AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಈವರೆಗೆ ಎಷ್ಟು ಪಿಎಫ್​ಐ ಮುಖಂಡರ ಬಂಧನ? ಎಷ್ಟು ಕಚೇರಿಗೆ ಬೀಗ? ಅಂಕಿ-ಸಂಖ್ಯೆ ಕೊಟ್ಟ ಗೃಹ ಸಚಿವ

ಕರ್ನಾಟಕದಲ್ಲಿ ಈವರೆಗೆ ಎಷ್ಟು ಪಿಎಫ್​ಐ ಮುಖಂಡರನ್ನು ಬಂಧಿಸಲಾಗಿದೆ? ಎಷ್ಟು ಪಿಎಫ್​ಐ ಕಚೇರಿಗಳಿಗೆ ಬೀಗ ಹಾಕಲಾಗಿದೆ? ಎನ್ನುವ ಬಗ್ಗೆ ಗೃಹ ಸಚಿವರು ಅಧಿಕೃತ ಅಂಕಿ-ಸಂಖ್ಯೆ ನೀಡಿದ್ದಾರೆ.

ಕರ್ನಾಟಕದಲ್ಲಿ ಈವರೆಗೆ  ಎಷ್ಟು ಪಿಎಫ್​ಐ ಮುಖಂಡರ ಬಂಧನ? ಎಷ್ಟು ಕಚೇರಿಗೆ ಬೀಗ? ಅಂಕಿ-ಸಂಖ್ಯೆ ಕೊಟ್ಟ ಗೃಹ ಸಚಿವ
Araga Jnanendra
TV9 Web
| Edited By: |

Updated on:Sep 30, 2022 | 1:54 PM

Share

ತುಮಕೂರು: ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮುಂದಿನ ಐದು ವರ್ಷ ಪಿಎಫ್ಐ ಬ್ಯಾನ್ ಮಾಡಿ ಕೇಂದ್ರ ಗೃಹ ಸಚಿವಾಲಯ ಆದೇಶಿದೆ. ಈ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಪಿಎಫ್​ಐ ಮುಖಂಡರನ್ನು ಬಂಧಿಸಿ, ಕಚೇರಿಗಳಿಗೆ ಬೀಗ ಹಾಕಲಾಗಿದೆ.  ಹಾಗಾದ್ರೆ, ರಾಜ್ಯದಲ್ಲಿ ಇದುವರೆಗೆ ಎಷ್ಟು ಪಿಎಫ್​ಐ ನಾಯಕರನ್ನು ಅರೆಸ್ಟ್ ಮಾಡಲಾಗಿದೆ? ಎಷ್ಟು ಕಚೇರಿಗಳಿಗೆ ಪೊಲೀಸರು ಬೀಗ ಹಾಕಿದ್ದಾರೆ? ಎಂದು ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಅಧಿಕೃತ ಅಂಕಿ-ಅಂಶಗಳನ್ನ ನೀಡಿದ್ದಾರೆ.

ತುಮಕೂರಿನಲ್ಲಿ ಇಂದು(ಸೆಪ್ಟೆಂಬರ್.30) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಈವರೆಗೆ 110 ಪಿಎಫ್ ಐ ಮುಖಂಡರನ್ನ ಬಂಧಿಸಲಾಗಿದೆ. 42 ಕಡೆ ಪಿಎಫ್ ಐ ಕಚೇರಿಗಳಿಗೆ ಬೀಗ ಮುದ್ರೆ ಹಾಕಲಾಗಿದ್ದು, ಕಚೇರಿಗಳಲ್ಲಿ ಲ್ಯಾಪ್ ಟಾಪ್ ಸೇರಿದಂತೆ ಇತರೆ ವಸ್ತುಗಳನ್ನ ವಶ ಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ. ಅವರ(ಪಿಎಫ್​ಐ ಮುಖಂಡರ) ವೈಯಕ್ತಿಕ ಅಕೌಂಟ್ ಗಳ ಬಗ್ಗೆ ಇಡಿ ಮತ್ತು ಎನ್​ಐಎ ನೋಡುತ್ತಿದೆ. ಇಂದು ಬಂಟ್ವಾಳದಲ್ಲಿ ಪಿಎಫ್ಐ ಟ್ರೈನಿಂಗ್ ನೀಡುತ್ತಿದ್ದ ಕಟ್ಟಡವನ್ನ ಸೀಜ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಭಾರತ್ ಜೋಡೋ ಪಾದಯಾತ್ರೆ: ಬಂದೋಬಸ್ತ್​ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

ಇನ್ನು ಇದೇ ವೇಳೆ ಸಿದ್ದರಾಮಯ್ಯನವರು ಆರ್​ಎಸ್​ಎಸ್​ ಬ್ಯಾನ್​ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರಿಗೆ ಪಿಎಫ್ ಐ ಬ್ಯಾನ್ ಮಾಡಿದ್ದು ಇಷ್ಟೇ ಇಲ್ಲ, ಅವರಿಗೆ ದೇಶದ ಹಿತದೃಷ್ಟಿಗಿಂತ ವೋಟಿನ ಹಿತದೃಷ್ಟಿ ಮುಖ್ಯ. ಇದು ಚುನಾವಣೆ ವರ್ಷ ಆಗಿರೋದ್ರಿಂದ ಅವರ ವೋಟ್ ಬ್ಯಾಂಕಿಗೆ ಹಾನಿಯಾಗದೇ ರೀತಿಯಲ್ಲಿ ಮಾತನಾಡ್ತಾರೆ ಎಂದು ತಿರುಗೇಟು ನೀಡಿದರು.

ಆರ್ ಎಸ್ ಎಸ್ ಒಂದು ದೇಶಭಕ್ತ ಸಂಘಟನೆ. ಆರ್ ಎಸ್ ಎಸ್ ಸಂಘಟನೆಯನ್ನ ಇಡೀ ದೇಶದ ಜನ ಸ್ವೀಕಾರ ಮಾಡಿದ್ದಾರೆ. ದೇಶಕ್ಕೊಸ್ಕರ, ದೇಶಕ್ಕೆ ಪೂರಕವಾಗುವ ವ್ಯಕ್ತಿಗಳನ್ನ ಆರ್ ಎಸ್ ಎಸ್ ಪ್ರತಿದಿನ ಪ್ರತಿ ಶಾಖೆಗಳಲ್ಲಿ ಬೆಳೆಸುತ್ತಿದೆ.. ಪಿಎಫ್ ಐ ಮತ್ತು ಆರ್ ಎಸ್ ಎಸ್ ಗೆ ತಾಳೆ ಹಾಕುವುದು ಕೆಟ್ಟ ಮನಸ್ಥಿತಿಗೊಂದು ಉದಾಹರಣೆ. ಸಿದ್ದರಾಮಯ್ಯನವರ ಓಲೈಕೆ ರಾಜಕಾರಣದಿಂದಲೇ ಇಡೀ ದೇಶದಲ್ಲಿ ಕಾಂಗ್ರೆಸ್ ಮಣ್ಣುಪಾಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:39 pm, Fri, 30 September 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!