ಮೇಘಾ ಕಂಪನಿಯ ಮೆಗಾ ಸಾಧನೆ! ಎಂಜಿನಿಯರಿಂಗ್​ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೆ ಸಾಕ್ಷಿ ಲಡಾಖ್​ನ ಜೋಜಿಲಾ ಸುರಂಗ ಮಾರ್ಗ

Edited By: ಸಾಧು ಶ್ರೀನಾಥ್​

Updated on: Sep 28, 2021 | 2:11 PM

Zojila Tunnel Photos: ಹೈದರಾಬಾದ್​ ಮೂಲದ ಮೇಘಾ ಎಂಜಿನಿಯರಿಂಗ್ ಕಂಪನಿಯು (MEIL) ಮೆಗಾ ಸಾಧನೆ ನಿರ್ಮಾಣದತ್ತ ಹೆಜ್ಜೆ ಹಾಕಿದೆ! ಸಿವಿಲ್​ ಎಂಜಿನಿಯರಿಂಗ್​ ಕ್ಷೇತ್ರದಲ್ಲಿಅದ್ಭುತ ಸಾಧನೆಗೆ ಸಾಕ್ಷಿಯಾಗಲಿರುವ ಜೋಜಿಲಾ ಸುರಂಗ ಮಾರ್ಗ (Zojila tunnel) ನಿರ್ಮಾಣ ಕಾಮಗಾರಿಯನ್ನು ಮೇಘಾ ಎಂಜಿನಿಯರಿಂಗ್ ಸಂಸ್ಥೆಯು ಅನುಷ್ಠಾನಗೊಳಿಸಲಿದೆ.

1 / 14
ಲಡಾಖ್ನ ಕಾರ್ಗಿಲ್ ಜಿಲ್ಲೆಯಲ್ಲಿರುವ ಝೊಜಿಲಾ ಸುರಂಗ ಮಾರ್ಗ ಕಾಮಗಾರಿಯನ್ನು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಪರಿಶೀಲನೆ ಮಾಡಿದರು. ಈ ವೇಳೆ, MEIL ಮುಖ್ಯಸ್ಥ ಪಿ.ವಿ.ಕೃಷ್ಣಾರೆಡ್ಡಿ ಉಪಸ್ಥಿತರಿದ್ದರು.

ಲಡಾಖ್ನ ಕಾರ್ಗಿಲ್ ಜಿಲ್ಲೆಯಲ್ಲಿರುವ ಝೊಜಿಲಾ ಸುರಂಗ ಮಾರ್ಗ ಕಾಮಗಾರಿಯನ್ನು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಪರಿಶೀಲನೆ ಮಾಡಿದರು. ಈ ವೇಳೆ, MEIL ಮುಖ್ಯಸ್ಥ ಪಿ.ವಿ.ಕೃಷ್ಣಾರೆಡ್ಡಿ ಉಪಸ್ಥಿತರಿದ್ದರು.

2 / 14
ಆರಂಭಿಕ ಕಾರ್ಯಗಳು ಮುಗಿದ ನಂತರ ಈ ರಸ್ತೆಯ ಮಹತ್ವದ ಹಂತಕ್ಕೆ ಅಕ್ಟೋಬರ್ 2020ರಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದ್ದರು.

ಆರಂಭಿಕ ಕಾರ್ಯಗಳು ಮುಗಿದ ನಂತರ ಈ ರಸ್ತೆಯ ಮಹತ್ವದ ಹಂತಕ್ಕೆ ಅಕ್ಟೋಬರ್ 2020ರಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದ್ದರು.

3 / 14
ಹೈದರಾಬಾದ್ ಮೂಲದ ಮೇಘಾ ಎಂಜಿನಿಯಿಂಗ್ ಕಂಪನಿಯು ಸುರಂಗ ನಿರ್ಮಾಣವು ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ಎಂಜಿನಿಯರಿಂಗ್ ನಿರ್ಮಾಣವಾಗಲಿದೆ.

