Wrestlers Protest: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಪ್ರವೇಶ ನಿರ್ಬಂಧಿಸಿದ ದೆಹಲಿ ಪೊಲೀಸ್

ರಶ್ಮಿ ಕಲ್ಲಕಟ್ಟ

Updated on: May 04, 2023 | 7:31 PM

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಇಲ್ಲಿಂದ ಕದಲುವುದಿಲ್ಲ ಎಂದು ವಿನೇಶ್ ಫೋಗಟ್ ಹೇಳಿದ್ದಾರೆ. ಇತ್ತ ಗೀತಾ ಫೋಗಟ್ ಪೊಲೀಸರು ಜಂತರ್ ಮಂತರ್​​ಗೆ ಪ್ರವೇಶ ತಡೆದಿದ್ದಾರೆ ಎಂದು ಹೇಳಿದ್ದಾರೆ

1 / 9
ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಕೆಲವು ಪ್ರಮುಖ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಏಪ್ರಿಲ್ 23 ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ

ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಕೆಲವು ಪ್ರಮುಖ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಏಪ್ರಿಲ್ 23 ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ

2 / 9
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮೇಲೆ ಲೈಂಗಿಕ ಕಿರುಕುಳ ಆರೋಪದ ಹೊರಿಸಿರುವ ಪೈಲ್ವಾನರು, ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮೇಲೆ ಲೈಂಗಿಕ ಕಿರುಕುಳ ಆರೋಪದ ಹೊರಿಸಿರುವ ಪೈಲ್ವಾನರು, ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

3 / 9
ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಪ್ರವೇಶವನ್ನು ದೆಹಲಿ ಪೊಲೀಸರು ಗುರುವಾರ ತಡೆದಿದ್ದಾರೆ.

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಪ್ರವೇಶವನ್ನು ದೆಹಲಿ ಪೊಲೀಸರು ಗುರುವಾರ ತಡೆದಿದ್ದಾರೆ.

4 / 9
ಬುಧವಾರ ರಾತ್ರಿ ಪೊಲೀಸ್ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳ ಆರೋಪ

ಬುಧವಾರ ರಾತ್ರಿ ಪೊಲೀಸ್ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳ ಆರೋಪ

5 / 9
ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನೆರೆಯ ರಾಜ್ಯಗಳಾದ ದೆಹಲಿಯ ರೈತರು ಮತ್ತು ಡಿಯು ವಿದ್ಯಾರ್ಥಿಗಳು ಸೇರಿದಂತೆ ಸಮಾಜದ ವಿವಿಧ ಹಂತಗಳ ಜನರು ಗುರುವಾರ ಜಂತರ್ ಮಂತರ್ ತಲುಪಿ ಅಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನೆರೆಯ ರಾಜ್ಯಗಳಾದ ದೆಹಲಿಯ ರೈತರು ಮತ್ತು ಡಿಯು ವಿದ್ಯಾರ್ಥಿಗಳು ಸೇರಿದಂತೆ ಸಮಾಜದ ವಿವಿಧ ಹಂತಗಳ ಜನರು ಗುರುವಾರ ಜಂತರ್ ಮಂತರ್ ತಲುಪಿ ಅಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ

6 / 9
ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಕುಸ್ತಿಪಟುಗಳು ಮತ್ತು ದೆಹಲಿ ಪೊಲೀಸರ ನಡುವಿನ ಮಾರಾಮಾರಿ ನಡೆದ ಗಂಟೆಗಳ ನಂತರ ಕಣ್ಣೀರಿಟ್ಟ ಕುಸ್ತಿಪಟುಗಳು, ವರ್ಷಗಳಿಂದ ದೇಶಕ್ಕಾಗಿ ಗೆದ್ದ ಪದಕಗಳನ್ನು ಸರ್ಕಾರಕ್ಕೆ ಹಿಂದಿರುಗಿಸಲು ಸಿದ್ಧ ಎಂದು ಹೇಳಿದ್ದಾರೆ.

ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಕುಸ್ತಿಪಟುಗಳು ಮತ್ತು ದೆಹಲಿ ಪೊಲೀಸರ ನಡುವಿನ ಮಾರಾಮಾರಿ ನಡೆದ ಗಂಟೆಗಳ ನಂತರ ಕಣ್ಣೀರಿಟ್ಟ ಕುಸ್ತಿಪಟುಗಳು, ವರ್ಷಗಳಿಂದ ದೇಶಕ್ಕಾಗಿ ಗೆದ್ದ ಪದಕಗಳನ್ನು ಸರ್ಕಾರಕ್ಕೆ ಹಿಂದಿರುಗಿಸಲು ಸಿದ್ಧ ಎಂದು ಹೇಳಿದ್ದಾರೆ.

7 / 9
ಬುಧವಾರ ತಡರಾತ್ರಿ ಕುಸ್ತಿಪಟುಗಳನ್ನು ಪ್ರತಿಭಟನಾ ಸ್ಥಳಕ್ಕೆ ಮಡಿಚಲು ಹಾಸಿಗೆ ತರಲು ಮುಂದಾದಾಗ ಕುಸ್ತಿಪಟುಗಳ ಮೇಲೆ ಕುಡುಕ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಬಜರಂಗ್ ಪುನಿಯಾ ಆರೋಪಿಸಿದ್ದಾರೆ.

ಬುಧವಾರ ತಡರಾತ್ರಿ ಕುಸ್ತಿಪಟುಗಳನ್ನು ಪ್ರತಿಭಟನಾ ಸ್ಥಳಕ್ಕೆ ಮಡಿಚಲು ಹಾಸಿಗೆ ತರಲು ಮುಂದಾದಾಗ ಕುಸ್ತಿಪಟುಗಳ ಮೇಲೆ ಕುಡುಕ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಬಜರಂಗ್ ಪುನಿಯಾ ಆರೋಪಿಸಿದ್ದಾರೆ.

8 / 9
ವಿಶ್ವ ಚಾಂಪಿಯನ್‌ಶಿಪ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟದ ಪದಕ ವಿಜೇತ ವಿನೇಶ್ ಫೋಗಟ್, ಪೊಲೀಸರು ಕುಡಿದು, ತಳ್ಳುವ ಮತ್ತು ಮಹಿಳಾ ಪ್ರತಿಭಟನಾಕಾರರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟದ ಪದಕ ವಿಜೇತ ವಿನೇಶ್ ಫೋಗಟ್, ಪೊಲೀಸರು ಕುಡಿದು, ತಳ್ಳುವ ಮತ್ತು ಮಹಿಳಾ ಪ್ರತಿಭಟನಾಕಾರರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

9 / 9
ಜಂತರ್ ಮಂತರ್ ನಲ್ಲಿ ಬುಧವಾರ ತಡರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಮತ್ತು ಕೆಲವು ಪೊಲೀಸ್ ಸಿಬ್ಬಂದಿ ನಡುವೆ ವಾಗ್ವಾದ ನಡೆದ ನಂತರ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.

ಜಂತರ್ ಮಂತರ್ ನಲ್ಲಿ ಬುಧವಾರ ತಡರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಮತ್ತು ಕೆಲವು ಪೊಲೀಸ್ ಸಿಬ್ಬಂದಿ ನಡುವೆ ವಾಗ್ವಾದ ನಡೆದ ನಂತರ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us