AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರನ್ನು ಡಿಸಿಎಂ ಮಾಡುವ ಕೆಎನ್​ ರಾಜಣ್ಣ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿದೆ

ಮೂರು ಜನರನ್ನು ಉಪಮುಖ್ಯಮಂತ್ರಿ ಮಾಡುವ ವಿಚಾರವಾಗಿ ಮುಖ್ಯಮಂತ್ರಿಗಳೇ ಉತ್ತರ ಕೊಡುತ್ತಾರೆ. ಮುಖ್ಯಮಂತ್ರಿಗಳ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಅವರೇ ಉತ್ತರ ಕೊಡಬೇಕು. ಮೂರು ಉಪಮುಖ್ಯಮಂತ್ರಿ ಸ್ಥಾನಗಳ ಬಗ್ಗೆ ಅವರನ್ನೇ ಕೇಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್​ ಜಾರಿಕೊಂಡರು.

ಮೂವರನ್ನು ಡಿಸಿಎಂ ಮಾಡುವ ಕೆಎನ್​ ರಾಜಣ್ಣ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿದೆ
ಡಿಕೆ ಶಿವಕುಮಾರ್
Anil Kalkere
| Edited By: |

Updated on: Sep 18, 2023 | 1:50 PM

Share

ಬೆಂಗಳೂರು ಸೆ.18: ಲೋಕಸಭೆ ಚುನಾವಣೆ (Loksabha Election) ಸಂಬಂಧ ಎಸ್ಸಿ, ಅಲ್ಪಸಂಖ್ಯಾ ಮತ್ತು ವೀರಶೈವ ಲಿಂಗಾಯತ ಸಮುದಾಯಗಳ ಓರ್ವ ಮುಖಂಡನನ್ನು ಉಪಮುಖ್ಯಮಂತ್ರಿ (DCM) ಮಾಡಬೇಕೆಂಬ ಸಹಕಾರ ಸಚಿವ ಕೆ.ಎನ್​ ರಾಜಣ್ಣ (KN Rajanna) ಆಗ್ರಹ ಬಹಳ ಸಂತೋಷ ತಂದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಲ್ಲರ ಮನಸ್ಸಿಗೆ ಸಂತೋಷವಾಗಬೇಕು. ಮುಖ್ಯಮಂತ್ರಿಗಳೇ ಇದಕ್ಕೆ ಉತ್ತರ ಕೊಡುತ್ತಾರೆ. ಮುಖ್ಯಮಂತ್ರಿಗಳ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಅವರೇ ಉತ್ತರ ಕೊಡಬೇಕು. ಮೂರು ಉಪಮುಖ್ಯಮಂತ್ರಿ ಸ್ಥಾನಗಳ ಬಗ್ಗೆ ಅವರನ್ನೇ ಕೇಳಬೇಕು ಎಂದು ಜಾರಿಕೊಂಡರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮಾತನಾಡಿದ ಅವರು ಸಂಸತ್​ ಅಧಿವೇಶನದ ವೇಳೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಚಿಂತಿಸಲಾಗಿದೆ. ಪ್ರಧಾನಿ ಅವರ ಬಳಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಬೇಕು. ಆದರೆ ಪ್ರಧಾನಿ ಮೋದಿಯವರು ಇನ್ನೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಕಾವೇರಿ ನೀರಿನ ಬಗ್ಗೆ ನ್ಯಾಯಾಲಯಕ್ಕೆ ವಾಸ್ತವಾಂಶ ತಿಳಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ವೀರಶೈವ 3 ಸಮುದಾಯದವರನ್ನು ಡಿಸಿಎಂ ಮಾಡಿ: ಸಚಿವ ಕೆಎನ್ ರಾಜಣ್ಣ

ಬೆಂಗಳೂರಲ್ಲಿ ಈ ಹಿಂದಿನಿಂದಲೂ ಬಹಳ ಸಮಸ್ಯೆ ಬಹಳ ಇದೆ. ಸಮಸ್ಯೆ ಬಗ್ಗೆ ಯಾರನ್ನೂ ದೋಷಿಸಲ್ಲ. ಬೆಂಗಳೂರಿನ ಕಸದ ಸಮಸ್ಯೆಗೆ ಪರಿಹಾರ ಬೇಕಿದೆ. ಯಶವಂತಪುರ ಮಧ್ಯ ಭಾಗದಲ್ಲಿ ಈಗ ಕಸದ ಸಮಸ್ಯೆ ಹೆಚ್ಚಿದೆ. ಕೃಷ್ಣಬೈರೇಗೌಡ ಕ್ಷೇತ್ರ ಮಹದೇವಪುರದಲ್ಲೂ ಸಮಸ್ಯೆ ಇದೆ. ಅದಕ್ಕೆ ಪರಿಹಾರ ತರಲು ಹೈದರಾಬಾದ್​ನಲ್ಲಿರು ವೇಸ್ಟ್ ಮ್ಯಾನೇಜ್ಮೆಂಟ್ ನೋಡಲು ಹೋಗಿದ್ದೆ. ಕಸ ಸುಡುವವರೆಗೂ ಪರಿಹಾರ ಇಲ್ಲ ಎಂದು ಹೇಳಿದರು.

ಕಾಂಗ್ರೆಸ್​​ನಲ್ಲಿ ಒಳ ಬಣದ ಬಗ್ಗೆ ಮಾತನಾಡಿದ ಅವರು ಬಣ ನಿಮ್ಮ ಹತ್ತಿರ ಇರಬೇಕು. ನಮ್ಮ ಹತ್ತಿರ ಯಾವುದೇ ಬಣ ಇಲ್ಲ. ಯಾರಿಗೊ ತಲೆಕೆಟ್ಟಿರಬೇಕು. ಯಾವುದೇ ಬಣಕ್ಕೆ ಬೆಂಬಲ ನಾನು ಕೊಟ್ಟಿಲ್ಲ. ನಾನು ಬಣದ ರಾಜಕೀಯ ಮಾಡಲ್ಲ. ಹಾಗೇನಾದರೂ ಬಣ ಮಾಡುವುದಿದ್ದರೇ ಈ ಹಿಂದೆಯೇ ಮಾಡುತ್ತಿದ್ದೆ. ಎಸ್. ಎಂ. ಕೃಷ್ಣ, ಬಂಗಾರಪ್ಪ ಅವರ ಕಾಲದಲ್ಲೇ ಬಣ ಮಾಡುತ್ತಿದ್ದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್