ಹೈದರಾಬಾದ್ ಮೂಲದ ಮೇಘಾ ಎಂಜಿನಿಯಿಂಗ್ ಕಂಪನಿಯು ಸುರಂಗ ನಿರ್ಮಾಣವು ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ಎಂಜಿನಿಯರಿಂಗ್ ನಿರ್ಮಾಣವಾಗಲಿದೆ.

4 / 14
ಏಷ್ಯಾದ ಅತ್ಯಂತ ಉದ್ದದ ಈ ಸುರಂಗ ಮಾರ್ಗವು ಶ್ರೀನಗರ ಕಣಿವೆ ಮತ್ತು ಲೇಹ್ ನಡುವೆ ಸರ್ವಋತು ಸಂಪರ್ಕ ಕಲ್ಪಿಸಲಿದೆ.

ಏಷ್ಯಾದ ಅತ್ಯಂತ ಉದ್ದದ ಈ ಸುರಂಗ ಮಾರ್ಗವು ಶ್ರೀನಗರ ಕಣಿವೆ ಮತ್ತು ಲೇಹ್ ನಡುವೆ ಸರ್ವಋತು ಸಂಪರ್ಕ ಕಲ್ಪಿಸಲಿದೆ.

5 / 14
ಶ್ರೀನಗರ, ದ್ರಾಸ್, ಕಾರ್ಗಿಲ್ ಮತ್ತು ಲೇಹ್ ಪ್ರದೇಶದಳಿಗೆ ಝೊಜಿಲಾ ಸುರಂಗವು ಸರ್ವಋತು ಸಂಪರ್ಕ ಕಲ್ಪಿಸುತ್ತದೆ.

ಶ್ರೀನಗರ, ದ್ರಾಸ್, ಕಾರ್ಗಿಲ್ ಮತ್ತು ಲೇಹ್ ಪ್ರದೇಶದಳಿಗೆ ಝೊಜಿಲಾ ಸುರಂಗವು ಸರ್ವಋತು ಸಂಪರ್ಕ ಕಲ್ಪಿಸುತ್ತದೆ.

6 / 14
ಚಳಿಗಾಲದಲ್ಲಿ ಭಾರೀ ಹಿಮಪಾತದ ಕಾರಣದಿಂದ ದೇಶದ ಇತರ ಪ್ರದೇಶಗಳ ಸಂಪರ್ಕ ಕಡಿದುಕೊಳ್ಳುವ ಈ ಪ್ರದೇಶಗಳಲ್ಲಿ ನಿರಂತರ ರಸ್ತೆ ಸಂಪರ್ಕದ ಸಾಧ್ಯತೆಯನ್ನು ಮುಕ್ತವಾಗಿರಿಸುತ್ತದೆ.

ಚಳಿಗಾಲದಲ್ಲಿ ಭಾರೀ ಹಿಮಪಾತದ ಕಾರಣದಿಂದ ದೇಶದ ಇತರ ಪ್ರದೇಶಗಳ ಸಂಪರ್ಕ ಕಡಿದುಕೊಳ್ಳುವ ಈ ಪ್ರದೇಶಗಳಲ್ಲಿ ನಿರಂತರ ರಸ್ತೆ ಸಂಪರ್ಕದ ಸಾಧ್ಯತೆಯನ್ನು ಮುಕ್ತವಾಗಿರಿಸುತ್ತದೆ.

7 / 14
6800 ಕೋಟಿ ವೆಚ್ಚದ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮೇ 2018ರಲ್ಲಿ ಶಿಲಾನ್ಯಾಸ ಮಾಡಿದ್ದರು.

6800 ಕೋಟಿ ವೆಚ್ಚದ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮೇ 2018ರಲ್ಲಿ ಶಿಲಾನ್ಯಾಸ ಮಾಡಿದ್ದರು.

8 / 14
ಸಮುದ್ರಮಟ್ಟದಿಂದ 11,578 ಅಡಿ ಎತ್ತರದಲ್ಲಿ ಈ ರಸ್ತೆಯನ್ನು ನಿರ್ಮಿಸುವುದು ದೊಡ್ಡ ಸವಾಲಾಗಿದೆ. ಮೇಘಾ ಎಂಜಿನಿಯರಿಂಗ್ ಸಂಸ್ಥೆಯು ಈ ರಸ್ತೆ ನಿರ್ಮಾಣದ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ.

