AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಫ್ಯಾನ್: ಹೊಸ ಫ್ಯಾನ್ ತಂದ ಬಾಣಂತಿ ಸಂಬಂಧಿ

ಯಾದಗಿರಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಪ್ರತಿ ಬಾರಿ ಎಡವಟ್ಟುಗಳಿಂದ ಸುದ್ದಿಯಾಗುತ್ತಿದೆ. ಇದೀಗ ಕೆಟ್ಟು ಹೋದ ಫ್ಯಾನ್​ಗಳ ರಿಪೇರಿ ಮಾಡುವ ಕೆಲಸಕ್ಕೆ ವೈದ್ಯಾಧಿಕಾರಿಗಳು ಮುಂದಾಗಿಲ್ಲ. ಇದಕ್ಕೆ ಬೇಸತ್ತ ಬಾಣಂತಿಯರು ಹಣ ಖರ್ಚು ಮಾಡಿ ಹೊಸ ಫ್ಯಾನ್​ಗಳನ್ನು ಖರೀದಿ ಮಾಡಿಕೊಂಡು ಬಂದಿರುವಂತಹ ಘಟನೆ ನಡೆದಿದೆ.

ಅಮೀನ್​ ಸಾಬ್​
| Edited By: |

Updated on: Aug 18, 2024 | 5:31 PM

Share
ಯಾದಗಿರಿ ನಗರದಲ್ಲಿರುವ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ವಾರ್ಡ್​ಗಳಲ್ಲಿ ಫ್ಯಾನ್​ಗಳು ಹಾಳಾಗಿ ಹೋಗಿದ್ದರಿಂದ ಬಿಸಿಲಿನ ಧಗೆ ಒಂದು ಕಡೆಯಾದರೆ, ಇನ್ನೊಂದು ಕಡೆ ಸೊಳ್ಳೆಗಳ ಕಾಟದಿಂದ ಹೈರಾಣಾಗಿರುವಂತಹ ಘಟನೆ ನಡೆದಿದೆ. 

ಯಾದಗಿರಿ ನಗರದಲ್ಲಿರುವ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ವಾರ್ಡ್​ಗಳಲ್ಲಿ ಫ್ಯಾನ್​ಗಳು ಹಾಳಾಗಿ ಹೋಗಿದ್ದರಿಂದ ಬಿಸಿಲಿನ ಧಗೆ ಒಂದು ಕಡೆಯಾದರೆ, ಇನ್ನೊಂದು ಕಡೆ ಸೊಳ್ಳೆಗಳ ಕಾಟದಿಂದ ಹೈರಾಣಾಗಿರುವಂತಹ ಘಟನೆ ನಡೆದಿದೆ. 

1 / 6
ಜಿಲ್ಲಾ ಕೇಂದ್ರದಲ್ಲಿ ಆಸ್ಪತ್ರೆ ಇರುವ ಕಾರಣಕ್ಕೆ ನಿತ್ಯ ಜಿಲ್ಲೆಯ ಆರು ತಾಲೂಕುಗಳಿಂದ ನೂರಾರು ಜನರ ಹೆರಿಗಾಗಿ ಬರುತ್ತಾರೆ. ಇದೆ ಆಸ್ಪತ್ರೆಯಲ್ಲಿ ನಿತ್ಯ 50ಕ್ಕೂ ಅಧಿಕ ಹೆರಿಗೆಗಳನ್ನ ಮಾಡಲಾಗುತ್ತೆ. ಹೆರಿಗೆ ಮಾಡಿದ ಬಳಿಕ ಬಾಣಂತಿ ಹಾಗೂ ನವಜಾತ ಶಿಶುವಿಗೆ ವಾರ್ಡ್​​ಗಳಿಗೆ ಶಿಫ್ಟ್ ಮಾಡುತ್ತಾರೆ. ಆದರೆ ವಾರ್ಡ್​​ಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣಕ್ಕೆ ಬಾಣಂತಿ ಹಾಗೂ ಮಗು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲಾ ಕೇಂದ್ರದಲ್ಲಿ ಆಸ್ಪತ್ರೆ ಇರುವ ಕಾರಣಕ್ಕೆ ನಿತ್ಯ ಜಿಲ್ಲೆಯ ಆರು ತಾಲೂಕುಗಳಿಂದ ನೂರಾರು ಜನರ ಹೆರಿಗಾಗಿ ಬರುತ್ತಾರೆ. ಇದೆ ಆಸ್ಪತ್ರೆಯಲ್ಲಿ ನಿತ್ಯ 50ಕ್ಕೂ ಅಧಿಕ ಹೆರಿಗೆಗಳನ್ನ ಮಾಡಲಾಗುತ್ತೆ. ಹೆರಿಗೆ ಮಾಡಿದ ಬಳಿಕ ಬಾಣಂತಿ ಹಾಗೂ ನವಜಾತ ಶಿಶುವಿಗೆ ವಾರ್ಡ್​​ಗಳಿಗೆ ಶಿಫ್ಟ್ ಮಾಡುತ್ತಾರೆ. ಆದರೆ ವಾರ್ಡ್​​ಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣಕ್ಕೆ ಬಾಣಂತಿ ಹಾಗೂ ಮಗು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

