AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2024: ಈ ವರ್ಷ ಹಿಟ್ ಆದ ಕನ್ನಡ ಸಿನಿಮಾಗಳಿವು

Year Ender 2024: 2022 ಮತ್ತು 2023 ಕನ್ನಡ ಚಿತ್ರರಂಗದ ಪಾಲಿಗೆ ಮಹತ್ವದ ವರ್ಷಗಳಾಗಿದ್ದವು. ಈ ಎರಡು ವರ್ಷಗಳಲ್ಲಿ ಕನ್ನಡ ಚಿತ್ರರಂಗ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಸದ್ದು ಮಾಡಿತು. 2023ರಲ್ಲಿ ‘ಕಾಂತಾರ’ ಸಿನಿಮಾದ ಭಾರಿ ಗೆಲುವಿನ ಬಲವಾಗಿ ಇಟ್ಟುಕೊಂಡು 2024ಕ್ಕೆ ಚಿತ್ರರಂಗ ಕಾಲಿಟ್ಟಿತು. ಆದರೆ ಈ ವರ್ಷದ ಆರಂಭದಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದು ಕೇವಲ ನಿರಾಸೆಯಷ್ಟೆ. ಮೊದಲ ಅರ್ಧ ವರ್ಷ ಕನ್ನಡ ಸಿನಿಮಾಗಳು ಯಶಸ್ಸಿನ ರುಚಿ ನೋಡಲಿಲ್ಲ. ಆದರೆ ವರ್ಷದ ದ್ವಿತೀಯಾರ್ಧದಲ್ಲಿ ಭರ್ಜರಿ ಯಶಸ್ಸು ದೊರೆತಿದೆ. ಈ ವರ್ಷ ಹಿಟ್ ಎನಿಸಿಕೊಂಡ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ.

ಮಂಜುನಾಥ ಸಿ.
|

Updated on: Dec 29, 2024 | 1:17 PM

Share
ಈ ವರ್ಷ ಕನ್ನಡ ಚಿತ್ರರಂಗಕ್ಕೆ ನಿಜಕ್ಕೂ ಒಂದು ಸ್ಪಷ್ಟ ಗೆಲುವು ತಂದುಕೊಟ್ಟ ಸಿನಿಮಾ ‘ಭೀಮ’. ದುನಿಯಾ ವಿಜಯ್ ನಟಿಸಿ, ನಿರ್ದೇಶನವನ್ನೂ ಮಾಡಿದ್ದ ‘ಭೀಮ’ ಸಿನಿಮಾ, ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಬಾಕ್ಸ್ ಆಫೀಸ್​ನಲ್ಲಿ ಗೆಲುವು ಕಂಡಿತು. ದುನಿಯಾ ವಿಜಯ್ ಎರಡನೇ ಬಾರಿ ನಿರ್ದೇಶಕರಾಗಿ ಗೆಲುವು ಕಂಡರು.

ಈ ವರ್ಷ ಕನ್ನಡ ಚಿತ್ರರಂಗಕ್ಕೆ ನಿಜಕ್ಕೂ ಒಂದು ಸ್ಪಷ್ಟ ಗೆಲುವು ತಂದುಕೊಟ್ಟ ಸಿನಿಮಾ ‘ಭೀಮ’. ದುನಿಯಾ ವಿಜಯ್ ನಟಿಸಿ, ನಿರ್ದೇಶನವನ್ನೂ ಮಾಡಿದ್ದ ‘ಭೀಮ’ ಸಿನಿಮಾ, ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಬಾಕ್ಸ್ ಆಫೀಸ್​ನಲ್ಲಿ ಗೆಲುವು ಕಂಡಿತು. ದುನಿಯಾ ವಿಜಯ್ ಎರಡನೇ ಬಾರಿ ನಿರ್ದೇಶಕರಾಗಿ ಗೆಲುವು ಕಂಡರು.

1 / 6
‘ಭೀಮ’ ಸಿನಿಮಾ ಬಿಡುಗಡೆ ಆದ ಒಂದೇ ವಾರದ ಅಂತರದಲ್ಲಿ ಬಿಡುಗಡೆ ಆದ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸಹ ದೊಡ್ಡ ಗೆಲುವು ಕಂಡಿತು. ಈ ಸಿನಿಮಾ ಶತದಿನ ಆಚರಿಸಿದ್ದು ವಿಶೇಷ. ಸುಂದರವಾದ ಹಾಡುಗಳು, ಸರಳವಾದ ಪ್ರೇಮಕತೆ, ಹಾಸ್ಯ ಎಲ್ಲವನ್ನೂ ಒಳಗೊಂಡಿದ್ದ ಈ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಯ್ತು.

‘ಭೀಮ’ ಸಿನಿಮಾ ಬಿಡುಗಡೆ ಆದ ಒಂದೇ ವಾರದ ಅಂತರದಲ್ಲಿ ಬಿಡುಗಡೆ ಆದ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸಹ ದೊಡ್ಡ ಗೆಲುವು ಕಂಡಿತು. ಈ ಸಿನಿಮಾ ಶತದಿನ ಆಚರಿಸಿದ್ದು ವಿಶೇಷ. ಸುಂದರವಾದ ಹಾಡುಗಳು, ಸರಳವಾದ ಪ್ರೇಮಕತೆ, ಹಾಸ್ಯ ಎಲ್ಲವನ್ನೂ ಒಳಗೊಂಡಿದ್ದ ಈ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಯ್ತು.

