AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ಸಾವಿರ ಕೋಟಿ ರೂ. ಅಕ್ರಮವೆಂದ್ರೆ ನಂಬಲು ಸಾಧ್ಯವೇ? ಯತ್ನಾಳ್​ ಆರೋಪ ತಳ್ಳಿಹಾಕಿದ ಕುಮಾರಸ್ವಾಮಿ

ಬಿಜೆಪಿ ಅವಧಿಯಲ್ಲಿ ಅಕ್ರಮ ನಡೆದೇ ಇಲ್ಲ ಅಂತಾ ಹೇಳುವುದಿಲ್ಲ. 40 ಸಾವಿರ ಕೋಟಿ ರೂ. ಅಕ್ರಮ ಅಂದರೆ ನಂಬಲು ಸಾಧ್ಯವೇ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಆರೋಪಿವನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಯತ್ನಾಳ್ ಆರೋಪದ ಬಗ್ಗೆ ವಾಸ್ತವಾಂಶ ಪರಿಶೀಲನೆ ಮಾಡಬೇಕಲ್ವಾ ಎಂದು ಹೇಳಿದ್ದಾರೆ.   

40 ಸಾವಿರ ಕೋಟಿ ರೂ. ಅಕ್ರಮವೆಂದ್ರೆ ನಂಬಲು ಸಾಧ್ಯವೇ? ಯತ್ನಾಳ್​ ಆರೋಪ ತಳ್ಳಿಹಾಕಿದ ಕುಮಾರಸ್ವಾಮಿ
ಜೆಡಿಎಸ್​ ರಾಜ್ಯಾಧ್ಯಕ್ಷ H​.D.ಕುಮಾರಸ್ವಾಮಿ, ಶಾಸಕ ಯತ್ನಾಳ್
ಕಿರಣ್​ ಹನಿಯಡ್ಕ
| Edited By: |

Updated on: Dec 30, 2023 | 3:10 PM

Share

ಬೆಂಗಳೂರು, ಡಿಸೆಂಬರ್​​ 30: ನಾವು ಈಗ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. 40 ಸಾವಿರ ಕೋಟಿ ರೂ. ಅವ್ಯವಹಾರ ಅಂತಾ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಆರೋಪಿಸಿದ್ದರು. ಇದನ್ನು ಯಾರಾದರೂ ನಂಬುವುದಕ್ಕೆ ಆಗುತ್ತಾ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy)  ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಅಕ್ರಮ ನಡೆದೇ ಇಲ್ಲ ಅಂತಾ ಹೇಳುವುದಿಲ್ಲ. 40 ಸಾವಿರ ಕೋಟಿ ರೂ. ಅಕ್ರಮ ಅಂದರೆ ನಂಬಲು ಸಾಧ್ಯವೇ ಎಂದಿದ್ದಾರೆ.

ಎಷ್ಟು ಅಕ್ರಮ ಆಗಿದೆ ಅಂತಾ ನನಗೆ ಗೊತ್ತಿಲ್ಲ. ಯತ್ನಾಳ್ ಆರೋಪದ ಬಗ್ಗೆ ವಾಸ್ತವಾಂಶ ಪರಿಶೀಲನೆ ಮಾಡಬೇಕಲ್ವಾ? ಶಾಸಕ ಯತ್ನಾಳ್​ ವಿರುದ್ಧದ ಕ್ರಮದ ಬಗ್ಗೆ ನಾನೇನು ಹೇಳುವುದಿಲ್ಲ. ಯತ್ನಾಳ್ ಹೇಳಿಕೆ ನಿಜಾಂಶವಲ್ಲ ಅದಕ್ಕೆ ಉತ್ತರಿಸಬೇಕಿಲ್ಲ ಅಂತಾ ಬಿಜೆಪಿ ನಾಯಕರು ಸುಮ್ಮನಾಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆ ಗೆಲ್ಲಲು ಜಾತಿಗೊಂದು ಡಿಸಿಎಂ ಗುಂಗಿನಲ್ಲಿದ್ದಾರೆ: ಕಾಂಗ್ರೆಸ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ನಾನು ಯಾರನ್ನೂ ರಕ್ಷಣೆ ಮಾಡಲು ಹೇಳಿಕೆ ನೀಡುತ್ತಿಲ್ಲ. ಜಯಚಂದ್ರ ನೇತೃತ್ವದಲ್ಲಿ ವರದಿಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಪ್ರತಿದಿನ ಗಂಧದ ಕಡ್ಡಿ ಹಚ್ಚಿ ಪೂಜೆ ಮಾಡುತ್ತಿದ್ದಾರಾ ಎಂದು ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿಯಲ್ಲಿರುವ ಕೆಲವು ಭಿನ್ನಾಭಿಪ್ರಾಯ ಕಾರಣಕ್ಕೆ ಯತ್ನಾಳ್ ಹೇಳಿಕೆಗೆ ಮಹತ್ವ ಕೊಡಬೇಕಾಗಿಲ್ಲ.ಬಿಜೆಪಿ ಹಾಗೂ ಎನ್​ಡಿಎ ಪರವಾಗಿ ಈಗ ನಾನೇ ಹೇಳುತ್ತಿದ್ದೇನೆ ಎಂದರು.

