AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದಿಂದ 3542 ಕೋಟಿ ರೂ ಪೂರಕ ಅಂದಾಜು ಮಂಡನೆ

ವಿಧಾನಸಭೆಯಲ್ಲಿ ಇಂದು ರಾಜ್ಯ ಸರ್ಕಾರದಿಂದ 3542 ಕೋಟಿ ರೂ.ಗಳ ಪೂರಕ ಅಂದಾಜುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸ್ಥಗಿತಗೊಂಡಿದ್ದ ಯೋಜನೆಗಳ ಮರು‌ ಜಾರಿಗೆ ಹೆಚ್ಚಿನ ಅನುದಾನ ಸಹ ನೀಡಲಾಗಿದೆ. 38 ವಾಹನಗಳ ಖರೀದಿಗೆ 7 ಕೋಟಿ 44 ಲಕ್ಷ ರೂ. ನೀಡಲಾಗಿದೆ.

ರಾಜ್ಯ ಸರ್ಕಾರದಿಂದ 3542 ಕೋಟಿ ರೂ ಪೂರಕ ಅಂದಾಜು ಮಂಡನೆ
ಸಿಎಂ ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: |

Updated on:Dec 11, 2023 | 10:35 PM

Share

ಬೆಂಗಳೂರು, ಡಿಸೆಂಬರ್​​ 11: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಿಂದ ಇಂದು ರಾಜ್ಯ ಸರ್ಕಾರದಿಂದ 3542 ಕೋಟಿ ರೂ.ಗಳ ಪೂರಕ ಅಂದಾಜು ಮಂಡನೆ ಮಾಡಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಸ್ಥಗಿತಗೊಂಡಿದ್ದ ಯೋಜನೆಗಳ ಮರು‌ ಜಾರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಕೃಷಿ ಭಾಗ್ಯ ಯೋಜನಗೆ 32 ಕೋಟಿ ರೂ. ಹಾಗೂ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗೆ 14 ಕೋಟಿ ರೂ. ಸಚಿವರು, ಶಾಸಕರು, ಸಭಾಧ್ಯಕ್ಷರು, ಉಪಸಭಾಪತಿ ವಾಹನ ಖರೀದಿಗೆ ಹೆಚ್ಚಿನ ಹಣ ಸೇರಿದಂತೆ ಒಟ್ಟು 38 ವಾಹನಗಳ ಖರೀದಿಗೆ 7 ಕೋಟಿ 44 ಲಕ್ಷ ರೂ.

ರಾಜ್ಯ ಸರ್ಕಾರದ 33 ಸಚಿವರಿಗೆ ವಾಹನಗಳ ಖರೀದಿ, ದೆಹಲಿ ಪ್ರತಿನಿಧಿ, ಸಿಎಂ ರಾಜಕೀಯ ಕಾರ್ಯದರ್ಶಿ, ಸಲಹೆಗಾರರಿಗೂ ಹೊಸ ವಾಹನ ಭಾಗ್ಯ ನೀಡಲಾಗಿದೆ. ಶಾಸಕರ ಕಾರು ಖರೀದಿಗೆ 4 ಕೋಟಿ ರೂ, ಸ್ಪೀಕರ್ ಕಾರು ಖರೀದಿಗೆ 39 ಲಕ್ಷ ರೂ.‌ ಉಪಸಭಾಪತಿ ಕಾರು ಖರೀದಿಗೆ 8 ಲಕ್ಷ ರೂ. ನೀಡಲಾಗಿದೆ.

ಇದನ್ನೂ ಓದಿ: ಕೊನೆಗೂ ಕರ್ನಾಟಕ ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ: ನುಡಿದಂತೆ ನಡೆದ ಸಿದ್ದರಾಮಯ್ಯ

ಹಿಮಾಚಲ ಪ್ರದೇಶ ಪ್ರವಾಹಕ್ಕೆ ಸಿಎಂ ಪರಿಹಾರ ನಿಧಿಗೆ 15 ಕೋಟಿ ರೂ. ಆರ್ಬಿಟ್ರೇಷನ್ ಪ್ರಕರಣಕ್ಕೆ 28 ಕೋಟಿ ರೂ. ಠೇವಣಿ ಇಡಲಾಗಿದೆ. ದಸರಾ ಸಿಎಂ ಕಪ್​ಗೆ 4 ಕೋಟಿ ರೂ, ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ 74 ಲಕ್ಷ ರೂ. ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರ ನೀಡಲು 7 ಕೋಟಿ 30 ಲಕ್ಷ ರೂ. ದಾವೋಸ್​ಗೆ ಸಿಎಂ ನೇತೃತ್ವದ ನಿಯೋಗದ ಪ್ರವಾಸಕ್ಕೆ 12 ಕೋಟಿ ರೂ.

ಇದನ್ನೂ ಓದಿ: 2023ನೇ ಸಾಲಿನ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರ, ಮುದ್ರಾಂಕ, ನೋಂದಣಿ ಶುಲ್ಕ ಹೆಚ್ಚಳ

ಕೈಗಾರಿಕಾ ಸಚಿವರ ನೇತೃತ್ವದ ಅಮೆರಿಕ ಪ್ರವಾಸಕ್ಕೆ 2 ಕೋಟಿ 25 ಲಕ್ಷ ರೂ. ಇನ್ವೆಸ್ಟ್ ಕರ್ನಾಟಕ ಫೋರಂ ಸಿಎಂಡಿಗೆ ಹೊಸ ಕಾರು ಖರೀದಿಗೆ 20 ಲಕ್ಷ ರೂ. ಮೈಸೂರು ದಸರಾಗೆ 8.50 ಕೋಟಿ ರೂ, ಕರ್ನಾಟಕ ಸಂಭ್ರಮ-50ಕ್ಕೆ 5 ಕೋಟಿ ರೂ. ಮತ್ತು 86ನೇ ಸಾಹಿತ್ಯ ಸಮ್ಮೇಳನದ ಬಾಕಿ ಬಿಲ್ ಪಾವತಿಗೆ 4.66 ಲಕ್ಷ ರೂ. ಪೂರಕ ಅಂದಾಜು ಮಂಡನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 pm, Mon, 11 December 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್