸಭಾ ಚುನಾವನೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್, ನೆನೆಗುದಿಗೆ ಬಿದ್ದಿದ್ದ ಎಕ್ಸ್​ ಪ್ರೆಸ್​ ಲಿಂಕ್​ ಕೆನಾಲ್ ಕಾಮಗಾರಿಗೆ ಮರು ಜೀವ ಕೊಟ್ಟರು. ಇದರೊಂದಿಗೆ 450 ಕೋಟಿ ಇದ್ದ ಕಾಮಗಾರಿ ವೆಚ್ಚವು 900 ಕೋಟಿಗೆ ಏರಿಕೆಯಾಯಿತು

6 / 12
ಅಸಲಿಗೆ ಮೊದಲು ಅಂದರೇ ಹೇಮಾವತಿ ಓಪನ್ ಕೆನಾಲ್ 2005ರಿಂದ ಗೊರೂರು ಜಲಾಶಯದಿಂದ ಓಪನ್ ಕೆನಾಲ್ ನಲ್ಲಿ ಬರುತ್ತಿದೆ. ತುಮಕೂರಿನ ಹಲವು ತಾಲೂಕುಗಳ ಮುಖಾಂತರ ಕುಣಿಗಲ್ ಗೆ ತೆರಳುತಿದ್ದ ಓಪನ್ ಹೇಮಾವತಿ ಕೆನಾಲ್. ಗೊರೂರು ಜಲಾಶಯದಿಂದ ತುರುವೇಕೆರೆಗೆ ಎಂಟ್ರಿ. ತಿಪಟೂರು, ಗುಬ್ಬಿ ಮುಖಾಂತರ, ತುಮಕೂರು ನಗರ,ತುಮಕೂರು ಗ್ರಾಮಾಂತರವಾಗಿ ಹರಿದು ಕುಣಿಗಲ್ ಗೆ ಹೊಗುವ ಕೆನಾಲ್.

ಅಸಲಿಗೆ ಮೊದಲು ಅಂದರೇ ಹೇಮಾವತಿ ಓಪನ್ ಕೆನಾಲ್ 2005ರಿಂದ ಗೊರೂರು ಜಲಾಶಯದಿಂದ ಓಪನ್ ಕೆನಾಲ್ ನಲ್ಲಿ ಬರುತ್ತಿದೆ. ತುಮಕೂರಿನ ಹಲವು ತಾಲೂಕುಗಳ ಮುಖಾಂತರ ಕುಣಿಗಲ್ ಗೆ ತೆರಳುತಿದ್ದ ಓಪನ್ ಹೇಮಾವತಿ ಕೆನಾಲ್. ಗೊರೂರು ಜಲಾಶಯದಿಂದ ತುರುವೇಕೆರೆಗೆ ಎಂಟ್ರಿ. ತಿಪಟೂರು, ಗುಬ್ಬಿ ಮುಖಾಂತರ, ತುಮಕೂರು ನಗರ,ತುಮಕೂರು ಗ್ರಾಮಾಂತರವಾಗಿ ಹರಿದು ಕುಣಿಗಲ್ ಗೆ ಹೊಗುವ ಕೆನಾಲ್.

7 / 12
ತುಮಕೂರಿಗೆ 25.31 ಟಿಎಂಸಿ ನೀರು ಹಂಚಿಕೆ ಮಾಡಲು ನಿಗದಿಯಾಗಿತ್ತು. ಆದರೇ ಸರಿಯಾದ ಪ್ರಮಾಣದಲ್ಲಿ ನೀರು ಹಂಚಿಕೆಯಾಗಿಲ್ಲ. ಜೊತೆಗೆ ಜಿಲ್ಲೆಯ ಟೇಲ್ ಎಂಡ್ ನಲ್ಲಿರುವ ಕುಣಿಗಲ್ ಗೆ ನೀರು ಇಲ್ಲದಂತಾಗಿತ್ತು. ಕುಣಿಗಲ್ ಗೆ ಅಗತ್ಯವಾದದ್ದು 3 ಟಿಎಂಸಿ ನೀರು. ಹೀಗಾಗಿ ಕುಣಿಗಲ್ ಗೆ ಅಗತ್ಯ ನೀರು ಸಂಪರ್ಕ ಕಲ್ಪಿಸಲು ಈ ಎಕ್ಸ್ ಪ್ರೆಸ್ ಲಿಂಕಿಂಗ್ ಕೊನಾಲ್ ಯೋಜನೆ ತರಲಾಯ್ತು.