2 / 6
ಪ್ರತಿಯೊಂದು ವಾರ್ಡ್​ನಲ್ಲಿ ನಾಲ್ಕು ಫ್ಯಾನ್​ಗಳ ವ್ಯವಸ್ಥೆ ಮಾಡಲಾಗಿದೆ. ಆದರೆ ಇದರಲ್ಲಿ ಬಹುತೇಕ ಫ್ಯಾನ್ ಗಳು ಹಾಳಾಗಿ ಹೋಗಿ ರಿಪೇರಿಗೆ ಬಂದಿವೆ. ರಿಪೇರಿ ಮಾಡಿ ವ್ಯವಸ್ಥೆ ಮಾಡಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಫ್ಯಾನ್ ಇಲ್ಲದ ಕಾರಣಕ್ಕೆ ಬಾಣಂತಿ ಮತ್ತು ನವಜಾತ ಶಿಶುಗಳಿಗೆ ನಿದ್ದೆ ಆಗ್ತಾಯಿಲ್ಲ. ಯಾಕೆಂದ್ರೆ ಬಿಸಿಲಿನಿಂದ ಉಂಟಾಗುವ ಧಗೆಯಿಂದ ವಿಪರೀತ ಬೆವರು ಹಾಗೂ ವಿಪರೀತವಾಗಿ ಕಚ್ಚುವ ಸೊಳ್ಳೆಗಳಿಂದ ಬಾಣಂತಿ ಅಷ್ಟೇ ಅಲ್ದೆ ಬಾಣಂತಿ ಹಿಂದೆ ಬರುವ ಕುಟುಂಬಸ್ಥರು ಸಹ ಪರದಾಡುವಂತಾಗಿದೆ.

ಪ್ರತಿಯೊಂದು ವಾರ್ಡ್​ನಲ್ಲಿ ನಾಲ್ಕು ಫ್ಯಾನ್​ಗಳ ವ್ಯವಸ್ಥೆ ಮಾಡಲಾಗಿದೆ. ಆದರೆ ಇದರಲ್ಲಿ ಬಹುತೇಕ ಫ್ಯಾನ್ ಗಳು ಹಾಳಾಗಿ ಹೋಗಿ ರಿಪೇರಿಗೆ ಬಂದಿವೆ. ರಿಪೇರಿ ಮಾಡಿ ವ್ಯವಸ್ಥೆ ಮಾಡಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಫ್ಯಾನ್ ಇಲ್ಲದ ಕಾರಣಕ್ಕೆ ಬಾಣಂತಿ ಮತ್ತು ನವಜಾತ ಶಿಶುಗಳಿಗೆ ನಿದ್ದೆ ಆಗ್ತಾಯಿಲ್ಲ. ಯಾಕೆಂದ್ರೆ ಬಿಸಿಲಿನಿಂದ ಉಂಟಾಗುವ ಧಗೆಯಿಂದ ವಿಪರೀತ ಬೆವರು ಹಾಗೂ ವಿಪರೀತವಾಗಿ ಕಚ್ಚುವ ಸೊಳ್ಳೆಗಳಿಂದ ಬಾಣಂತಿ ಅಷ್ಟೇ ಅಲ್ದೆ ಬಾಣಂತಿ ಹಿಂದೆ ಬರುವ ಕುಟುಂಬಸ್ಥರು ಸಹ ಪರದಾಡುವಂತಾಗಿದೆ.

3 / 6
ಅಧಿಕಾರಿಗಳು ಫ್ಯಾನ್​ಗಳನ್ನ ರಿಪೇರಿ ಮಾಡದ ಕಾರಣಕ್ಕೆ ದೂರದ ಊರಿನಿಂದ ಬಂದು ಹೆರಿಗೆ ಮಾಡಿಸಿಕೊಂಡವರು ಅಂಗಡಿಗಳಿಗೆ ಹೋಗಿ ಹೊಸ ಫ್ಯಾನ್​ಗಳನ್ನ ಖರೀದಿ ಮಾಡಿಕೊಂಡು ಬಂದಿದ್ದಾರೆ. ಒಂದು ಸಾವಿರದಿಂದ ಎರಡು ಸಾವಿರ ರೂ. ವರೆಗೆ ಹಣ ಖರ್ಚು ಮಾಡಿ ಹೊಸ ಫ್ಯಾನ್​ಗಳನ್ನ ತಂದು ಬಾಣಂತಿ ಹಾಗೂ ನವಜಾತ ಶಿಶುಗಳಿಗೆ ಗಾಳಿ ವ್ಯವಸ್ಥೆ ಮಾಡಿದ್ದಾರೆ.

