ಅಖಿಲ್ ಅಕ್ಕಿನೇನಿ ಆರತಕ್ಷತೆಯಲ್ಲಿ ಮಿಂಚಿದ ಯಶ್-ಸುದೀಪ್; ರಾಕಿಭಾಯ್ ಹೊಸ ಲುಕ್ ರಿವೀಲ್

Updated on: Jun 09, 2025 | 12:37 PM

ಟಾಲಿವುಡ್ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಅವರ ಕಿರಿಯ ಪುತ್ರ ಅಖಿಲ್ ಅಕ್ಕಿನೇನಿ ಅವರು ಜೂನ್ 6ರಂದು ಝೈನಾಬ್ ಜೊತೆ ವಿವಾಹ ಆದರು. ಇದರ ಆರತಕ್ಷತೆ ಜೂನ್ 8ರಂದು ನಡೆಯಿತು. ಇದಕ್ಕೆ ಹಲವು ಸೆಲೆಬ್ರಿಟಿಗಳು ಆಗಮಿಸಿದ್ದರು. ಅದರ ಫೋಟೋಗಳು ವೈರಲ್ ಆಗಿವೆ.

1 / 5
ಅಕ್ಕಿನೇನಿ ನಾಗಾರ್ಜುನ ಮಗ ಅಖಿಲ್ ವಿವಾಹಕ್ಕೆ ಯಶ್ ಅವರಿಗೆ ವಿಶೇಷ ಆಹ್ವಾನ ಇತ್ತು. ಅವರು ಮಿಸ್ ಮಾಡದೇ ಈ ವಿವಾಹಕ್ಕೆ ಆಗಮಿಸಿದರು. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಕ್ಕಿನೇನಿ ನಾಗಾರ್ಜುನ ಮಗ ಅಖಿಲ್ ವಿವಾಹಕ್ಕೆ ಯಶ್ ಅವರಿಗೆ ವಿಶೇಷ ಆಹ್ವಾನ ಇತ್ತು. ಅವರು ಮಿಸ್ ಮಾಡದೇ ಈ ವಿವಾಹಕ್ಕೆ ಆಗಮಿಸಿದರು. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 5
ಯಶ್ ಅವರ ಹೊಸ ಲುಕ್ ಗಮನ ಸೆಳೆದಿದೆ. ಅವರು ರಾಯಲ್ ಲುಕ್​ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರದ್ದು ಬೇರೆಯದೇ ರೀತಿಯ ಗತ್ತು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

ಯಶ್ ಅವರ ಹೊಸ ಲುಕ್ ಗಮನ ಸೆಳೆದಿದೆ. ಅವರು ರಾಯಲ್ ಲುಕ್​ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರದ್ದು ಬೇರೆಯದೇ ರೀತಿಯ ಗತ್ತು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

3 / 5
ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ಈ ರೀತಿಯ ವಿಶೇಷ ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾ ಇರುತ್ತಾರೆ. ಈ ಮೊದಲು ಯಡಿಯೂರಪ್ಪ ಅವರ ಮೊಮ್ಮೊಗನ ವಿವಾಹಕ್ಕೂ ತೆರಳಿದ್ದರು.

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ಈ ರೀತಿಯ ವಿಶೇಷ ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾ ಇರುತ್ತಾರೆ. ಈ ಮೊದಲು ಯಡಿಯೂರಪ್ಪ ಅವರ ಮೊಮ್ಮೊಗನ ವಿವಾಹಕ್ಕೂ ತೆರಳಿದ್ದರು.

4 / 5
ಇನ್ನು, ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಜೊತೆ ಈ ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಸುದೀಪ್ ಅವರು ಖಡಕ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಹೈದರಾಬಾದ್​ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಈ ಆರತಕ್ಷತೆ ನೆರವೇರಿದೆ.

ಇನ್ನು, ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಜೊತೆ ಈ ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಸುದೀಪ್ ಅವರು ಖಡಕ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಹೈದರಾಬಾದ್​ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಈ ಆರತಕ್ಷತೆ ನೆರವೇರಿದೆ.

5 / 5
ಟಾಲಿವುಡ್​ನ ಖ್ಯಾತ ನಾಮರು ಈ ರಿಸೆಪ್ಶನ್​ನಲ್ಲಿ ಭಾಗಿ ಆಗಿದ್ದರು. ರಾಮ್ ಚರಣ್, ಮಹೇಶ್ ಬಾಬು, ಸಿತಾರಾ ಸೇರಿ ಟಾಲಿವುಡ್​ನ ಅನೇಕ ದಿಗ್ಗಜರು ಈ ರಿಸೆಪ್ಷನ್​ನಲ್ಲಿ ಭಾಗಿ ಆಗಿ ನವ ಜೋಡಿಗಳಿಗೆ ಶುಭ ಹಾರೈಸಿದರು.

ಟಾಲಿವುಡ್​ನ ಖ್ಯಾತ ನಾಮರು ಈ ರಿಸೆಪ್ಶನ್​ನಲ್ಲಿ ಭಾಗಿ ಆಗಿದ್ದರು. ರಾಮ್ ಚರಣ್, ಮಹೇಶ್ ಬಾಬು, ಸಿತಾರಾ ಸೇರಿ ಟಾಲಿವುಡ್​ನ ಅನೇಕ ದಿಗ್ಗಜರು ಈ ರಿಸೆಪ್ಷನ್​ನಲ್ಲಿ ಭಾಗಿ ಆಗಿ ನವ ಜೋಡಿಗಳಿಗೆ ಶುಭ ಹಾರೈಸಿದರು.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us