ತುಮಕೂರಿಗೆ 25.31 ಟಿಎಂಸಿ ನೀರು ಹಂಚಿಕೆ ಮಾಡಲು ನಿಗದಿಯಾಗಿತ್ತು. ಆದರೇ ಸರಿಯಾದ ಪ್ರಮಾಣದಲ್ಲಿ ನೀರು ಹಂಚಿಕೆಯಾಗಿಲ್ಲ. ಜೊತೆಗೆ ಜಿಲ್ಲೆಯ ಟೇಲ್ ಎಂಡ್ ನಲ್ಲಿರುವ ಕುಣಿಗಲ್ ಗೆ ನೀರು ಇಲ್ಲದಂತಾಗಿತ್ತು. ಕುಣಿಗಲ್ ಗೆ ಅಗತ್ಯವಾದದ್ದು 3 ಟಿಎಂಸಿ ನೀರು. ಹೀಗಾಗಿ ಕುಣಿಗಲ್ ಗೆ ಅಗತ್ಯ ನೀರು ಸಂಪರ್ಕ ಕಲ್ಪಿಸಲು ಈ ಎಕ್ಸ್ ಪ್ರೆಸ್ ಲಿಂಕಿಂಗ್ ಕೊನಾಲ್ ಯೋಜನೆ ತರಲಾಯ್ತು.

8 / 12
ಲಿಂಕಿಂಗ್ ಕ್ಯಾನಾಲ್ ಮುಖಾಂತರ ಕುಣಿಗಲ್ ಗೆ ಪೈಪ್​ ಲೇನ್ ನಲ್ಲಿ ನೀರು ಬಿಡುವ ಯೋಜನೆ ಇದ್ದಾಗಿದ್ದು,
ಗುಬ್ಬಿಯ ಸಂಕಾಪುರದಿಂದ ಆರಂಭವಾಗುತ್ತದೆ. ಕುಣಿಗಲ್ ಕೆರೆಗೆ ತಲುಪಲು ಸಿದ್ಧಗೊಂಡ ಯೋಜನೆ ಇದಾಗಿದೆ.

ಲಿಂಕಿಂಗ್ ಕ್ಯಾನಾಲ್ ಮುಖಾಂತರ ಕುಣಿಗಲ್ ಗೆ ಪೈಪ್​ ಲೇನ್ ನಲ್ಲಿ ನೀರು ಬಿಡುವ ಯೋಜನೆ ಇದ್ದಾಗಿದ್ದು, ಗುಬ್ಬಿಯ ಸಂಕಾಪುರದಿಂದ ಆರಂಭವಾಗುತ್ತದೆ. ಕುಣಿಗಲ್ ಕೆರೆಗೆ ತಲುಪಲು ಸಿದ್ಧಗೊಂಡ ಯೋಜನೆ ಇದಾಗಿದೆ.

