AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದಿಂದ 3542 ಕೋಟಿ ರೂ ಪೂರಕ ಅಂದಾಜು ಮಂಡನೆ

ವಿಧಾನಸಭೆಯಲ್ಲಿ ಇಂದು ರಾಜ್ಯ ಸರ್ಕಾರದಿಂದ 3542 ಕೋಟಿ ರೂ.ಗಳ ಪೂರಕ ಅಂದಾಜುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸ್ಥಗಿತಗೊಂಡಿದ್ದ ಯೋಜನೆಗಳ ಮರು‌ ಜಾರಿಗೆ ಹೆಚ್ಚಿನ ಅನುದಾನ ಸಹ ನೀಡಲಾಗಿದೆ. 38 ವಾಹನಗಳ ಖರೀದಿಗೆ 7 ಕೋಟಿ 44 ಲಕ್ಷ ರೂ. ನೀಡಲಾಗಿದೆ.

ರಾಜ್ಯ ಸರ್ಕಾರದಿಂದ 3542 ಕೋಟಿ ರೂ ಪೂರಕ ಅಂದಾಜು ಮಂಡನೆ
ಸಿಎಂ ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: |

Updated on:Dec 11, 2023 | 10:35 PM

Share

ಬೆಂಗಳೂರು, ಡಿಸೆಂಬರ್​​ 11: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಿಂದ ಇಂದು ರಾಜ್ಯ ಸರ್ಕಾರದಿಂದ 3542 ಕೋಟಿ ರೂ.ಗಳ ಪೂರಕ ಅಂದಾಜು ಮಂಡನೆ ಮಾಡಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಸ್ಥಗಿತಗೊಂಡಿದ್ದ ಯೋಜನೆಗಳ ಮರು‌ ಜಾರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಕೃಷಿ ಭಾಗ್ಯ ಯೋಜನಗೆ 32 ಕೋಟಿ ರೂ. ಹಾಗೂ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗೆ 14 ಕೋಟಿ ರೂ. ಸಚಿವರು, ಶಾಸಕರು, ಸಭಾಧ್ಯಕ್ಷರು, ಉಪಸಭಾಪತಿ ವಾಹನ ಖರೀದಿಗೆ ಹೆಚ್ಚಿನ ಹಣ ಸೇರಿದಂತೆ ಒಟ್ಟು 38 ವಾಹನಗಳ ಖರೀದಿಗೆ 7 ಕೋಟಿ 44 ಲಕ್ಷ ರೂ.

ರಾಜ್ಯ ಸರ್ಕಾರದ 33 ಸಚಿವರಿಗೆ ವಾಹನಗಳ ಖರೀದಿ, ದೆಹಲಿ ಪ್ರತಿನಿಧಿ, ಸಿಎಂ ರಾಜಕೀಯ ಕಾರ್ಯದರ್ಶಿ, ಸಲಹೆಗಾರರಿಗೂ ಹೊಸ ವಾಹನ ಭಾಗ್ಯ ನೀಡಲಾಗಿದೆ. ಶಾಸಕರ ಕಾರು ಖರೀದಿಗೆ 4 ಕೋಟಿ ರೂ, ಸ್ಪೀಕರ್ ಕಾರು ಖರೀದಿಗೆ 39 ಲಕ್ಷ ರೂ.‌ ಉಪಸಭಾಪತಿ ಕಾರು ಖರೀದಿಗೆ 8 ಲಕ್ಷ ರೂ. ನೀಡಲಾಗಿದೆ.

ಇದನ್ನೂ ಓದಿ: ಕೊನೆಗೂ ಕರ್ನಾಟಕ ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ: ನುಡಿದಂತೆ ನಡೆದ ಸಿದ್ದರಾಮಯ್ಯ

ಹಿಮಾಚಲ ಪ್ರದೇಶ ಪ್ರವಾಹಕ್ಕೆ ಸಿಎಂ ಪರಿಹಾರ ನಿಧಿಗೆ 15 ಕೋಟಿ ರೂ. ಆರ್ಬಿಟ್ರೇಷನ್ ಪ್ರಕರಣಕ್ಕೆ 28 ಕೋಟಿ ರೂ. ಠೇವಣಿ ಇಡಲಾಗಿದೆ. ದಸರಾ ಸಿಎಂ ಕಪ್​ಗೆ 4 ಕೋಟಿ ರೂ, ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ 74 ಲಕ್ಷ ರೂ. ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರ ನೀಡಲು 7 ಕೋಟಿ 30 ಲಕ್ಷ ರೂ. ದಾವೋಸ್​ಗೆ ಸಿಎಂ ನೇತೃತ್ವದ ನಿಯೋಗದ ಪ್ರವಾಸಕ್ಕೆ 12 ಕೋಟಿ ರೂ.

ಇದನ್ನೂ ಓದಿ: 2023ನೇ ಸಾಲಿನ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರ, ಮುದ್ರಾಂಕ, ನೋಂದಣಿ ಶುಲ್ಕ ಹೆಚ್ಚಳ

ಕೈಗಾರಿಕಾ ಸಚಿವರ ನೇತೃತ್ವದ ಅಮೆರಿಕ ಪ್ರವಾಸಕ್ಕೆ 2 ಕೋಟಿ 25 ಲಕ್ಷ ರೂ. ಇನ್ವೆಸ್ಟ್ ಕರ್ನಾಟಕ ಫೋರಂ ಸಿಎಂಡಿಗೆ ಹೊಸ ಕಾರು ಖರೀದಿಗೆ 20 ಲಕ್ಷ ರೂ. ಮೈಸೂರು ದಸರಾಗೆ 8.50 ಕೋಟಿ ರೂ, ಕರ್ನಾಟಕ ಸಂಭ್ರಮ-50ಕ್ಕೆ 5 ಕೋಟಿ ರೂ. ಮತ್ತು 86ನೇ ಸಾಹಿತ್ಯ ಸಮ್ಮೇಳನದ ಬಾಕಿ ಬಿಲ್ ಪಾವತಿಗೆ 4.66 ಲಕ್ಷ ರೂ. ಪೂರಕ ಅಂದಾಜು ಮಂಡನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 pm, Mon, 11 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