AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಪೂರೈಕೆ: ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ

ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಆರಂಭವಾದ ಕಾಂಗ್ರೆಸ್​ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಬಂದು ಇದೀಗ 10 ವರ್ಷಗಳಾಗಿವೆ. ಈ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಟ್ವೀಟ್​ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಪೂರೈಕೆ: ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ
ಸಿಎಂ ಸಿದ್ಧರಾಮಯ್ಯ
Anil Kalkere
| Edited By: |

Updated on: Jul 10, 2023 | 4:31 PM

Share

ಬೆಂಗಳೂರು: ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಆರಂಭವಾದ ಕಾಂಗ್ರೆಸ್​ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ (Annabhagya Yojana) ಜಾರಿಗೆ ಬಂದು ಇದೀಗ 10 ವರ್ಷಗಳಾಗಿವೆ. ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್​ ಮಾಡಿದ್ದಾರೆ.

ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ.

ಇದನ್ನೂ ಓದಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ: ಸ್ಥಳಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್​ ಭೇಟಿ

ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ- ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ. ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು ಎಂದಿದ್ದಾರೆ.

ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ 170 ರೂ.

ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ.

ಇದನ್ನೂ ಓದಿ: ಹಣಕಾಸಿನ ವ್ಯವಹಾರವೇ ಆಗಿದ್ದರೂ ಮುನಿಗಳ ಹತ್ಯೆ ಏಕೆ ಆಯ್ತು: ಮಾಜಿ ಸಿಎಂ ಬೊಮ್ಮಾಯಿ ಪ್ರಶ್ನೆ

ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಟ್ವೀಟ್​ ಮಾಡಿದ್ದಾರೆ.

ಲೋಡಿಂಗ್ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

ಅನ್ನಭಾಗ್ಯ ಯೋಜನೆ ಹತ್ತು ವರ್ಷ ಪೂರೈಸಿದ ಹಿನ್ನೆಲೆ ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಲೋಡಿಂಗ್ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ ಮಾಡಲಾಯಿತು. ಆಹಾರ ಖಾತೆ ಸಚಿವ ಕೆ.ಹೆಚ್​.ಮುನಿಯಪ್ಪ ಸಮಾವೇಶ ಭೇಟಿ ನಿಡಿದ್ದು, ಸಚಿವರ ಮುಂದೆ ಕಾರ್ಮಿಕರು ತಮ್ಮ ಬೇಡಿಕೆಗಳನ್ನ ಹೇಳಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