9 / 12
ಯೋಜನೆ ಮರುಜೀವ ಸಿಗುತ್ತಿದ್ದಂತೆಯೇ ತುಮಕೂರು ಭಾಗದಲ್ಲಿ ವಿರೋಧ ವ್ಯಕ್ತವಾಯಿತು. ಒಂದೆಡೆ ಶ್ರೀರಂಗ ಯೋಜನೆ ಪೂರ್ಣವಾಗುವ ಹಂತದಲ್ಲಿದ್ದರೆ ಮತ್ತೊಂದೆಡೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಪ ಬಳಿಯ ಡಿ ರಾಂಪುರ ಸಮೀಪ ಲಿಂಕ್ ಕೆನಾಲ್ ಕಾಮಗಾರಿ ಶುರುವಾಯ್ತು. ಇದರಿಂದಾಗಿ ನಮಗೆ ಹಂಚಿಕೆಯಾಗಿರುವ ನೀರೇ ಪೂರ್ಣ ಪ್ರಮಾಣದಲ್ಲಿ ತಲುಪುತ್ತಿಲ್ಲ. ಹೀಗಿರುವಾಗ ಎಕ್ಸ್ ಪ್ರೆಸ್​ ಕೆನಾಲ್ ಯೋಜನೆ ಮೂಲಕ ನಮ್ಮ ಪಾಲಿನ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇದರಿಂದ ನಮಗೆ ಅನ್ಯಾಯವಾಗುತ್ತದೆ ಎಂಬ ಕೂಗು ಎದ್ದಿದೆ.

ಯೋಜನೆ ಮರುಜೀವ ಸಿಗುತ್ತಿದ್ದಂತೆಯೇ ತುಮಕೂರು ಭಾಗದಲ್ಲಿ ವಿರೋಧ ವ್ಯಕ್ತವಾಯಿತು. ಒಂದೆಡೆ ಶ್ರೀರಂಗ ಯೋಜನೆ ಪೂರ್ಣವಾಗುವ ಹಂತದಲ್ಲಿದ್ದರೆ ಮತ್ತೊಂದೆಡೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಪ ಬಳಿಯ ಡಿ ರಾಂಪುರ ಸಮೀಪ ಲಿಂಕ್ ಕೆನಾಲ್ ಕಾಮಗಾರಿ ಶುರುವಾಯ್ತು. ಇದರಿಂದಾಗಿ ನಮಗೆ ಹಂಚಿಕೆಯಾಗಿರುವ ನೀರೇ ಪೂರ್ಣ ಪ್ರಮಾಣದಲ್ಲಿ ತಲುಪುತ್ತಿಲ್ಲ. ಹೀಗಿರುವಾಗ ಎಕ್ಸ್ ಪ್ರೆಸ್​ ಕೆನಾಲ್ ಯೋಜನೆ ಮೂಲಕ ನಮ್ಮ ಪಾಲಿನ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇದರಿಂದ ನಮಗೆ ಅನ್ಯಾಯವಾಗುತ್ತದೆ ಎಂಬ ಕೂಗು ಎದ್ದಿದೆ.

10 / 12
ಕಾವೇರಿ ನ್ಯಾಯಾಧೀಕರಣದ ಆದೇಶದಂತೆ ಹೇಮಾವತಿ ನಾಲಾ ವಲಯ ಮತ್ತು ತುಮಕೂರಿಗೆ ಒಟ್ಟು 25.31 ಟಿಎಂಸಿ ನೀರು ನಿಗದಿಯಾಗಿದೆ. ಅದರಂತೆ ನಾಲಾ ವಲಯದಲ್ಲಿರುವ ಹಾಸನ, ಮಂಡ್ಯ,  ತುಮಕೂರು ಹಾಗೂ ರಾಮನಗರ ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಹಂಚಿಕೆಯಾಯಾಗಿದೆ. ಇದರಲ್ಲಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ 66 ಕೆರೆಗಳಿಗೆ ನೀರು ತುಂಬಿಸುವುದು ಸಹ ಸೇರಿದೆ. ಹೇಮಾವತಿ ನೀರಿಗಾಗಿ ತಾಲೂಕಿನಲ್ಲಿ ಹಿರಿಯ ರಾಜಕಾರಣಿ ದಿವಂಗತ ಟಿಎ ರಂಗಯ್ಯಸೇರಿದಂತೆ ಇಂದಿನ ರಾಜಕಾರಣಿಗಳವರೆಗೆ ನಡೆಸಿದ ಪ್ರಯತ್ನದ ಫಲವಾಗಿ ದಶಕಗಳ ಕನಸು ನನಸಾಯಿತು.