ಸಂಕ್ರಾಂತಿ ಹಬ್ಬದ ಬಳಿಕ ಸಂತೋಷವಾಗುವ ಸುದ್ದಿಯನ್ನೇ ಕೊಡ್ತೇನೆ

ಸಂಕ್ರಾಂತಿ ಹಬ್ಬದ ಬಳಿಕ ಸಂತೋಷವಾಗುವ ಸುದ್ದಿಯನ್ನೇ ಕೊಡುತ್ತೇನೆ. ಸೀಟು ಹಂಚಿಕೆ ಸೇರಿ ಎಲ್ಲದರ ಬಗ್ಗೆ ನಿಮಗೆಲ್ಲರಿಗೂ ಸಂತೋಷವಾಗುವ ಸುದ್ದಿಯನ್ನೇ ಕೊಡುತ್ತೇನೆ ಎಂದು ಹೇಳಿದ್ದಾರೆ.

ಮತಕ್ಕೋಸ್ಕರ ತಾತ್ಕಾಲಿಕ ಘೋಷಣೆ: ಯಾವುದೂ ಅನುಷ್ಠಾನಕ್ಕೆ ಬರಲ್ಲ

ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲು ಆದೇಶ ವಿಚಾರವಾಗಿ ಮಾತನಾಡಿದ ಅವರು, ಅವರನ್ನು ಸಂತುಷ್ಟಗೊಳಿಸಲು ಹೇಳಿದ್ದಾರೆಯೇ ಹೊರತು ಅವರ ಅಭಿವೃದ್ಧಿಗೋಸ್ಕರ ಅಲ್ಲ. ಯಾವಾಗ ಹಿಜಾಬ್ ವಾಪಸ್ ಹೇಳಿಕೆಗೆ ಟೀಕೆ ಶುರುವಾಯ್ತೋ 24 ಗಂಟೆಯಲ್ಲಿ ಮಾತು ವಾಪಸ್ ಪಡೆದರು. ಮತಕ್ಕೋಸ್ಕರ, ಕೆಲವರನ್ನು ಖುಷಿಪಡಿಸಲು ತಾತ್ಕಾಲಿಕ ಘೋಷಣೆ ಮಾಡುತ್ತಾರೆ. ಇದು ಯಾವುದೂ ಅನುಷ್ಠಾನಕ್ಕೆ ಬರಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಮಾಜ ಒಡೆದು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ: ಪರೋಕ್ಷವಾಗಿ ಯತ್ನಾಳ್ ವಿರುದ್ಧ ಗುಡುಗಿದ ವಿಜಯೇಂದ್ರ

ಎಲ್ಲಿದೆ ಇವರ ಹತ್ತಿರ ದುಡ್ಡು? ಮುಸ್ಲಿಂ ಸಮುದಾಯಕ್ಕೆ ಹತ್ತು ಸಾವಿರ ಕೋಟಿ ರೂ. ಕೊಟ್ಟಾಯ್ತಾ ಇವರು? ಹಿಜಾಬ್ ವಿಷಯದಲ್ಲಿ ಆ ರೀತಿ ನಡೆದುಕೊಂಡವರು ನಮಗೆ ರಕ್ಷಣೆ ಕೊಡ್ತಾರಾ ಅಂತಾ ಮುಸ್ಲಿಂ ಸಮುದಾಯ ಅರ್ಥ ಮಾಡಿಕೊಳ್ಳಬೇಕು. 10 ಸಾವಿರ ಕೋಟಿ ರೂ. ಕೊಡ್ತೀನಿ ಅಂತಾ ಹೇಳಿರುವುದು ಅವರ ಹಿಂದೆ ಇರುವವರ ಉದ್ದಾರಕ್ಕೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