ಸಮುದ್ರಮಟ್ಟದಿಂದ 11,578 ಅಡಿ ಎತ್ತರದಲ್ಲಿ ಈ ರಸ್ತೆಯನ್ನು ನಿರ್ಮಿಸುವುದು ದೊಡ್ಡ ಸವಾಲಾಗಿದೆ. ಮೇಘಾ ಎಂಜಿನಿಯರಿಂಗ್ ಸಂಸ್ಥೆಯು ಈ ರಸ್ತೆ ನಿರ್ಮಾಣದ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ.

9 / 14
ಕಾರ್ಗಿಲ್ ಮತ್ತು ಲಡಾಖ್ ಪ್ರದೇಶದ ಜನರು ಕಳೆದ 30 ವರ್ಷಗಳಿಂದಲೂ ಈ ರಸ್ತೆ ನಿರ್ಮಾಣವಾಗಬೇಕು ಎಂದು ಬೇಡಿಕೆಯಿಟ್ಟಿದ್ದರು.

ಕಾರ್ಗಿಲ್ ಮತ್ತು ಲಡಾಖ್ ಪ್ರದೇಶದ ಜನರು ಕಳೆದ 30 ವರ್ಷಗಳಿಂದಲೂ ಈ ರಸ್ತೆ ನಿರ್ಮಾಣವಾಗಬೇಕು ಎಂದು ಬೇಡಿಕೆಯಿಟ್ಟಿದ್ದರು.

10 / 14
ಗಿರಿ ಶಿಖರಗಳ ಮಾರ್ಗದಲ್ಲಿ ಸರಕು ಸಾಗಣೆಗೆ ಕೆಟ್ಟ ಹವಾಮಾನವು ದೊಡ್ಡ ಸವಾಲಾಗಿತ್ತು. ಹೀಗಾಗಿ ಸುರಂಗ ಮಾರ್ಗ ನಿರ್ಮಾಣವಾಗಬೇಕು ಎಂದು ಜನರು ಕೋರುತ್ತಿದ್ದರು.

ಗಿರಿ ಶಿಖರಗಳ ಮಾರ್ಗದಲ್ಲಿ ಸರಕು ಸಾಗಣೆಗೆ ಕೆಟ್ಟ ಹವಾಮಾನವು ದೊಡ್ಡ ಸವಾಲಾಗಿತ್ತು. ಹೀಗಾಗಿ ಸುರಂಗ ಮಾರ್ಗ ನಿರ್ಮಾಣವಾಗಬೇಕು ಎಂದು ಜನರು ಕೋರುತ್ತಿದ್ದರು.

11 / 14
2013ರ ಯುಪಿಎ ಆಡಳಿತದಲ್ಲಿಯೇ ಈ ರಸ್ತೆ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ನಾಲ್ಕು ಬಾರಿ ಟೆಂಡರ್ ಕರೆಯಲಾಗಿತ್ತು. ಕೊನೆಗೆ ಮೋದಿ ಅಧಿಕಾರ ಅವಧಿಯಲ್ಲಿ ಈ ಯೋಜನೆ ಅನುಷ್ಠಾನಗೊಂಡಿತು.

2013ರ ಯುಪಿಎ ಆಡಳಿತದಲ್ಲಿಯೇ ಈ ರಸ್ತೆ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ನಾಲ್ಕು ಬಾರಿ ಟೆಂಡರ್ ಕರೆಯಲಾಗಿತ್ತು. ಕೊನೆಗೆ ಮೋದಿ ಅಧಿಕಾರ ಅವಧಿಯಲ್ಲಿ ಈ ಯೋಜನೆ ಅನುಷ್ಠಾನಗೊಂಡಿತು.

12 / 14
ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮೇಘಾ ಎಂಜಿನಿಯರಿಂಗ್ ಸಂಸ್ಥೆಯು ಸಕಾಲದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸುವಲ್ಲಿ ಖ್ಯಾತಿ ಪಡೆದಿದೆ. ಕೇವಲ ನಾಲ್ಕು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಿದ ಹೊಸ ದಾಖಲೆ ಬರೆಯಲಿದೆ ಎಂದು ಹೇಳಿದ್ದರು.

ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮೇಘಾ ಎಂಜಿನಿಯರಿಂಗ್ ಸಂಸ್ಥೆಯು ಸಕಾಲದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸುವಲ್ಲಿ ಖ್ಯಾತಿ ಪಡೆದಿದೆ. ಕೇವಲ ನಾಲ್ಕು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಿದ ಹೊಸ ದಾಖಲೆ ಬರೆಯಲಿದೆ ಎಂದು ಹೇಳಿದ್ದರು.

13 / 14
ಸುರಂಗಕ್ಕಾಗಿ ಆರಂಭದಲ್ಲಿ ₹ 10,643 ಕೋಟಿ ವೆಚ್ಚವನ್ನು ಅಂದಾಜು ಮಾಡಲಾಗಿತ್ತು. ರಸ್ತೆ ಮತ್ತು ಸುರಂಗವನ್ನು ಪ್ರತ್ಯೇಕವಾಗಿ ನಿರ್ಮಿಸುವ ಮೂಲಕ ₹ 3,835 ಕೋಟಿ ಉಳಿತಾಯವಾಗಲಿದೆ ಎಂದು ಸರ್ಕಾರ ಅಂದಾಜಿಸಿದೆ.

ಸುರಂಗಕ್ಕಾಗಿ ಆರಂಭದಲ್ಲಿ ₹ 10,643 ಕೋಟಿ ವೆಚ್ಚವನ್ನು ಅಂದಾಜು ಮಾಡಲಾಗಿತ್ತು. ರಸ್ತೆ ಮತ್ತು ಸುರಂಗವನ್ನು ಪ್ರತ್ಯೇಕವಾಗಿ ನಿರ್ಮಿಸುವ ಮೂಲಕ ₹ 3,835 ಕೋಟಿ ಉಳಿತಾಯವಾಗಲಿದೆ ಎಂದು ಸರ್ಕಾರ ಅಂದಾಜಿಸಿದೆ.

14 / 14
ಈ ಅತ್ಯಾಧುನಿಕ ಸುರಂಗದಲ್ಲಿ ಸಿಸಿಟಿವಿ ಕ್ಯಾಮೆರಾ, ಅತಿ ಭಾರದ ವಾಹನಗಳನ್ನು ಗುರುತಿಸುವ ವ್ಯವಸ್ಥೆ, ಸ್ವಯಂಚಾಲಿತ ಬೆಂಕಿ ಗುರುತಿಸುವ ವ್ಯವಸ್ಥೆ, ಬೆಂಕಿಯ ಕರೆಗಂಟೆ ಸೇರಿದಂತೆ ಹಲವು ಸೌಕರ್ಯಗಳು ಈ ಸುರಂಗದಲ್ಲಿದೆ. ಈ ಸುರಂಗದಲ್ಲಿ ಸಂಚಾರಕ್ಕೆ ಗಂಟೆಗೆ 80 ಕಿಮೀ ವೇಗಮಿತಿ ವಿಧಿಸಲಾಗಿದೆ.

ಈ ಅತ್ಯಾಧುನಿಕ ಸುರಂಗದಲ್ಲಿ ಸಿಸಿಟಿವಿ ಕ್ಯಾಮೆರಾ, ಅತಿ ಭಾರದ ವಾಹನಗಳನ್ನು ಗುರುತಿಸುವ ವ್ಯವಸ್ಥೆ, ಸ್ವಯಂಚಾಲಿತ ಬೆಂಕಿ ಗುರುತಿಸುವ ವ್ಯವಸ್ಥೆ, ಬೆಂಕಿಯ ಕರೆಗಂಟೆ ಸೇರಿದಂತೆ ಹಲವು ಸೌಕರ್ಯಗಳು ಈ ಸುರಂಗದಲ್ಲಿದೆ. ಈ ಸುರಂಗದಲ್ಲಿ ಸಂಚಾರಕ್ಕೆ ಗಂಟೆಗೆ 80 ಕಿಮೀ ವೇಗಮಿತಿ ವಿಧಿಸಲಾಗಿದೆ.

Web contact

TV9 Kannada

Read More
Follow Us