ಕಾವೇರಿ ನ್ಯಾಯಾಧೀಕರಣದ ಆದೇಶದಂತೆ ಹೇಮಾವತಿ ನಾಲಾ ವಲಯ ಮತ್ತು ತುಮಕೂರಿಗೆ ಒಟ್ಟು 25.31 ಟಿಎಂಸಿ ನೀರು ನಿಗದಿಯಾಗಿದೆ. ಅದರಂತೆ ನಾಲಾ ವಲಯದಲ್ಲಿರುವ ಹಾಸನ, ಮಂಡ್ಯ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಹಂಚಿಕೆಯಾಯಾಗಿದೆ. ಇದರಲ್ಲಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ 66 ಕೆರೆಗಳಿಗೆ ನೀರು ತುಂಬಿಸುವುದು ಸಹ ಸೇರಿದೆ. ಹೇಮಾವತಿ ನೀರಿಗಾಗಿ ತಾಲೂಕಿನಲ್ಲಿ ಹಿರಿಯ ರಾಜಕಾರಣಿ ದಿವಂಗತ ಟಿಎ ರಂಗಯ್ಯಸೇರಿದಂತೆ ಇಂದಿನ ರಾಜಕಾರಣಿಗಳವರೆಗೆ ನಡೆಸಿದ ಪ್ರಯತ್ನದ ಫಲವಾಗಿ ದಶಕಗಳ ಕನಸು ನನಸಾಯಿತು.

11 / 12
2016ರಲ್ಲಿ ಶಂಕುಸ್ಥಾಪನೆ: ಜಲಸಂಪನ್ಮೂಲ ಇಲಾಖೆಯ ಕಾವೇರಿ ನೀರಾವರಿ ನಿಗಮದ ವತಿಯಿಂದ ಕುಣಿಗಲ್ ತಾಲೂಕಿನಲ್ಲಿ ಹುತ್ರಿದುರ್ಗ ಹೋಬಳಿ ಹಾಗೂ ಮಾಗಡಿ ತಾಲೂಕು ಒಳಗೊಂಡಂತೆ 83 ಕೆರೆಗಳಿಗೆ ಹೇಮಾವತಿ ನೀರು ತುಂಬಿಸುವ 327 ಕೋಟಿ ಮೊತ್ತದ ಶ್ರೀರಂಗ ಏತ ನೀರಾವತಿ ಯೋಜನೆ ಗೆ 2016ರಲ್ಲಿ ಚಾಲನೆ ಸಿಕಿತ್ತು.

2016ರಲ್ಲಿ ಶಂಕುಸ್ಥಾಪನೆ: ಜಲಸಂಪನ್ಮೂಲ ಇಲಾಖೆಯ ಕಾವೇರಿ ನೀರಾವರಿ ನಿಗಮದ ವತಿಯಿಂದ ಕುಣಿಗಲ್ ತಾಲೂಕಿನಲ್ಲಿ ಹುತ್ರಿದುರ್ಗ ಹೋಬಳಿ ಹಾಗೂ ಮಾಗಡಿ ತಾಲೂಕು ಒಳಗೊಂಡಂತೆ 83 ಕೆರೆಗಳಿಗೆ ಹೇಮಾವತಿ ನೀರು ತುಂಬಿಸುವ 327 ಕೋಟಿ ಮೊತ್ತದ ಶ್ರೀರಂಗ ಏತ ನೀರಾವತಿ ಯೋಜನೆ ಗೆ 2016ರಲ್ಲಿ ಚಾಲನೆ ಸಿಕಿತ್ತು.

12 / 12

Published On - 5:22 pm, Sat, 31 May 25

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