AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಸ್ಫೋಟ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ರಾಜೀನಾಮೆ ನೀಡುವುದಾಗಿ ಐವರು ಶಾಸಕರು ಬೆದರಿಕೆ

ಸಚಿವ ಕೆ.ಹೆಚ್​​.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಸ್ಫೋಟ: ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ರಾಜೀನಾಮೆ ನೀಡುವುದಾಗಿ ಐವರು ಶಾಸಕರು ಬೆದರಿಕೆ
ಕೊತ್ತೂರು ಮಂಜುನಾಥ್​​
TV9 Web
| Edited By: |

Updated on:Mar 27, 2024 | 12:03 PM

Share

ಕೋಲಾರ, ಮಾರ್ಚ್​ 27: ಕೋಲಾರ ಲೋಕಸಭಾ (Kolar Lok sabha Constituency) ಕ್ಷೇತ್ರದ ಕಾಂಗ್ರೆಸ್​ ಟಿಕೆಟ್ ಇನ್ನಷ್ಟು ಕಗ್ಗಂಟಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಂಧಾನ ಸಭೆ ನಡೆಸಿದರೂ, ನಾಯಕರ ನಡುವಿನ ಭಿನ್ನಮತ ಶಮನವಾಗಿಲ್ಲ. ಸಚಿವ ಕೆ.ಹೆಚ್​​.ಮುನಿಯಪ್ಪ (KH Muniyappa) ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್ ಬೆದರಿಕೆ ಹಾಕಿದ್ದಾರೆ. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆ.ಹೆಚ್​.ಮುನಿಯಪ್ಪ ಕುಟುಂಬ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್​ ನೀಡಿದರೇ ಮಾಲೂರು ಶಾಸಕ ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಕಾಂಗ್ರೆಸ್​​​ ಸದಸ್ಯ ಅನಿಲ್ ಕುಮಾರ್, ನಜೀರ್ ಅಹ್ಮದ್​​ ರಾಜೀನಾಮೆ ನೀಡುತ್ತೇವೆ ಎಂದರು.

12 ಗಂಟೆಗೆ ಸುಮಾರಿಗೆ ಸಭಾಪತಿಗೆ ಕಚೇರಿಗೆ ಭೇಟಿ ನೀಡಿ, ರಾಜಿನಾಮೆ ಪತ್ರ ನೀಡುತ್ತೇವೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ಸಭಾಪತಿಗಳನ್ನು ಭೇಟಿ ಮಾಡಲಿದ್ದೇವೆ ಎಂದರು.

ಇದನ್ನೂ ಓದಿ: ಸಂಧಾನ ಸಭೆಯಲ್ಲಿ ಸಿಎಂ, ಡಿಸಿಎಂ ಎದುರು ರಮೇಶ್ ಕುಮಾರ್, ಮುನಿಯಪ್ಪ ನಡುವೆ ಮಾತಿನ ಚಕಮಕಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ನಮ್ಮ ಬಣಕ್ಕೆ ಟಿಕೆಟ್ ನೀಡುವಂತೆ ಮಾಡಿದ್ದೇವೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪಕ್ಷ ಗೆಲ್ಲಿಸುವ ಜವಾಬ್ದಾರಿ ನಮ್ದು. ಹೈಕಮಾಂಡ್​ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧವಾಗಿದ್ದೇವೆ. ನಾನು, ರಮೇಶ್​​ಕುಮಾರ್ ಸೇರಿ ಒಟ್ಟಿಗೆ ಕೆಲಸ ಮಾಡುವುದಾಗಿ ಹೇಳಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:38 am, Wed, 27 March 24

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!