AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದಿಂದ 3542 ಕೋಟಿ ರೂ ಪೂರಕ ಅಂದಾಜು ಮಂಡನೆ

ವಿಧಾನಸಭೆಯಲ್ಲಿ ಇಂದು ರಾಜ್ಯ ಸರ್ಕಾರದಿಂದ 3542 ಕೋಟಿ ರೂ.ಗಳ ಪೂರಕ ಅಂದಾಜುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸ್ಥಗಿತಗೊಂಡಿದ್ದ ಯೋಜನೆಗಳ ಮರು‌ ಜಾರಿಗೆ ಹೆಚ್ಚಿನ ಅನುದಾನ ಸಹ ನೀಡಲಾಗಿದೆ. 38 ವಾಹನಗಳ ಖರೀದಿಗೆ 7 ಕೋಟಿ 44 ಲಕ್ಷ ರೂ. ನೀಡಲಾಗಿದೆ.

ರಾಜ್ಯ ಸರ್ಕಾರದಿಂದ 3542 ಕೋಟಿ ರೂ ಪೂರಕ ಅಂದಾಜು ಮಂಡನೆ
ಸಿಎಂ ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: |

Updated on:Dec 11, 2023 | 10:35 PM

Share

ಬೆಂಗಳೂರು, ಡಿಸೆಂಬರ್​​ 11: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಿಂದ ಇಂದು ರಾಜ್ಯ ಸರ್ಕಾರದಿಂದ 3542 ಕೋಟಿ ರೂ.ಗಳ ಪೂರಕ ಅಂದಾಜು ಮಂಡನೆ ಮಾಡಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಸ್ಥಗಿತಗೊಂಡಿದ್ದ ಯೋಜನೆಗಳ ಮರು‌ ಜಾರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಕೃಷಿ ಭಾಗ್ಯ ಯೋಜನಗೆ 32 ಕೋಟಿ ರೂ. ಹಾಗೂ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗೆ 14 ಕೋಟಿ ರೂ. ಸಚಿವರು, ಶಾಸಕರು, ಸಭಾಧ್ಯಕ್ಷರು, ಉಪಸಭಾಪತಿ ವಾಹನ ಖರೀದಿಗೆ ಹೆಚ್ಚಿನ ಹಣ ಸೇರಿದಂತೆ ಒಟ್ಟು 38 ವಾಹನಗಳ ಖರೀದಿಗೆ 7 ಕೋಟಿ 44 ಲಕ್ಷ ರೂ.

ರಾಜ್ಯ ಸರ್ಕಾರದ 33 ಸಚಿವರಿಗೆ ವಾಹನಗಳ ಖರೀದಿ, ದೆಹಲಿ ಪ್ರತಿನಿಧಿ, ಸಿಎಂ ರಾಜಕೀಯ ಕಾರ್ಯದರ್ಶಿ, ಸಲಹೆಗಾರರಿಗೂ ಹೊಸ ವಾಹನ ಭಾಗ್ಯ ನೀಡಲಾಗಿದೆ. ಶಾಸಕರ ಕಾರು ಖರೀದಿಗೆ 4 ಕೋಟಿ ರೂ, ಸ್ಪೀಕರ್ ಕಾರು ಖರೀದಿಗೆ 39 ಲಕ್ಷ ರೂ.‌ ಉಪಸಭಾಪತಿ ಕಾರು ಖರೀದಿಗೆ 8 ಲಕ್ಷ ರೂ. ನೀಡಲಾಗಿದೆ.

ಇದನ್ನೂ ಓದಿ: ಕೊನೆಗೂ ಕರ್ನಾಟಕ ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ: ನುಡಿದಂತೆ ನಡೆದ ಸಿದ್ದರಾಮಯ್ಯ

ಹಿಮಾಚಲ ಪ್ರದೇಶ ಪ್ರವಾಹಕ್ಕೆ ಸಿಎಂ ಪರಿಹಾರ ನಿಧಿಗೆ 15 ಕೋಟಿ ರೂ. ಆರ್ಬಿಟ್ರೇಷನ್ ಪ್ರಕರಣಕ್ಕೆ 28 ಕೋಟಿ ರೂ. ಠೇವಣಿ ಇಡಲಾಗಿದೆ. ದಸರಾ ಸಿಎಂ ಕಪ್​ಗೆ 4 ಕೋಟಿ ರೂ, ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ 74 ಲಕ್ಷ ರೂ. ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರ ನೀಡಲು 7 ಕೋಟಿ 30 ಲಕ್ಷ ರೂ. ದಾವೋಸ್​ಗೆ ಸಿಎಂ ನೇತೃತ್ವದ ನಿಯೋಗದ ಪ್ರವಾಸಕ್ಕೆ 12 ಕೋಟಿ ರೂ.

ಇದನ್ನೂ ಓದಿ: 2023ನೇ ಸಾಲಿನ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರ, ಮುದ್ರಾಂಕ, ನೋಂದಣಿ ಶುಲ್ಕ ಹೆಚ್ಚಳ

ಕೈಗಾರಿಕಾ ಸಚಿವರ ನೇತೃತ್ವದ ಅಮೆರಿಕ ಪ್ರವಾಸಕ್ಕೆ 2 ಕೋಟಿ 25 ಲಕ್ಷ ರೂ. ಇನ್ವೆಸ್ಟ್ ಕರ್ನಾಟಕ ಫೋರಂ ಸಿಎಂಡಿಗೆ ಹೊಸ ಕಾರು ಖರೀದಿಗೆ 20 ಲಕ್ಷ ರೂ. ಮೈಸೂರು ದಸರಾಗೆ 8.50 ಕೋಟಿ ರೂ, ಕರ್ನಾಟಕ ಸಂಭ್ರಮ-50ಕ್ಕೆ 5 ಕೋಟಿ ರೂ. ಮತ್ತು 86ನೇ ಸಾಹಿತ್ಯ ಸಮ್ಮೇಳನದ ಬಾಕಿ ಬಿಲ್ ಪಾವತಿಗೆ 4.66 ಲಕ್ಷ ರೂ. ಪೂರಕ ಅಂದಾಜು ಮಂಡನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 pm, Mon, 11 December 23

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್