2 / 6
ಶ್ರೀಮುರಳಿ ನಟನೆಯ ಸಿನಿಮಾ ಒಂದು ಬಿಡುಗಡೆ ಆಗಿ ವರ್ಷಗಳಾಗಿದ್ದವು. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಆದ ‘ಬಘೀರ’ ಸಿನಿಮಾ ಒಳ್ಳೆಯ ಹಿಟ್ ಸಿನಿಮಾ ಎನಿಸಿಕೊಂಡಿತು. ಹೊಂಬಾಳೆ ನಿರ್ಮಾಣ ಮಾಡಿದ್ದ ಈ ಸಿನಿಮಾ ಸೂಪರ್ ಹೀರೋ ಕತೆ ಒಳಗೊಂಡಿತ್ತು. ರುಕ್ಮಿಣಿ ವಸಂತ್ ನಾಯಕಿಯಾಗಿದ್ದ ಈ ಸಿನಿಮಾ ಸಾಧಾರಣ ಗೆಲುವು ಕಂಡಿತು.

ಶ್ರೀಮುರಳಿ ನಟನೆಯ ಸಿನಿಮಾ ಒಂದು ಬಿಡುಗಡೆ ಆಗಿ ವರ್ಷಗಳಾಗಿದ್ದವು. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಆದ ‘ಬಘೀರ’ ಸಿನಿಮಾ ಒಳ್ಳೆಯ ಹಿಟ್ ಸಿನಿಮಾ ಎನಿಸಿಕೊಂಡಿತು. ಹೊಂಬಾಳೆ ನಿರ್ಮಾಣ ಮಾಡಿದ್ದ ಈ ಸಿನಿಮಾ ಸೂಪರ್ ಹೀರೋ ಕತೆ ಒಳಗೊಂಡಿತ್ತು. ರುಕ್ಮಿಣಿ ವಸಂತ್ ನಾಯಕಿಯಾಗಿದ್ದ ಈ ಸಿನಿಮಾ ಸಾಧಾರಣ ಗೆಲುವು ಕಂಡಿತು.

3 / 6
ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಿ ಉತ್ತಮ ಗೆಲುವು ಕಂಡಿತು. ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್ ಆಗಿದ್ದ ಈ ಸಿನಿಮಾವನ್ನು ಶಿವಣ್ಣ ಹೋಮ್ ಬ್ಯಾನರ್ ಮೂಲಕ ನಿರ್ಮಾಣ ಮಾಡಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್ ಅನ್ನೇ ಮಾಡಿದೆ.

ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಿ ಉತ್ತಮ ಗೆಲುವು ಕಂಡಿತು. ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್ ಆಗಿದ್ದ ಈ ಸಿನಿಮಾವನ್ನು ಶಿವಣ್ಣ ಹೋಮ್ ಬ್ಯಾನರ್ ಮೂಲಕ ನಿರ್ಮಾಣ ಮಾಡಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್ ಅನ್ನೇ ಮಾಡಿದೆ.

4 / 6
ಬಹಳ ವರ್ಷಗಳ ನಂತರ ಉಪೇಂದ್ರ ನಿರ್ದೇಶನ ಮಾಡಿ ನಟಿಸಿರುವ ‘ಯುಐ’ ಸಿನಿಮಾ ವಾರದ ಹಿಂದಷ್ಟೆ ಬಿಡುಗಡೆ ಆಗಿದ್ದು, ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆದ ಮೊದಲ ದಿನವೇ ಸುಮಾರು 7 ಕೋಟಿ ರೂಪಾಯಿ ಗಳಿಸಿತು. ಒಂದೇ ವಾರಕ್ಕೆ ಸಿನಿಮಾಕ್ಕೆ ಹಿಟ್ ಬೋರ್ಡ್ ಬಿದ್ದಿದೆ.

ಬಹಳ ವರ್ಷಗಳ ನಂತರ ಉಪೇಂದ್ರ ನಿರ್ದೇಶನ ಮಾಡಿ ನಟಿಸಿರುವ ‘ಯುಐ’ ಸಿನಿಮಾ ವಾರದ ಹಿಂದಷ್ಟೆ ಬಿಡುಗಡೆ ಆಗಿದ್ದು, ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆದ ಮೊದಲ ದಿನವೇ ಸುಮಾರು 7 ಕೋಟಿ ರೂಪಾಯಿ ಗಳಿಸಿತು. ಒಂದೇ ವಾರಕ್ಕೆ ಸಿನಿಮಾಕ್ಕೆ ಹಿಟ್ ಬೋರ್ಡ್ ಬಿದ್ದಿದೆ.

5 / 6
ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಿದೆ. ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನವಾದರೂ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ, ಮಾಡುತ್ತಿರುವ ಕಲೆಕ್ಷನ್ ನೋಡಿದರೆ ಸಿನಿಮಾ ಪಕ್ಕಾ ಬ್ಲಾಕ್ ಬಸ್ಟರ್ ಎನ್ನಲಾಗುತ್ತಿದೆ. ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಆದ ಕೇವಲ ನಾಲ್ಕು ದಿನದಲ್ಲಿ 22 ಕೋಟಿಗೂ ಹೆಚ್ಚು ಹಣ ಗಳಿಸಿದೆ.

ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಿದೆ. ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನವಾದರೂ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ, ಮಾಡುತ್ತಿರುವ ಕಲೆಕ್ಷನ್ ನೋಡಿದರೆ ಸಿನಿಮಾ ಪಕ್ಕಾ ಬ್ಲಾಕ್ ಬಸ್ಟರ್ ಎನ್ನಲಾಗುತ್ತಿದೆ. ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಆದ ಕೇವಲ ನಾಲ್ಕು ದಿನದಲ್ಲಿ 22 ಕೋಟಿಗೂ ಹೆಚ್ಚು ಹಣ ಗಳಿಸಿದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್