Shivaji Surathkal 2: ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ ಯದುವೀರ್ ಒಡೆಯರ್
‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ವೀಕ್ಷಿಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Updated on: May 25, 2023 | 12:54 PM
Share

ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಈಗ ಈ ಚಿತ್ರವನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ವೀಕ್ಷಿಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

‘ನನಗೆ ಪತ್ತೆದಾರಿ ಸಿನಿಮಾಗಳು ಬಹಳ ಇಷ್ಟ. ‘ಶಿವಾಜಿ ಸುರತ್ಕಲ್ 2’ ಚಿತ್ರ ತುಂಬಾ ಚೆನ್ನಾಗಿದೆ. ಈ ಚಿತ್ರದ ಮುಂದುವರಿದ ಭಾಗಗಳು ಇನ್ನು ಹೆಚ್ಚಾಗಿ ಬರಲಿ’ ಎಂದು ಯದುವೀರ್ ಒಡೆಯರ್ ಹಾರೈಸಿದ್ದಾರೆ.

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ‘ಶಿವಾಜಿ ಸುರತ್ಕಲ್ 2’ ಸಿನಿಮಾ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

‘ಶಿವಾಜಿ ಸುರತ್ಕಲ್ 2’ ಸಿನಿಮಾ ಚಿತ್ರಮಂದಿರಗಳಲ್ಲಿ 41 ದಿನಗಳನ್ನು ಪೂರೈಸಿದೆ. ಈ ಚಿತ್ರ ಈಗ 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ.
Related Photo Gallery
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’




