AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ ಇಬ್ಬರು ಮಕ್ಕಳಿರೋದನ್ನು ಮುಚ್ಚಿಟ್ಟು ಯುವಕನೊಂದಿಗೆ ವಿವಾಹವಾದ ಮಹಿಳೆ! ಆಮೇಲೇನಾಯ್ತು ಗೊತ್ತೇ?

ಹಾವೇರಿ, ಫೆಬ್ರವರಿ 11: ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಮಹಿಳೆಯೊಬ್ಬಳು ಮತ್ತೊಮ್ಮೆ ಮದುವೆಯಾಗಿ ಯುವಕನಿಗೆ ಮೋಸ ಮಾಡಿದ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ, ಮೋಸಹೋದ ಯುವಕ ನ್ಯಾಯಕ್ಕಾಗಿ ಹಲಗೇರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಮಹಿಳೆ ಯುವಕನನ್ನು ಮದುವೆಯಾಗಿದ್ದಲ್ಲದೆ, ಆತನಿಂದ 2.5 ಲಕ್ಷ ರೂ. ಸಹ ಪಡೆದಿದ್ದಾಳೆ. ಕೊನೆಗೆ ಅಚ್ಚರಿಯ ರೀತಿಯಲ್ಲಿ ಮಹಿಳೆಯ ಕಳ್ಳಾಟ ಬಯಲಾಗಿದೆ.

ಗಣಪತಿ ಶರ್ಮಾ
|

Updated on: Feb 11, 2026 | 11:01 AM

Share
ಮದುವೆ ಹೆಸರಿನಲ್ಲಿ ವಂಚನೆ ಕೃತ್ಯಗಳನ್ನು ಎಸಗುವ ಪ್ರಕರಣಗಳ ಬಗ್ಗೆ ಆಗಾಗ್ಗೆ ವರದಿಯಾಗುತ್ತಿರುತ್ತವೆ. ಆದರೆ, ಹಾವೇರಿಯಲ್ಲೊಂದು ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳು, ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಯುವಕನ ಕೈಹಿಡಿದು ಆತನಿಂದ 2.5 ಲಕ್ಷ ರೂ. ಪಡೆದು ಮೋಸ ಮಾಡಿದ್ದಾಳೆ.

ಮದುವೆ ಹೆಸರಿನಲ್ಲಿ ವಂಚನೆ ಕೃತ್ಯಗಳನ್ನು ಎಸಗುವ ಪ್ರಕರಣಗಳ ಬಗ್ಗೆ ಆಗಾಗ್ಗೆ ವರದಿಯಾಗುತ್ತಿರುತ್ತವೆ. ಆದರೆ, ಹಾವೇರಿಯಲ್ಲೊಂದು ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳು, ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಯುವಕನ ಕೈಹಿಡಿದು ಆತನಿಂದ 2.5 ಲಕ್ಷ ರೂ. ಪಡೆದು ಮೋಸ ಮಾಡಿದ್ದಾಳೆ.

1 / 5
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರವಿಚಂದ್ರ ಎಂಬ ಯುವಕ ಮೋಸಹೋದ ಅಮಾಯಕನಾಗಿದ್ದಾನೆ. ತುಮಕೂರಿನ ಪಾವಗಡ ಮೂಲದ ರೇಖಾ ಎಂಬ ಮಹಿಳೆ ಆತನನ್ನು ಮದುವೆಯಾದ್ದಲ್ಲದೆ, ಸುಮಾರು 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದ್ದಾಳೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರವಿಚಂದ್ರ ಎಂಬ ಯುವಕ ಮೋಸಹೋದ ಅಮಾಯಕನಾಗಿದ್ದಾನೆ. ತುಮಕೂರಿನ ಪಾವಗಡ ಮೂಲದ ರೇಖಾ ಎಂಬ ಮಹಿಳೆ ಆತನನ್ನು ಮದುವೆಯಾದ್ದಲ್ಲದೆ, ಸುಮಾರು 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದ್ದಾಳೆ.

