AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಈವರೆಗೆ ಎಷ್ಟು ಪಿಎಫ್​ಐ ಮುಖಂಡರ ಬಂಧನ? ಎಷ್ಟು ಕಚೇರಿಗೆ ಬೀಗ? ಅಂಕಿ-ಸಂಖ್ಯೆ ಕೊಟ್ಟ ಗೃಹ ಸಚಿವ

ಕರ್ನಾಟಕದಲ್ಲಿ ಈವರೆಗೆ ಎಷ್ಟು ಪಿಎಫ್​ಐ ಮುಖಂಡರನ್ನು ಬಂಧಿಸಲಾಗಿದೆ? ಎಷ್ಟು ಪಿಎಫ್​ಐ ಕಚೇರಿಗಳಿಗೆ ಬೀಗ ಹಾಕಲಾಗಿದೆ? ಎನ್ನುವ ಬಗ್ಗೆ ಗೃಹ ಸಚಿವರು ಅಧಿಕೃತ ಅಂಕಿ-ಸಂಖ್ಯೆ ನೀಡಿದ್ದಾರೆ.

ಕರ್ನಾಟಕದಲ್ಲಿ ಈವರೆಗೆ  ಎಷ್ಟು ಪಿಎಫ್​ಐ ಮುಖಂಡರ ಬಂಧನ? ಎಷ್ಟು ಕಚೇರಿಗೆ ಬೀಗ? ಅಂಕಿ-ಸಂಖ್ಯೆ ಕೊಟ್ಟ ಗೃಹ ಸಚಿವ
Araga Jnanendra
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 30, 2022 | 1:54 PM

ತುಮಕೂರು: ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮುಂದಿನ ಐದು ವರ್ಷ ಪಿಎಫ್ಐ ಬ್ಯಾನ್ ಮಾಡಿ ಕೇಂದ್ರ ಗೃಹ ಸಚಿವಾಲಯ ಆದೇಶಿದೆ. ಈ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಪಿಎಫ್​ಐ ಮುಖಂಡರನ್ನು ಬಂಧಿಸಿ, ಕಚೇರಿಗಳಿಗೆ ಬೀಗ ಹಾಕಲಾಗಿದೆ.  ಹಾಗಾದ್ರೆ, ರಾಜ್ಯದಲ್ಲಿ ಇದುವರೆಗೆ ಎಷ್ಟು ಪಿಎಫ್​ಐ ನಾಯಕರನ್ನು ಅರೆಸ್ಟ್ ಮಾಡಲಾಗಿದೆ? ಎಷ್ಟು ಕಚೇರಿಗಳಿಗೆ ಪೊಲೀಸರು ಬೀಗ ಹಾಕಿದ್ದಾರೆ? ಎಂದು ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಅಧಿಕೃತ ಅಂಕಿ-ಅಂಶಗಳನ್ನ ನೀಡಿದ್ದಾರೆ.

ತುಮಕೂರಿನಲ್ಲಿ ಇಂದು(ಸೆಪ್ಟೆಂಬರ್.30) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಈವರೆಗೆ 110 ಪಿಎಫ್ ಐ ಮುಖಂಡರನ್ನ ಬಂಧಿಸಲಾಗಿದೆ. 42 ಕಡೆ ಪಿಎಫ್ ಐ ಕಚೇರಿಗಳಿಗೆ ಬೀಗ ಮುದ್ರೆ ಹಾಕಲಾಗಿದ್ದು, ಕಚೇರಿಗಳಲ್ಲಿ ಲ್ಯಾಪ್ ಟಾಪ್ ಸೇರಿದಂತೆ ಇತರೆ ವಸ್ತುಗಳನ್ನ ವಶ ಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ. ಅವರ(ಪಿಎಫ್​ಐ ಮುಖಂಡರ) ವೈಯಕ್ತಿಕ ಅಕೌಂಟ್ ಗಳ ಬಗ್ಗೆ ಇಡಿ ಮತ್ತು ಎನ್​ಐಎ ನೋಡುತ್ತಿದೆ. ಇಂದು ಬಂಟ್ವಾಳದಲ್ಲಿ ಪಿಎಫ್ಐ ಟ್ರೈನಿಂಗ್ ನೀಡುತ್ತಿದ್ದ ಕಟ್ಟಡವನ್ನ ಸೀಜ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಭಾರತ್ ಜೋಡೋ ಪಾದಯಾತ್ರೆ: ಬಂದೋಬಸ್ತ್​ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

ಇನ್ನು ಇದೇ ವೇಳೆ ಸಿದ್ದರಾಮಯ್ಯನವರು ಆರ್​ಎಸ್​ಎಸ್​ ಬ್ಯಾನ್​ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರಿಗೆ ಪಿಎಫ್ ಐ ಬ್ಯಾನ್ ಮಾಡಿದ್ದು ಇಷ್ಟೇ ಇಲ್ಲ, ಅವರಿಗೆ ದೇಶದ ಹಿತದೃಷ್ಟಿಗಿಂತ ವೋಟಿನ ಹಿತದೃಷ್ಟಿ ಮುಖ್ಯ. ಇದು ಚುನಾವಣೆ ವರ್ಷ ಆಗಿರೋದ್ರಿಂದ ಅವರ ವೋಟ್ ಬ್ಯಾಂಕಿಗೆ ಹಾನಿಯಾಗದೇ ರೀತಿಯಲ್ಲಿ ಮಾತನಾಡ್ತಾರೆ ಎಂದು ತಿರುಗೇಟು ನೀಡಿದರು.

ಆರ್ ಎಸ್ ಎಸ್ ಒಂದು ದೇಶಭಕ್ತ ಸಂಘಟನೆ. ಆರ್ ಎಸ್ ಎಸ್ ಸಂಘಟನೆಯನ್ನ ಇಡೀ ದೇಶದ ಜನ ಸ್ವೀಕಾರ ಮಾಡಿದ್ದಾರೆ. ದೇಶಕ್ಕೊಸ್ಕರ, ದೇಶಕ್ಕೆ ಪೂರಕವಾಗುವ ವ್ಯಕ್ತಿಗಳನ್ನ ಆರ್ ಎಸ್ ಎಸ್ ಪ್ರತಿದಿನ ಪ್ರತಿ ಶಾಖೆಗಳಲ್ಲಿ ಬೆಳೆಸುತ್ತಿದೆ.. ಪಿಎಫ್ ಐ ಮತ್ತು ಆರ್ ಎಸ್ ಎಸ್ ಗೆ ತಾಳೆ ಹಾಕುವುದು ಕೆಟ್ಟ ಮನಸ್ಥಿತಿಗೊಂದು ಉದಾಹರಣೆ. ಸಿದ್ದರಾಮಯ್ಯನವರ ಓಲೈಕೆ ರಾಜಕಾರಣದಿಂದಲೇ ಇಡೀ ದೇಶದಲ್ಲಿ ಕಾಂಗ್ರೆಸ್ ಮಣ್ಣುಪಾಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:39 pm, Fri, 30 September 22

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