AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಈವರೆಗೆ ಎಷ್ಟು ಪಿಎಫ್​ಐ ಮುಖಂಡರ ಬಂಧನ? ಎಷ್ಟು ಕಚೇರಿಗೆ ಬೀಗ? ಅಂಕಿ-ಸಂಖ್ಯೆ ಕೊಟ್ಟ ಗೃಹ ಸಚಿವ

ಕರ್ನಾಟಕದಲ್ಲಿ ಈವರೆಗೆ ಎಷ್ಟು ಪಿಎಫ್​ಐ ಮುಖಂಡರನ್ನು ಬಂಧಿಸಲಾಗಿದೆ? ಎಷ್ಟು ಪಿಎಫ್​ಐ ಕಚೇರಿಗಳಿಗೆ ಬೀಗ ಹಾಕಲಾಗಿದೆ? ಎನ್ನುವ ಬಗ್ಗೆ ಗೃಹ ಸಚಿವರು ಅಧಿಕೃತ ಅಂಕಿ-ಸಂಖ್ಯೆ ನೀಡಿದ್ದಾರೆ.

ಕರ್ನಾಟಕದಲ್ಲಿ ಈವರೆಗೆ  ಎಷ್ಟು ಪಿಎಫ್​ಐ ಮುಖಂಡರ ಬಂಧನ? ಎಷ್ಟು ಕಚೇರಿಗೆ ಬೀಗ? ಅಂಕಿ-ಸಂಖ್ಯೆ ಕೊಟ್ಟ ಗೃಹ ಸಚಿವ
Araga Jnanendra
TV9 Web
| Edited By: |

Updated on:Sep 30, 2022 | 1:54 PM

Share

ತುಮಕೂರು: ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮುಂದಿನ ಐದು ವರ್ಷ ಪಿಎಫ್ಐ ಬ್ಯಾನ್ ಮಾಡಿ ಕೇಂದ್ರ ಗೃಹ ಸಚಿವಾಲಯ ಆದೇಶಿದೆ. ಈ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಪಿಎಫ್​ಐ ಮುಖಂಡರನ್ನು ಬಂಧಿಸಿ, ಕಚೇರಿಗಳಿಗೆ ಬೀಗ ಹಾಕಲಾಗಿದೆ.  ಹಾಗಾದ್ರೆ, ರಾಜ್ಯದಲ್ಲಿ ಇದುವರೆಗೆ ಎಷ್ಟು ಪಿಎಫ್​ಐ ನಾಯಕರನ್ನು ಅರೆಸ್ಟ್ ಮಾಡಲಾಗಿದೆ? ಎಷ್ಟು ಕಚೇರಿಗಳಿಗೆ ಪೊಲೀಸರು ಬೀಗ ಹಾಕಿದ್ದಾರೆ? ಎಂದು ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಅಧಿಕೃತ ಅಂಕಿ-ಅಂಶಗಳನ್ನ ನೀಡಿದ್ದಾರೆ.

ತುಮಕೂರಿನಲ್ಲಿ ಇಂದು(ಸೆಪ್ಟೆಂಬರ್.30) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಈವರೆಗೆ 110 ಪಿಎಫ್ ಐ ಮುಖಂಡರನ್ನ ಬಂಧಿಸಲಾಗಿದೆ. 42 ಕಡೆ ಪಿಎಫ್ ಐ ಕಚೇರಿಗಳಿಗೆ ಬೀಗ ಮುದ್ರೆ ಹಾಕಲಾಗಿದ್ದು, ಕಚೇರಿಗಳಲ್ಲಿ ಲ್ಯಾಪ್ ಟಾಪ್ ಸೇರಿದಂತೆ ಇತರೆ ವಸ್ತುಗಳನ್ನ ವಶ ಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ. ಅವರ(ಪಿಎಫ್​ಐ ಮುಖಂಡರ) ವೈಯಕ್ತಿಕ ಅಕೌಂಟ್ ಗಳ ಬಗ್ಗೆ ಇಡಿ ಮತ್ತು ಎನ್​ಐಎ ನೋಡುತ್ತಿದೆ. ಇಂದು ಬಂಟ್ವಾಳದಲ್ಲಿ ಪಿಎಫ್ಐ ಟ್ರೈನಿಂಗ್ ನೀಡುತ್ತಿದ್ದ ಕಟ್ಟಡವನ್ನ ಸೀಜ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಭಾರತ್ ಜೋಡೋ ಪಾದಯಾತ್ರೆ: ಬಂದೋಬಸ್ತ್​ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

ಇನ್ನು ಇದೇ ವೇಳೆ ಸಿದ್ದರಾಮಯ್ಯನವರು ಆರ್​ಎಸ್​ಎಸ್​ ಬ್ಯಾನ್​ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರಿಗೆ ಪಿಎಫ್ ಐ ಬ್ಯಾನ್ ಮಾಡಿದ್ದು ಇಷ್ಟೇ ಇಲ್ಲ, ಅವರಿಗೆ ದೇಶದ ಹಿತದೃಷ್ಟಿಗಿಂತ ವೋಟಿನ ಹಿತದೃಷ್ಟಿ ಮುಖ್ಯ. ಇದು ಚುನಾವಣೆ ವರ್ಷ ಆಗಿರೋದ್ರಿಂದ ಅವರ ವೋಟ್ ಬ್ಯಾಂಕಿಗೆ ಹಾನಿಯಾಗದೇ ರೀತಿಯಲ್ಲಿ ಮಾತನಾಡ್ತಾರೆ ಎಂದು ತಿರುಗೇಟು ನೀಡಿದರು.

ಆರ್ ಎಸ್ ಎಸ್ ಒಂದು ದೇಶಭಕ್ತ ಸಂಘಟನೆ. ಆರ್ ಎಸ್ ಎಸ್ ಸಂಘಟನೆಯನ್ನ ಇಡೀ ದೇಶದ ಜನ ಸ್ವೀಕಾರ ಮಾಡಿದ್ದಾರೆ. ದೇಶಕ್ಕೊಸ್ಕರ, ದೇಶಕ್ಕೆ ಪೂರಕವಾಗುವ ವ್ಯಕ್ತಿಗಳನ್ನ ಆರ್ ಎಸ್ ಎಸ್ ಪ್ರತಿದಿನ ಪ್ರತಿ ಶಾಖೆಗಳಲ್ಲಿ ಬೆಳೆಸುತ್ತಿದೆ.. ಪಿಎಫ್ ಐ ಮತ್ತು ಆರ್ ಎಸ್ ಎಸ್ ಗೆ ತಾಳೆ ಹಾಕುವುದು ಕೆಟ್ಟ ಮನಸ್ಥಿತಿಗೊಂದು ಉದಾಹರಣೆ. ಸಿದ್ದರಾಮಯ್ಯನವರ ಓಲೈಕೆ ರಾಜಕಾರಣದಿಂದಲೇ ಇಡೀ ದೇಶದಲ್ಲಿ ಕಾಂಗ್ರೆಸ್ ಮಣ್ಣುಪಾಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:39 pm, Fri, 30 September 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು