AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದಿಂದ 3542 ಕೋಟಿ ರೂ ಪೂರಕ ಅಂದಾಜು ಮಂಡನೆ

ವಿಧಾನಸಭೆಯಲ್ಲಿ ಇಂದು ರಾಜ್ಯ ಸರ್ಕಾರದಿಂದ 3542 ಕೋಟಿ ರೂ.ಗಳ ಪೂರಕ ಅಂದಾಜುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸ್ಥಗಿತಗೊಂಡಿದ್ದ ಯೋಜನೆಗಳ ಮರು‌ ಜಾರಿಗೆ ಹೆಚ್ಚಿನ ಅನುದಾನ ಸಹ ನೀಡಲಾಗಿದೆ. 38 ವಾಹನಗಳ ಖರೀದಿಗೆ 7 ಕೋಟಿ 44 ಲಕ್ಷ ರೂ. ನೀಡಲಾಗಿದೆ.

ರಾಜ್ಯ ಸರ್ಕಾರದಿಂದ 3542 ಕೋಟಿ ರೂ ಪೂರಕ ಅಂದಾಜು ಮಂಡನೆ
ಸಿಎಂ ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: |

Updated on:Dec 11, 2023 | 10:35 PM

Share

ಬೆಂಗಳೂರು, ಡಿಸೆಂಬರ್​​ 11: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಿಂದ ಇಂದು ರಾಜ್ಯ ಸರ್ಕಾರದಿಂದ 3542 ಕೋಟಿ ರೂ.ಗಳ ಪೂರಕ ಅಂದಾಜು ಮಂಡನೆ ಮಾಡಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಸ್ಥಗಿತಗೊಂಡಿದ್ದ ಯೋಜನೆಗಳ ಮರು‌ ಜಾರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಕೃಷಿ ಭಾಗ್ಯ ಯೋಜನಗೆ 32 ಕೋಟಿ ರೂ. ಹಾಗೂ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗೆ 14 ಕೋಟಿ ರೂ. ಸಚಿವರು, ಶಾಸಕರು, ಸಭಾಧ್ಯಕ್ಷರು, ಉಪಸಭಾಪತಿ ವಾಹನ ಖರೀದಿಗೆ ಹೆಚ್ಚಿನ ಹಣ ಸೇರಿದಂತೆ ಒಟ್ಟು 38 ವಾಹನಗಳ ಖರೀದಿಗೆ 7 ಕೋಟಿ 44 ಲಕ್ಷ ರೂ.

ರಾಜ್ಯ ಸರ್ಕಾರದ 33 ಸಚಿವರಿಗೆ ವಾಹನಗಳ ಖರೀದಿ, ದೆಹಲಿ ಪ್ರತಿನಿಧಿ, ಸಿಎಂ ರಾಜಕೀಯ ಕಾರ್ಯದರ್ಶಿ, ಸಲಹೆಗಾರರಿಗೂ ಹೊಸ ವಾಹನ ಭಾಗ್ಯ ನೀಡಲಾಗಿದೆ. ಶಾಸಕರ ಕಾರು ಖರೀದಿಗೆ 4 ಕೋಟಿ ರೂ, ಸ್ಪೀಕರ್ ಕಾರು ಖರೀದಿಗೆ 39 ಲಕ್ಷ ರೂ.‌ ಉಪಸಭಾಪತಿ ಕಾರು ಖರೀದಿಗೆ 8 ಲಕ್ಷ ರೂ. ನೀಡಲಾಗಿದೆ.

ಇದನ್ನೂ ಓದಿ: ಕೊನೆಗೂ ಕರ್ನಾಟಕ ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ: ನುಡಿದಂತೆ ನಡೆದ ಸಿದ್ದರಾಮಯ್ಯ

ಹಿಮಾಚಲ ಪ್ರದೇಶ ಪ್ರವಾಹಕ್ಕೆ ಸಿಎಂ ಪರಿಹಾರ ನಿಧಿಗೆ 15 ಕೋಟಿ ರೂ. ಆರ್ಬಿಟ್ರೇಷನ್ ಪ್ರಕರಣಕ್ಕೆ 28 ಕೋಟಿ ರೂ. ಠೇವಣಿ ಇಡಲಾಗಿದೆ. ದಸರಾ ಸಿಎಂ ಕಪ್​ಗೆ 4 ಕೋಟಿ ರೂ, ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ 74 ಲಕ್ಷ ರೂ. ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರ ನೀಡಲು 7 ಕೋಟಿ 30 ಲಕ್ಷ ರೂ. ದಾವೋಸ್​ಗೆ ಸಿಎಂ ನೇತೃತ್ವದ ನಿಯೋಗದ ಪ್ರವಾಸಕ್ಕೆ 12 ಕೋಟಿ ರೂ.

ಇದನ್ನೂ ಓದಿ: 2023ನೇ ಸಾಲಿನ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರ, ಮುದ್ರಾಂಕ, ನೋಂದಣಿ ಶುಲ್ಕ ಹೆಚ್ಚಳ

ಕೈಗಾರಿಕಾ ಸಚಿವರ ನೇತೃತ್ವದ ಅಮೆರಿಕ ಪ್ರವಾಸಕ್ಕೆ 2 ಕೋಟಿ 25 ಲಕ್ಷ ರೂ. ಇನ್ವೆಸ್ಟ್ ಕರ್ನಾಟಕ ಫೋರಂ ಸಿಎಂಡಿಗೆ ಹೊಸ ಕಾರು ಖರೀದಿಗೆ 20 ಲಕ್ಷ ರೂ. ಮೈಸೂರು ದಸರಾಗೆ 8.50 ಕೋಟಿ ರೂ, ಕರ್ನಾಟಕ ಸಂಭ್ರಮ-50ಕ್ಕೆ 5 ಕೋಟಿ ರೂ. ಮತ್ತು 86ನೇ ಸಾಹಿತ್ಯ ಸಮ್ಮೇಳನದ ಬಾಕಿ ಬಿಲ್ ಪಾವತಿಗೆ 4.66 ಲಕ್ಷ ರೂ. ಪೂರಕ ಅಂದಾಜು ಮಂಡನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 pm, Mon, 11 December 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