Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ಶಾಸಕರಿಗೆ ಮಂತ್ರಿಗಿರಿ, ಸಂಭವನೀಯ ಸಚಿವರ ಪಟ್ಟಿ ಇಲ್ಲಿದೆ

ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ಸಂಭವನೀಯ ಸಚಿವರ ಪಟ್ಟಿ ಟಿವಿ9ಗೆ ಲಭ್ಯವಾಗಿದೆ.

18 ಶಾಸಕರಿಗೆ ಮಂತ್ರಿಗಿರಿ, ಸಂಭವನೀಯ ಸಚಿವರ ಪಟ್ಟಿ ಇಲ್ಲಿದೆ
ಕರ್ನಾಟಕ ಸಂಭವನೀಯ ಸಚಿವರ ಪಟ್ಟಿ
Follow us
Rakesh Nayak Manchi
|

Updated on: May 25, 2023 | 4:39 PM

ನವದೆಹಲಿ: ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕಾಂಂಗ್ರೆಸ್ ವಾರ್​ ರೂಮ್​ನಲ್ಲಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಜೊತೆ ಸಭೆ ನಡೆಸುತ್ತಿದ್ದಾರೆ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿ ಬಳಿಕ ಪಟ್ಟಿ ಫೈನಲ್​ ಆಗಮಿದೆ. ಇದಕ್ಕೂ ಮುನ್ನ ಟಿವಿ9ಗೆ ಸಂಭವನೀಯ ಸಚಿವರ ಪಟ್ಟಿ ಲಭ್ಯವಾಗಿದೆ. ಹಾಗಿದ್ದರೆ ಯಾರಿಗೆಲ್ಲ ಮಂತ್ರಿಗಿರಿ ಸಿಗುವ ಸಾಧ್ಯತೆ ಇದೆ? ಇಲ್ಲಿದೆ ಪಟ್ಟಿ:

ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್​, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಬಸವರಾಜ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಎಸ್​ಎಸ್​ ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ರಹೀಂ ಖಾನ್​, ಡಾ.ಅಜಯ್ ಸಿಂಗ್, ಸಿ.ಪುಟ್ಟರಂಗಶೆಟ್ಟಿ​, ಪಿ.ಎಂ.ನರೇಂದ್ರಸ್ವಾಮಿ, ಎಂ.ಸಿ.ಸುಧಾಕರ್​, ಡಿ.ಸುಧಾಕರ್, ಹೆಚ್.ಕೆ.ಪಾಟೀಲ್, ಎನ್.ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಅಥವಾ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದ್ದು, ನಾಳೆ ಅಥವಾ ನಾಡಿದ್ದು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ದಿಲ್ಲಿಯಲ್ಲಿ ಸಚಿವ ಸಂಪುಟ ಸರ್ಕಸ್‌: ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈನಲ್ ಸಭೆ!

ಮಲ್ಲಿಕಾರ್ಜುನ ಖರ್ಗೆ ಮೇಲೆ ನಿಂತಿದೆ ಸಂಭವನೀಯ ಸಚಿವರ ಪಟ್ಟಿಯ ಭವಿಷ್ಯ

ಸಂಭವನೀಯ ಸಚಿವರ ಪಟ್ಟಿಯ ಭವಿಷ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ನಿಂತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಂಭವನೀಯ ಸಚಿವರ ಪಟ್ಟಿ ಸಿದ್ಧಪಡಿಸಲಾಗಿದ್ದು, ನಂತರ ಈ ಪಟ್ಟಿ ಮಲ್ಲಿಕಾರ್ಜುನ ಖರ್ಗೆ ಅವರ ಕೈ ಸೇರಲಿದೆ. ಬಳಿಕ ಮೂರ್ನಾಲ್ಕು ಹೆಸರುಗಳು ಬದಲಾಗುವ ಸಾಧ್ಯತೆಯೂ ಇದೆ.

ಶರಣ ಪ್ರಕಾಶ್ ಪಾಟೀಲ್, ದಿನೇಶ್ ಗುಂಡೂರಾವ್, ಆರ್ ವಿ ದೇಶಪಾಂಡೆ, ಬಿಕೆ ಹರಿಪ್ರಸಾದ್ ಸಚಿವ ಸಂಪುಟಕ್ಕೆ ಸೇರ್ಪಡೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ನಿರ್ಧಾರ ಕೈಗೊಳ್ಳಲುವ ಸಾಧ್ಯತೆ ಇದೆ. ಇಂದು ಸಂಜೆ 5 ಗಂಟೆಗೆ ಸಿದ್ದರಾಮಯ್ಯ ಡಿಕೆಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