2 / 5
ಕಳೆದ ವಾರವೇ ಹಿರೇಕೇರೂರು ದುರ್ಗಾ ದೇವಿ ದೇವಸ್ಥಾನದಲ್ಲಿ ಇವರ ಮದುವೆ ನೆರವೇರಿತ್ತು. ಆದರೆ ಮದುವೆಯಾಗಿ ಕೆಲವೇ ದಿನಗಳಲ್ಲಿ ರೇಖಾಳ ಕಳ್ಳಾಟ ಬಯಲಾಗಿದೆ. ರೇಖಾಳ ಮೊಬೈಲ್‌ಗೆ ಮಂಗಳವಾರ ಕರೆ ಮಾಡಿದ ಮಕ್ಕಳು ‘ನಾವು ರೇಖಾ ಮಕ್ಕಳು’ ಎಂದು ಹೇಳಿದಾಗ ರವಿಚಂದ್ರ ಕುಟುಂಬಕ್ಕೆ ಆಘಾತವಾಗಿದೆ.

ಕಳೆದ ವಾರವೇ ಹಿರೇಕೇರೂರು ದುರ್ಗಾ ದೇವಿ ದೇವಸ್ಥಾನದಲ್ಲಿ ಇವರ ಮದುವೆ ನೆರವೇರಿತ್ತು. ಆದರೆ ಮದುವೆಯಾಗಿ ಕೆಲವೇ ದಿನಗಳಲ್ಲಿ ರೇಖಾಳ ಕಳ್ಳಾಟ ಬಯಲಾಗಿದೆ. ರೇಖಾಳ ಮೊಬೈಲ್‌ಗೆ ಮಂಗಳವಾರ ಕರೆ ಮಾಡಿದ ಮಕ್ಕಳು ‘ನಾವು ರೇಖಾ ಮಕ್ಕಳು’ ಎಂದು ಹೇಳಿದಾಗ ರವಿಚಂದ್ರ ಕುಟುಂಬಕ್ಕೆ ಆಘಾತವಾಗಿದೆ.

3 / 5
ತನ್ನ ಕಳ್ಳಾಟ ಯುವಕನ ಮನೆಯವರಿಗೆ ಗೊತ್ತಾಯಿತು ಎಂಬುದು ತಿಳಿಯುತ್ತಿದ್ದಂತೆಯೇ ರೇಖಾ ತುಮ್ಮಿನಕಟ್ಟಿ ಗ್ರಾಮದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಆಕೆ ಓಡಿ ಹೋಗಲು ಯತ್ನಿಸುತ್ತಿರುವ ವಿಷಯ ತಿಳಿದ ರವಿಚಂದ್ರ ಹಾಗೂ ಗ್ರಾಮಸ್ಥರು ರೇಖಾಳನ್ನು ಹಿಡಿದು ಹಲಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ತನ್ನ ಕಳ್ಳಾಟ ಯುವಕನ ಮನೆಯವರಿಗೆ ಗೊತ್ತಾಯಿತು ಎಂಬುದು ತಿಳಿಯುತ್ತಿದ್ದಂತೆಯೇ ರೇಖಾ ತುಮ್ಮಿನಕಟ್ಟಿ ಗ್ರಾಮದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಆಕೆ ಓಡಿ ಹೋಗಲು ಯತ್ನಿಸುತ್ತಿರುವ ವಿಷಯ ತಿಳಿದ ರವಿಚಂದ್ರ ಹಾಗೂ ಗ್ರಾಮಸ್ಥರು ರೇಖಾಳನ್ನು ಹಿಡಿದು ಹಲಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

4 / 5
ಸದ್ಯ ಮಹಿಳೆ ಪೊಲೀಸರ ವಶದಲ್ಲಿದ್ದಾಳೆ. ಆಕೆಯ ಕೃತ್ಯದ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸದ್ಯ ಈ ಮದುವೆ ಹಾವೇರಿಯಲ್ಲಿ ಸಂಚಲನ ಸೃಷ್​ಟಿಸಿದ್ದು, ಯುವಕನ ಬಗ್ಗೆ ಕನಿಕರ ವ್ಯಕ್ತವಾಗುತ್ತಿದೆ.
- ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಸದ್ಯ ಮಹಿಳೆ ಪೊಲೀಸರ ವಶದಲ್ಲಿದ್ದಾಳೆ. ಆಕೆಯ ಕೃತ್ಯದ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸದ್ಯ ಈ ಮದುವೆ ಹಾವೇರಿಯಲ್ಲಿ ಸಂಚಲನ ಸೃಷ್​ಟಿಸಿದ್ದು, ಯುವಕನ ಬಗ್ಗೆ ಕನಿಕರ ವ್ಯಕ್ತವಾಗುತ್ತಿದೆ. - ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

5 / 5
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