ಅಧಿಕಾರಿಗಳು ಫ್ಯಾನ್​ಗಳನ್ನ ರಿಪೇರಿ ಮಾಡದ ಕಾರಣಕ್ಕೆ ದೂರದ ಊರಿನಿಂದ ಬಂದು ಹೆರಿಗೆ ಮಾಡಿಸಿಕೊಂಡವರು ಅಂಗಡಿಗಳಿಗೆ ಹೋಗಿ ಹೊಸ ಫ್ಯಾನ್​ಗಳನ್ನ ಖರೀದಿ ಮಾಡಿಕೊಂಡು ಬಂದಿದ್ದಾರೆ. ಒಂದು ಸಾವಿರದಿಂದ ಎರಡು ಸಾವಿರ ರೂ. ವರೆಗೆ ಹಣ ಖರ್ಚು ಮಾಡಿ ಹೊಸ ಫ್ಯಾನ್​ಗಳನ್ನ ತಂದು ಬಾಣಂತಿ ಹಾಗೂ ನವಜಾತ ಶಿಶುಗಳಿಗೆ ಗಾಳಿ ವ್ಯವಸ್ಥೆ ಮಾಡಿದ್ದಾರೆ.

4 / 6
ಬಡವರು ಹಾಗೂ ಆರ್ಥಿಕವಾಗಿ ದುರ್ಬಲರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಆದರೆ ಇಲ್ಲಿಗೆ ಬರಬೇಕು ಅಂದರೆ ದುಡ್ಡು ಸುರಿಯುವಂತಾಗಿದೆ. ಇನ್ನು ಸಮೀಪದಿಂದ ಬಂದವರಂತೂ ಮನೆಗಳಿಗೆ ಹೋಗಿ ಮನೆಯಲ್ಲಿರುವ ಟೇಬಲ್ ಫ್ಯಾನ್​​ಗಳನ್ನ ತಂದು ಗಾಳಿಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಕೇವಲ ಫ್ಯಾನ್ ಗಳು ಖರೀದಿ ಮಾಡಿಕೊಂಡು ಬರೋದು ಅಲ್ಲ, ಬಾಣಂತಿಯರಿಗೆ ಬಿಸಿ ನೀರು ಹಾಗೂ ಹಿಂದೆ ಬಂದವರು ನೀರು ಕುಡಿಯಬೇಕು ಅಂದ್ರೆ ಅಂಗಡಿಯಿಂದ ಬಾಟಲ್ ನೀರು ಖರೀದಿ ಮಾಡಿಕೊಂಡು ಕುಡಿಯುವಂತಾಗಿದೆ.

ಬಡವರು ಹಾಗೂ ಆರ್ಥಿಕವಾಗಿ ದುರ್ಬಲರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಆದರೆ ಇಲ್ಲಿಗೆ ಬರಬೇಕು ಅಂದರೆ ದುಡ್ಡು ಸುರಿಯುವಂತಾಗಿದೆ. ಇನ್ನು ಸಮೀಪದಿಂದ ಬಂದವರಂತೂ ಮನೆಗಳಿಗೆ ಹೋಗಿ ಮನೆಯಲ್ಲಿರುವ ಟೇಬಲ್ ಫ್ಯಾನ್​​ಗಳನ್ನ ತಂದು ಗಾಳಿಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಕೇವಲ ಫ್ಯಾನ್ ಗಳು ಖರೀದಿ ಮಾಡಿಕೊಂಡು ಬರೋದು ಅಲ್ಲ, ಬಾಣಂತಿಯರಿಗೆ ಬಿಸಿ ನೀರು ಹಾಗೂ ಹಿಂದೆ ಬಂದವರು ನೀರು ಕುಡಿಯಬೇಕು ಅಂದ್ರೆ ಅಂಗಡಿಯಿಂದ ಬಾಟಲ್ ನೀರು ಖರೀದಿ ಮಾಡಿಕೊಂಡು ಕುಡಿಯುವಂತಾಗಿದೆ.

5 / 6
ಯಾದಗಿರಿ ನಗರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳಿಗೆ ಸರಿಯಾದ ವ್ಯವಸ್ಥೆ ಇಲ್ಲದಂತಾಗಿದೆ. ಕನಿಷ್ಟ ಪಕ್ಷ ಕೆಟ್ಟು ಹೋಗಿರುವ ಫ್ಯಾನ್​ಗಳನ್ನ ರಿಪೇರಿ ಮಾಡುವ ಕೆಲಸವೂ ಅಧಿಕಾರಿಗಳು ಮಾಡ್ತಾಯಿಲ್ಲ. ಹೀಗಾಗಿ ವೈದ್ಯಾಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಯಾದಗಿರಿ ನಗರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳಿಗೆ ಸರಿಯಾದ ವ್ಯವಸ್ಥೆ ಇಲ್ಲದಂತಾಗಿದೆ. ಕನಿಷ್ಟ ಪಕ್ಷ ಕೆಟ್ಟು ಹೋಗಿರುವ ಫ್ಯಾನ್​ಗಳನ್ನ ರಿಪೇರಿ ಮಾಡುವ ಕೆಲಸವೂ ಅಧಿಕಾರಿಗಳು ಮಾಡ್ತಾಯಿಲ್ಲ. ಹೀಗಾಗಿ ವೈದ್ಯಾಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

6 / 6
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್