AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಬಿಜೆಪಿಯಿಂದ 13-14 ಮಾಜಿ ಶಾಸಕರು ಕಾಂಗ್ರೆಸ್​ಗೆ ಬರುತ್ತಾರೆ: ವಿನಯ್​ ಕುಲಕರ್ಣಿ

ಕಾಂಗ್ರೆಸ್​-ಜೆಡಿಎಸ್​ ಸಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿದ್ದ 17 ಜನ ಶಾಸಕರು ಮತ್ತೆ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮಾತನಾಡಿ ಬಿಜೆಪಿಯಲ್ಲಿನ ಹಲವು ನಾಯಕರು ಬೇಜಾರಿನಲ್ಲಿ ಇರುವುದು ನಿಜ. 13 ರಿಂದ 14 ಬಿಜೆಪಿ ಮಾಜಿ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಹೇಳಿದರು.

ವಿಜಯಪುರ: ಬಿಜೆಪಿಯಿಂದ 13-14 ಮಾಜಿ ಶಾಸಕರು ಕಾಂಗ್ರೆಸ್​ಗೆ ಬರುತ್ತಾರೆ: ವಿನಯ್​ ಕುಲಕರ್ಣಿ
ಶಾಸಕ ವಿನಯ್​ ಕುಲಕರ್ಣಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 19, 2023 | 2:47 PM

Share

ವಿಜಯಪುರ: ಕಾಂಗ್ರೆಸ್​-ಜೆಡಿಎಸ್​ ಸಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿದ್ದ 17 ಜನ ಶಾಸಕರು ಮತ್ತೆ ಕಾಂಗ್ರೆಸ್ (Congress) ಸೇರಲಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ (Vinay Kulakarni) ಮಾತನಾಡಿ ಬಿಜೆಪಿಯಲ್ಲಿನ (BJP) ಹಲವು ನಾಯಕರು ಬೇಜಾರಿನಲ್ಲಿ ಇರುವುದು ನಿಜ. ಹಾಲಿ ಶಾಸಕರ ಜೊತೆಗೆ, ಕೆಲ ಮಾಜಿ ಶಾಸಕರು ಅಸಮಧಾನಗೊಂಡಿದ್ದಾರೆ. ಕಳೆದ ಬಾರಿ ಸೋತ ಬಿಜೆಪಿ ಅಭ್ಯರ್ಥಿಗಳು ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಸಾಕಷ್ಟು ಮಂದಿ ಬಿಜೆಪಿಯಿಂದ ಬರುವ ಸಂಭವಿದೆ. 13 ರಿಂದ 14 ಬಿಜೆಪಿ ಮಾಜಿ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ. ಹಾಲಿ ಶಾಸಕರ ಬಗ್ಗೆ ಮಾಹಿತಿ ನನಗೆ ಇಲ್ಲ ಎಂದು ಹೇಳಿದರು.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಮಾಡಿದ ಅವರು ಸೋತ ಮಾಜಿ ಶಾಸಕರು ನಮ್ಮ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಮೆಚ್ಚಿಕೊಂಡು ಹಲವರು ಬರುತ್ತಿದ್ದಾರೆ. ಕಾಂಗ್ರೆಸ್ ಸೇರಲು ತುದಿಗಾಲು ಮೇಲೆ ನಿಂತಿದ್ದಾರೆ. ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಾಂಗ್ರೆಸ್​ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು ನಾವೇನು ಅವರಿಗೆ ಎದುರಾಳಿ ಅಲ್ಲ, ಮುನೇನಕೊಪ್ಪ ಅವರಿಗೆ ರಾಜಕೀಯದಲ್ಲಿ ಅನುಭವ ಇದೆ. ಮುನೇನಕೊಪ್ಪ ಬಹಳಷ್ಟು ಅನುಭವಸ್ಥರು ಇದ್ದಾರೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​ನತ್ತ ಮುಖ ಮಾಡಿದ್ರಾ ಶಾಸಕ ಎಸ್​ಟಿ ಸೋಮಶೇಖರ್? ಕಟೀಲ್, ಸಿಟಿ ರವಿ ಮೇಲಿಂದ ಮೇಲೆ ಕಾಲ್

ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಇಳಿಸಲು ಡಿಕೆ ಶಿವಕುಮಾರ್​ ಕುತಂತ್ರ ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಸಿದ್ಧರಾಮಯ್ಯ ಅವರನ್ನು ಯಾರೂ ವೀಕ್ ಮಾಡಲು ಆಗಲ್ಲ. ಅವರು ವೀಕ್ ಆಗಲ್ಲ, ಸಿದ್ಧರಾಮಯ್ಯ ಅವರು ಗಟ್ಟಿ ಇದ್ದಾರೆ, ಗಟ್ಟಿಯಾಗೆ ಇರುತ್ತಾರೆ. ಡಿಕೆ ಶಿವಕುಮಾರ್​​ ಅವರು ಸಿದ್ಧರಾಮಯ್ಯ ಅವರನ್ನು ಇಳಿಸಲು ಯಾರ ಬಳಿಯೂ ಹೋಗಿಲ್ಲ. ಇದು ಸುಳ್ಳು ಹೇಳಿಕೆ ಎಂದು ಟಾಂಗ್ ಕೊಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More